ಬ್ರೇಕಿಂಗ್ ನ್ಯೂಸ್
16-11-25 09:15 pm HK News Desk ಕರ್ನಾಟಕ
ಕಲಬುರಗಿ, ನ.16 : ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಚಿತ್ತಾಪುರ ಆರ್ಎಸ್ಎಸ್ ಪಥಸಂಚಲನ ಕೊನೆಗೂ ಇಂದು ಯಶಸ್ವಿಯಾಗಿ ನಡೆದಿದೆ. ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತವರಿನಲ್ಲಿ ಭಗವಾಧ್ವಜ ಹಾರಿಸಿ ಆರ್ಎಸ್ಎಸ್ ಕಾರ್ಯಕರ್ತರು ಒಂದೂವರೆ ಕಿಮೀ ರಸ್ತೆಯುದ್ದಕ್ಕು ಹೆಜ್ಜೆ ಹಾಕಿದರು.
ಚಿತ್ತಾಪುರದ ಬಜಾಜ್ ಕಲ್ಯಾಣ ಮಂಟಪದಿಂದ ಆರಂಭವಾಗಿ ಅಂಬೇಡ್ಕರ್ ಸರ್ಕಲ್, ಬಸವ ಆಸ್ಪತ್ರೆ, ಎಚ್ಡಿಎಫ್ಸಿ ಬ್ಯಾಂಕ್ ರಸ್ತೆ, ಬಸವೇಶ್ವರ ಸರ್ಕಲ್ ಮೂಲಕ ಸಾಗಿ ಬಜಾಜ್ ಕಲ್ಯಾಣ ಮಂಟಪದಲ್ಲಿ ಪಥಸಂಚಲನ ಮುಕ್ತಾಯವಾಯಿತು. ಹೈಕೋರ್ಟ್ ಆದೇಶದಂತೆ 300 ಜನ ಗಣವೇಷಧಾರಿಗಳು ಹಾಗೂ 50 ಜನ ಬ್ಯಾಂಡ್ ವಾದಕರಿಗೆ ಮಾತ್ರ ಅವಕಾಶ ನೀಡಲಾಗಿತ್ತು.



ಗಣವೇಷಧಾರಿಗಳಿಗೆ ಮಹಿಳೆಯರು, ಮಕ್ಕಳು, ಸಾರ್ವಜನಿಕರು ಪುಷ್ಪಾರ್ಚನೆ ಮಾಡಿ ಭವ್ಯ ಸ್ವಾಗತ ನೀಡಿದರು. ರಸ್ತೆಯ ಎರಡೂ ಬದಿಯಲ್ಲಿ ನಿಂತು ಗಣವೇಷಧಾರಿಗಳ ಮೇಲೆ ಹೂವಿನ ಮಳೆ ಸುರಿಸಿದರು. ಮಧ್ಯಾಹ್ನ 3:45ಕ್ಕೆ ಆರಂಭವಾದ ಪಥ ಸಂಚಲನ 4:22ಕ್ಕೆ ಕೊನೆಗೊಂಡಿತು. ಸುಮಾರು 47 ನಿಮಿಷ ಕಾಲ ಒಟ್ಟು 1.25 ಕಿ.ಮೀ ಉದ್ದಕ್ಕೆ ಮಾರ್ಚ್ ನಡೆಯಿತು.
ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದರು. ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ನೇತೃತ್ವದಲ್ಲಿ ಪೊಲೀಸ್ ಇನ್ಸ್ಪೆಕ್ಟರ್, ಕೆಎಸ್ಆರ್ಪಿ ಡಿಎಆರ್ ತುಕಡಿ ಸೇರಿದಂತೆ 650 ಪೋಲಿಸರು, 250 ಜನ ಹೋಮ್ ಗಾರ್ಡ್ ನಿಯೋಜನೆ ಮಾಡಲಾಗಿತ್ತು. ಪುರಸಭೆಯಿಂದ 12 ಹಾಗೂ ಪೋಲಿಸ್ ಇಲಾಖೆಯಿಂದ 44 ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿತ್ತು. 5 ಡ್ರೋಣ್ ಕ್ಯಾಮೆರಾ ಮೂಲಕ ಖಾಕಿ ಪಡೆ ಹದ್ದಿನ ಕಣ್ಣಿಟ್ಟಿತ್ತು. ಚಿತ್ತಾಪುರ ಹೊರತುಪಡಿಸಿ ಬೇರೆ ಕಡೆಯಿಂದ ಆಗಮಿಸಿದ ಕಾರ್ಯಕರ್ತರಿಗೆ ಪಥಸಂಚಲನದಲ್ಲಿ ಭಾಗಿಯಾಗಲು ಪೊಲೀಸರು ಅವಕಾಶ ನೀಡಲಿಲ್ಲ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕ ಖರ್ಗೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎನ್ನುವಂತೆ, ನಮ್ಮಿಂದಾಗಿ ಆರೆಸ್ಸೆಸ್ ಕಾನೂನು ಪ್ರಕಾರ ಅನುಮತಿ ಪಡೆದು ರೂಟ್ ಮಾರ್ಚ್ ನಡೆಸುವಂತಾಯ್ತು. ನೂರು ವರ್ಷದಲ್ಲಿ ಅವರು ಸಂವಿಧಾನ ಪಾಲಿಸಿರಲಿಲ್ಲ. ಈಗ ಕಾನೂನು ಪಾಲನೆ ಮಾಡ್ತಾ ಇದ್ದಾರೆ. ನಾವೇ ಪರ್ಮಿಶನ್ ಕೊಟ್ಟಿದ್ದು. ನಾವೇನು ಆರೆಸ್ಸೆಸ್ ಪಥಸಂಚಲನಕ್ಕೆ ವಿರೋಧ ಮಾಡಿರಲಿಲ್ಲ. ಸಂವಿಧಾನ ಪಾಲನೆ ಮಾಡಲಷ್ಟೇ ಹೇಳಿದ್ದೆವು ಎಂದು ಹೇಳಿ ತನ್ನ ನಡೆಯನ್ನು ಸಮರ್ಥನೆ ಮಾಡಿದ್ದಾರೆ.
The much-debated and highly controversial RSS route march in Chittapur, which had created political tremors across Karnataka, was finally conducted successfully today. In IT/BT Minister Priyank Kharge’s home turf, RSS workers marched for about 1.5 km holding saffron flags.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm