ಬ್ರೇಕಿಂಗ್ ನ್ಯೂಸ್
04-11-25 04:38 pm Bangalore Correspondent ಕರ್ನಾಟಕ
ಬೆಂಗಳೂರು, ನ.4 : ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಾಜಿ ಸಚಿವ, ಬಾಗಲಕೋಟೆ ಕ್ಷೇತ್ರದ ಹಾಲಿ ಶಾಸಕ ಹೆಚ್.ವೈ ಮೇಟಿ (79) ನಿಧನ ಹೊಂದಿದ್ದಾರೆ.
ಹೆಚ್.ವೈ. ಮೇಟಿ ( ಹುಲ್ಲಪ್ಪ ಯಮನಪ್ಪ ಮೇಟಿ) 2023ರ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ವೀರಣ್ಣ ಚರಂತಿಮಠ ಅವರನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿದ್ದ ಮೇಟಿ 2018ರ ಚುನಾವಣೆಯಲ್ಲಿ ಸೋತಿದ್ದರು. 2013 ರಿಂದ 2016 ರವರೆಗಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಹೆಚ್.ವೈ.ಮೇಟಿ ಅಬಕಾರಿ ಖಾತೆ ಮಂತ್ರಿಯಾಗಿದ್ದರು. ಈ ವೇಳೆ ಲೈಂಗಿಕ ಹಗರಣದಲ್ಲಿ ಸಿಲುಕಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಬಾಗಲಕೋಟೆ ಡಿಸಿಸಿ ಬ್ಯಾಂಕ್ ನಿರ್ದೇಶಕರೂ ಆಗಿದ್ದ ಮೇಟಿ, 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1994ರಲ್ಲಿ ಗುಳೇದಗುಡ್ಡದಲ್ಲಿ ಜೆಡಿಎಸ್ನಿಂದ 2ನೇ ಬಾರಿ ಗೆಲುವು ಸಾಧಿಸಿ ದೇವೇಗೌಡರ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದರು. 1996ರಲ್ಲಿ ಬಾಗಲಕೋಟೆ ಕ್ಷೇತ್ರದ ಸಂಸದರಾಗಿದ್ದು, 2004ರಲ್ಲಿ ಮತ್ತೆ ಗುಳೇದಗುಡ್ಡ ಕ್ಷೇತ್ರದಿಂದ ಶಾಸಕರಾಗಿ ಗೆದ್ದಿದ್ದರು. ಇತ್ತೀಚೆಗಷ್ಟೇ ಹೆಚ್.ವೈ.ಮೇಟಿ ಅವರನ್ನ ಖಾಸಗಿ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಇಂದು ಅವರ ಪಾರ್ಥಿವ ಶರೀರದ ದರ್ಶನ ಮಾಡಿದ್ದಾರೆ.
ಹೆಚ್.ವೈ. ಮೇಟಿ ಅವರ ಅಂತ್ಯಕ್ರಿಯೆ ಹುಟ್ಟೂರು ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ ಬುಧವಾರ(ನಾಳೆ) ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಪಕ್ಷದ ಪ್ರಮುಖರು ಈ ವೇಳೆ ಭಾಗಿಯಾಗಲಿದ್ದಾರೆ.
Senior Congress leader and former Karnataka minister H.Y. Meti (79) passed away at a private hospital in Jayanagar, Bengaluru, following a prolonged illness.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 07:17 pm
HK News Staffer
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm