ಬ್ರೇಕಿಂಗ್ ನ್ಯೂಸ್
08-11-25 12:38 pm HK News Desk ಕರ್ನಾಟಕ
ಕಲಬುರಗಿ, ನ.8: ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ಪಥಸಂಚಲನ ನಡೆಸಲು ಅರ್ಜಿ ಸಲ್ಲಿಸಿರುವ ಆರ್ಎಸ್ಎಸ್ ಸೇರಿದಂತೆ ವಿವಿಧ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕಗಳನ್ನು ನಿಗದಿಪಡಿಸುವಂತೆ ಕರ್ನಾಟಕ ಹೈಕೋರ್ಟ್ ಕಲಬುರ್ಗಿ ಪೀಠ ಜಿಲ್ಲಾಡಳಿತಕ್ಕೆ ಸೂಚಿಸಿದೆ.
ಆರ್ ಎಸ್ಎಸ್ ಸೇರಿದಂತೆ ವಿವಿಧ ಸಂಘಟನೆಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ. ಶುಕುರೆ ಕಮಲ್ ಅವರು, ಕಲಬುರಗಿ ಜಿಲ್ಲಾಡಳಿತ ವಿವಿಧ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕಗಳನ್ನು ನಿಗದಿಪಡಿಸಿ ಸಮಸ್ಯೆ ಶಾಂತಿಯುತ ಇತ್ಯರ್ಥಕ್ಕೆ ಸೂಚಿಸಿದ್ದಾರೆ. ಒಂದು ವೇಳೆ ವಿಫಲವಾದರೆ, ನ್ಯಾಯಾಲಯವೇ ದಿನಾಂಕವನ್ನು ನಿಗದಿಪಡಿಸುತ್ತದೆ ಎಂದು ಹೇಳಿ, ವಿಚಾರಣೆಯನ್ನು ನವೆಂಬರ್ 13ಕ್ಕೆ ಮುಂದೂಡಿದ್ದಾರೆ. ಅಲ್ಲದೆ, ಅಂದು ನ್ಯಾಯಾಲಯಕ್ಕೆ ದಿನ ನಿಗದಿಪಡಿಸಿದ ವಿವರಗಳೊಂದಿಗೆ ಬರುವಂತೆ ನಿರ್ದೇಶಿಸಿದ್ದಾರೆ.
ಚಿತ್ತಾಪುರದಲ್ಲಿ ಆರ್ಎಸ್ಎಸ್ಗೆ ಪಥ ಸಂಚಲನ ನಡೆಸಲು ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ, ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, ಚಿತ್ತಾಪುರದಲ್ಲಿ ರೂಟ್ ಮಾರ್ಚ್ ನಡೆಸಲು ಕಲಬುರ್ಗಿ ಜಿಲ್ಲಾಡಳಿತಕ್ಕೆ 11 ಅರ್ಜಿಗಳು ಬಂದಿವೆ ಮತ್ತು ಹೆಚ್ಚಿನ ಸಂಘಟನೆಗಳು ಆರ್ಎಸ್ಎಸ್ ಪಥ ಸಂಚಲನ ನಡೆಸುವ ದಿನದಂದೇ ಅನುಮತಿ ಕೇಳಿವೆ ಎಂದರು.
ಜಿಲ್ಲಾಡಳಿತವು ಈ ಸಂಘಟನೆಗಳಿಗೆ ಬೇರೆ ಬೇರೆ ದಿನಾಂಕಗಳನ್ನು ನೀಡುತ್ತದೆ. ಒಂದು ವಾರದೊಳಗೆ ಜಿಲ್ಲಾಡಳಿತವು ವಿವಿಧ ಸಂಸ್ಥೆಗಳಿಗೆ ರೂಟ್ ಮಾರ್ಚ್ ನಡೆಸುವ ದಿನಾಂಕಗಳನ್ನು ನಿಗದಿಪಡಿಸಲಿದೆ. ವರದಿಯನ್ನು ಸಲ್ಲಿಸಲು ಒಂದು ವಾರದ ಸಮಯ ನೀಡುವಂತೆ ಅಡ್ವೊಕೇಟ್ ಜನರಲ್ ಕೇಳಿಕೊಂಡರು. ಆರ್ಎಸ್ಎಸ್ ಪರವಾಗಿ ವಾದಿಸಿದ ವಕೀಲ ಅರುಣ್ ಶ್ಯಾಮ್, ನವೆಂಬರ್ 13 ಅಥವಾ 16 ರಂದು ಆರ್ಎಸ್ಎಸ್ ಪಥ ಸಂಚಲನ ನಡೆಸಲು ಅವಕಾಶ ನೀಡಬೇಕೆಂದು ನ್ಯಾಯಾಲಯವನ್ನು ಕೋರಿದರು.
The Karnataka High Court, Kalaburagi Bench, has directed the Kalaburagi district administration to allocate separate dates for different organizations, including the RSS, that have applied to conduct route marches (patha sanchalans) in Chittapur town.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am