ಬ್ರೇಕಿಂಗ್ ನ್ಯೂಸ್
04-11-25 04:38 pm Bangalore Correspondent ಕರ್ನಾಟಕ
ಬೆಂಗಳೂರು, ನ.4 : ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಾಜಿ ಸಚಿವ, ಬಾಗಲಕೋಟೆ ಕ್ಷೇತ್ರದ ಹಾಲಿ ಶಾಸಕ ಹೆಚ್.ವೈ ಮೇಟಿ (79) ನಿಧನ ಹೊಂದಿದ್ದಾರೆ.
ಹೆಚ್.ವೈ. ಮೇಟಿ ( ಹುಲ್ಲಪ್ಪ ಯಮನಪ್ಪ ಮೇಟಿ) 2023ರ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ವೀರಣ್ಣ ಚರಂತಿಮಠ ಅವರನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿದ್ದ ಮೇಟಿ 2018ರ ಚುನಾವಣೆಯಲ್ಲಿ ಸೋತಿದ್ದರು. 2013 ರಿಂದ 2016 ರವರೆಗಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಹೆಚ್.ವೈ.ಮೇಟಿ ಅಬಕಾರಿ ಖಾತೆ ಮಂತ್ರಿಯಾಗಿದ್ದರು. ಈ ವೇಳೆ ಲೈಂಗಿಕ ಹಗರಣದಲ್ಲಿ ಸಿಲುಕಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಬಾಗಲಕೋಟೆ ಡಿಸಿಸಿ ಬ್ಯಾಂಕ್ ನಿರ್ದೇಶಕರೂ ಆಗಿದ್ದ ಮೇಟಿ, 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1994ರಲ್ಲಿ ಗುಳೇದಗುಡ್ಡದಲ್ಲಿ ಜೆಡಿಎಸ್ನಿಂದ 2ನೇ ಬಾರಿ ಗೆಲುವು ಸಾಧಿಸಿ ದೇವೇಗೌಡರ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದರು. 1996ರಲ್ಲಿ ಬಾಗಲಕೋಟೆ ಕ್ಷೇತ್ರದ ಸಂಸದರಾಗಿದ್ದು, 2004ರಲ್ಲಿ ಮತ್ತೆ ಗುಳೇದಗುಡ್ಡ ಕ್ಷೇತ್ರದಿಂದ ಶಾಸಕರಾಗಿ ಗೆದ್ದಿದ್ದರು. ಇತ್ತೀಚೆಗಷ್ಟೇ ಹೆಚ್.ವೈ.ಮೇಟಿ ಅವರನ್ನ ಖಾಸಗಿ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಇಂದು ಅವರ ಪಾರ್ಥಿವ ಶರೀರದ ದರ್ಶನ ಮಾಡಿದ್ದಾರೆ.
ಹೆಚ್.ವೈ. ಮೇಟಿ ಅವರ ಅಂತ್ಯಕ್ರಿಯೆ ಹುಟ್ಟೂರು ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ ಬುಧವಾರ(ನಾಳೆ) ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಪಕ್ಷದ ಪ್ರಮುಖರು ಈ ವೇಳೆ ಭಾಗಿಯಾಗಲಿದ್ದಾರೆ.
Senior Congress leader and former Karnataka minister H.Y. Meti (79) passed away at a private hospital in Jayanagar, Bengaluru, following a prolonged illness.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am