ಬ್ರೇಕಿಂಗ್ ನ್ಯೂಸ್
09-11-25 03:47 pm Bangalore Correspondent ಕರ್ನಾಟಕ
ಬೆಂಗಳೂರು, ನ.9 : ಎಂಪ್ಲಾಯೀಸ್ ಪ್ರಾವಿಡೆಂಟ್ ಫಂಡ್ (ಇಪಿಎಫ್) ಕೋ ಆಪರೇಟಿವ್ ಸೊಸೈಟಿಯಲ್ಲಿ 70 ಕೋಟಿ ರೂ. ದುರ್ಬಳಕೆ ನಡೆದಿರುವ ಪ್ರಕರಣದಲ್ಲಿ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಸೊಸೈಟಿ ಅಕೌಂಟೆಂಟ್ ಲಕ್ಷ್ಮಿ ಜಗದೀಶ್ ಮನೆಯಲ್ಲಿ ಅರ್ಧ ಕೆ.ಜಿ.ಗೂ ಅಧಿಕ ಚಿನ್ನ, ಆಸ್ತಿ ಪತ್ರಗಳನ್ನು ಜಪ್ತಿ ಮಾಡಿದ್ದಾರೆ.
ಬಂಧಿತ ಆರೋಪಿಗಳಾದ ಸೊಸೈಟಿಯ ಸಿಇಒ ಜಿ. ಗೋಪಿನಾಥ್, ಲೆಕ್ಕಾಧಿಕಾರಿ ಬಿ.ಎಲ್. ಜಗದೀಶ್, ಪತ್ನಿ ಲಕ್ಷ್ಮಿ ಜಗದೀಶ್ ಅವರ ನಿವಾಸಗಳು ಹಾಗೂ ಕಚೇರಿಗಳಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ.
ಶೋಧದ ವೇಳೆ ಸುಮಾರು ಅರ್ಧ ಕೆಜಿ ಚಿನ್ನಾಭರಣ, ಥಾರ್ ಜೀಪು, ಬಿಎಂಡಬ್ಲ್ಯು ಸೇರಿ ಐಷಾರಾಮಿ ಕಾರುಗಳು, ದುಬಾರಿ ಮೌಲ್ಯದ ಬೈಕ್ಗಳು ಪತ್ತೆಯಾಗಿದ್ದು, ಅವುಗಳನ್ನು ವಶಪಡಿಸಲಾಗಿದೆ. ಜತೆಗೆ, ಭೂಮಿ ಖರೀದಿಯ ದಾಖಲೆಗಳು ಸಿಕ್ಕಿವೆ. ಆರೋಪಿಗಳು ಅಕ್ರಮವಾಗಿ ಹಣವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿರುವುದು ಪತ್ತೆಯಾಗಿದೆ.
ಸಹಕಾರ ಸಂಘದ ಕಚೇರಿಯಲ್ಲಿ ಪೊಲೀಸರು ಮಹಜರು ನಡೆಸಿ, ತನಿಖೆಗೆ ಅಗತ್ಯವಿರುವ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ರಾಜರಾಜೇಶ್ವರಿನಗರ, ಜೆ.ಪಿ. ನಗರ ಮತ್ತು ಅಂಜನಾಪುರದಲ್ಲಿರುವ ಆರೋಪಿಗಳಾದ ಸಿಇಒ ಜಿ. ಗೋಪಿನಾಥ್, ಲಕ್ಷ್ಮಿ ಆರ್., ಆರೋಪಿ ನಂಬರ್ 9 ಲಿಂಗೇಗೌಡ ಮತ್ತು ಆರೋಪಿ ನಂಬರ್ 10 ರಮಾನುಜ ಅವರ ಮನೆಗಳಲ್ಲೂ ಶೋಧ ನಡೆಸಲಾಗಿದೆ.
ಅವ್ಯವಹಾರದ ಬಗ್ಗೆ ಸಂಘದ ಅಧ್ಯಕ್ಷ ಸಿ.ಜೆ. ಮುರಳೀಧರ್ ಅವರು ಕಳೆದ ವಾರ ದೂರು ಸಲ್ಲಿಸಿದ್ದರು. ಸುಮಾರು 300 ನೌಕರರು ಮತ್ತು ನಿವೃತ್ತ ನೌಕರರು ಠೇವಣಿ ಇಟ್ಟಿದ್ದ 70 ಕೋಟಿ ರೂಪಾಯಿಗಳನ್ನು ದುರುಪಯೋಗಪಡಿಸಲಾಗಿದೆ ಎಂದು ಅವರು ಆರೋಪಿಸಿದ್ದು ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In connection with the ₹70 crore embezzlement case in the Employees’ Provident Fund (EPF) Cooperative Society, the Cubbon Park Police have seized over half a kilogram of gold ornaments and property documents from the residence of the society’s accountant, Lakshmi Jagadish.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 07:17 pm
HK News Staffer
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm