ಬ್ರೇಕಿಂಗ್ ನ್ಯೂಸ್
06-11-25 03:06 pm Bangalore Correspondent ಕರ್ನಾಟಕ
ಬೆಂಗಳೂರು, ನ.6 : ಹೆಸರಾಂತ ಪೋಷಕ ನಟ, ಕನ್ನಡ ಚಿತ್ರಗಳಲ್ಲಿ ವಿಲನ್ ಪಾತ್ರಗಳ ಮೂಲಕ ಮಿಂಚಿದ್ದ ಹಿರಿಯ ನಟ ಹರೀಶ್ ರಾಯ್(55) ಥೈರಾಯ್ಡ್ ಕ್ಯಾನ್ಸರ್ನಿಂದಾಗಿ ಕಿದ್ವಾಯಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
90ರ ದಶಕದಿಂದಲೂ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಉಡುಪಿ ಮೂಲದ ಹರೀಶ್ ರಾಯ್, ಶಿವರಾಜ್ ಕುಮಾರ್ ನಟನೆಯ ಓಂ ಚಿತ್ರದಲ್ಲಿ ಡಾನ್ ಆಗಿ, ಕೆಜಿಎಫ್ ಚಿತ್ರದಲ್ಲಿ ಚಾಚಾನಾಗಿ ಹೆಸರು ಮಾಡಿದ್ದರು. ಇತ್ತೀಚೆಗೆ ಕೆಲವು ವರ್ಷಗಳಿಂದ ಥೈರಾಯ್ಡ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಹರೀಶ್ ರಾಯ್ ಚಿಕಿತ್ಸೆಗೆ ಶಿವಣ್ಣ, ಯಶ್ ಸೇರಿದಂತೆ ಅನೇಕರು ಆರ್ಥಿಕ ನೆರವು ನೀಡಿದ್ದರು. ಕೊನೆಗೂ ಕ್ಯಾನ್ಸರ್ ವಿರುದ್ಧ ಗೆಲ್ಲಲು ಹರೀಶ್ ರಾಯ್ ಅವರಿಗೆ ಸಾಧ್ಯವಾಗಲಿಲ್ಲ.


90 ರ ದಶಕದಲ್ಲಿ ಕನ್ನಡ, ತಮಿಳಿನ ಹಲವು ಸಿನಿಮಾಗಳಲ್ಲಿ ಖಳ ನಾಯಕನ ಪಾತ್ರದಲ್ಲಿ ಹರೀಶ್ ರಾಯ್ ನಟಿಸಿದ್ದರು. ರಾಜ್ ಬಹದ್ದೂರ್, ನನ್ನ ಕನಸಿನ ಹೂವೆ, ಮೀಂದುಮ್ ಒರು ಕಾದಲ್ ಕಥೈ, ಜೋಡಿ ಹಕ್ಕಿ, ತಾಯವ್ವ, ಅಂಡರ್ ವರ್ಲ್ಡ್, ನಲ್ಲ, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ ಸೇರಿದಂತೆ ಕನ್ನಡ ಮತ್ತು ತಮಿಳು ಸಿನಿಮಾಗಳಲ್ಲಿ ನಟಿಸಿದ್ದರು. ಹರೀಶ್ ರಾಯ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಕ್ಯಾನ್ಸರ್ ವಿರುದ್ಧ ಹೋರಾಡಲು ಅವರಿಗೆ ದುಬಾರಿ ಬೆಲೆಯ 17 ಇಂಜೆಕ್ಷನ್ಗಳ ಅವಶ್ಯಕತೆ ಇತ್ತು. ಅದಕ್ಕಾಗಿ ಸುಮಾರು 70 ಲಕ್ಷಕ್ಕೂ ಅಧಿಕ ರೂ. ಅಗತ್ಯವಿತ್ತು ಎನ್ನಲಾಗಿತ್ತು. ಒಂದು ಇಂಜೆಕ್ಷನ್ ಬೆಲೆ 3.50 ಲಕ್ಷ ರೂ. ಎಂದೂ ಹೇಳಲಾಗಿತ್ತು. ಅವರಿಗೆ ಇತ್ತೀಚೆಗೆ ಒಂದು ಇಂಜೆಕ್ಷನ್ ನೀಡಲಾಗಿತ್ತು. ಆದರೆ ಇಂಜೆಕ್ಷನ್ಗೆ ಅವರ ದೇಹ ಸಹಕರಿಸದೇ ಇದ್ದುದರಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ನಿಶ್ಯಕ್ತಿಯಿಂದ ಬಳಲುತ್ತಿದ್ದ ಅವರನ್ನ ಐಸಿಯುನಲ್ಲಿರಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
Veteran Kannada actor Harish Rai (55), who gained fame for his villainous roles in films like Om and KGF, passed away in Bengaluru after battling thyroid cancer. The actor was undergoing treatment at Kidwai Memorial Institute of Oncology.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm