ಬ್ರೇಕಿಂಗ್ ನ್ಯೂಸ್
24-11-25 09:55 pm Bangalore Correspondent ಕರ್ನಾಟಕ
ಬೆಂಗಳೂರು, ನ.24 : ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ. ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರೂ, ನಾನು ಮತ್ತು ಡಿಕೆ ಶಿವಕುಮಾರ್ ಅದನ್ನು ಒಪ್ಪಿಕೊಳ್ಳಬೇಕು. ಹುದ್ದೆಯಲ್ಲಿ ಮುಂದುವರಿಯಬೇಕೆಂದು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದರೆ ನಾನು ಮುಂದುವರಿಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.
ನವೆಂಬರ್ 20 ರಂದು ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷವನ್ನು ತಲುಪಿದ ನಂತರ, ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ 'ಅಧಿಕಾರ ಹಂಚಿಕೆ' ಒಪ್ಪಂದದಂತೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎನ್ನುವ ವದಂತಿ ನಡುವೆ ಸಿದ್ದರಾಮಯ್ಯ ಈ ಮಾತು ಹೇಳಿದ್ದಾರೆ.
'ನಾವು ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ. ವರಿಷ್ಠರು ನಾನೇ ಇರಬೇಕೆಂದು ನಿರ್ಧರಿಸಿದರೆ, ನಾನು ಮುಂದುವರಿಯುತ್ತೇನೆ. ಅಂತಿಮವಾಗಿ, ಹೈಕಮಾಂಡ್ ಏನು ನಿರ್ಧರಿಸುತ್ತದೆಯೋ, ಅದನ್ನು ನಾವು ಒಪ್ಪಿಕೊಳ್ಳಬೇಕು. ಶಿವಕುಮಾರ್ ಕೂಡ ಒಪ್ಪಿಕೊಳ್ಳಬೇಕು' ಎಂದು ಸಿದ್ದರಾಮಯ್ಯ ಮಾರ್ಮಿಕ ಮಾತುಗಳನ್ನಾಡಿದ್ದಾರೆ.
ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆಯೇ ಎಂದು ಕೇಳಿದಾಗ, 'ಆ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದು ನಾನು ಹೇಳಿದರೂ, ನೀವು ಮತ್ತೆ ಅದೇ ವಿಷಯವನ್ನು ಏಕೆ ಕೇಳುತ್ತಿದ್ದೀರಿ ಎಂದು ಗರಂ ಆದರು. ನಾಲ್ಕೈದು ತಿಂಗಳ ಹಿಂದೆ, ಹೈಕಮಾಂಡ್ ಸಂಪುಟ ಪುನರ್ ರಚನೆಗೆ ಒಪ್ಪಿಗೆ ಸೂಚಿಸಿತ್ತು. ಆದರೆ, ಸರ್ಕಾರ 2.5 ವರ್ಷಗಳ ಅಧಿಕಾರ ಪೂರ್ಣಗೊಳಿಸಲಿ ಎಂದು ಸೂಚಿಸಿದ್ದರು ಎಂದ ಸಿಎಂ, 'ಈಗ ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನು ಅನುಸರಿಸುತ್ತೇವೆ ಎಂದು ಹೇಳಿದರು.
ಎರಡೂವರೆ ವರ್ಷಗಳಿಗೆ ಅಧಿಕಾರ ಹಂಚಿಕೆ ಒಪ್ಪಂದವಾಗಿತ್ತೇ ಎಂದು ಕೇಳಿದಾಗ, 'ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ' ಎಂದಷ್ಟೇ ಹೇಳಿದರು.
Chief Minister Siddaramaiah said on Monday that any decision regarding a change in leadership will be made by the Congress High Command. He added, “Whatever decision the High Command takes, both I and D.K. Shivakumar must accept it. If the High Command decides that I should continue in the post, I will continue.”
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am