ಬ್ರೇಕಿಂಗ್ ನ್ಯೂಸ್
27-11-25 12:49 pm Bangalore Correspondent ಕರ್ನಾಟಕ
ಬೆಂಗಳೂರು, ನ.27 : ನಾಯಕತ್ವ ಗೊಂದಲ ಬಗೆಹರಿಯಬೇಕಾದರೆ ವಿಧಾನಸಭೆ ವಿಸರ್ಜಿಸಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ, ಚುನಾವಣೆಯಲ್ಲಿ ಗೆದ್ದ ನಂತರ ಡಿಕೆ ಶಿವಕುಮಾರ್ 5 ವರ್ಷ ಮುಖ್ಯಮಂತ್ರಿಯಾಗಿರಲಿ ಎಂದು ಶಾಸಕ ಕೆ.ಎನ್.ರಾಜಣ್ಣ ನೇರ ಟಾಂಗ್ ಇಟ್ಟಿದ್ದಾರೆ.
ಚಿಕ್ಕನಾಯಕನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಬದಲಾವಣೆ ಮಾಡುವುದಿದ್ದರೆ ಸಿಎಲ್ಪಿ ಸಭೆಯಲ್ಲೇ ನಿರ್ಧಾರವಾಗಲಿ. ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಯಾರೂ ಹೇಳಿಲ್ಲ. 30–30 ತಿಂಗಳು ಅಧಿಕಾರ ಹಂಚಿಕೆ ಒಪ್ಪಂದವಾಗಿದೆ ಎಂದು ಸುಮ್ಮನೆ ಕೆಲವರು ಹೇಳುತ್ತಿದ್ದಾರೆ ಎಂದರು.
ನನ್ನದು ಸಿದ್ದರಾಮಯ್ಯ ಸಿಎಂ ಆಗಿರಬೇಕೆಂಬ ಅಭಿಪ್ರಾಯ. ಅನಿವಾರ್ಯತೆ ಬಂದರೆ ಪರಮೇಶ್ವರ್ ಸಿಎಂ ಆಗಲಿ. ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿರುವುದು ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್ ಪಿ) ಅಲ್ವಾ? ಈಗಲೂ ಸಿಎಲ್ ಪಿಯಲ್ಲಿ ತೀರ್ಮಾನ ಆಗಬೇಕು. ಸಿಎಲ್ ಪಿಯಲ್ಲು ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ಯಾರಾದರೂ ಕೇಳಿದ್ದಾರಾ ಎಂದು ಪ್ರಶ್ನಿಸಿದರು.
2013ರಲ್ಲಿ ಪರಮೇಶ್ವರ್ ಪಕ್ಷವನ್ನು ಅಧಿಕಾರಕ್ಕೆ ತಂದರೂ, ದುರದೃಷ್ಟವಶಾತ್ ಅವರು ಸೋತರು. ಇವರು (ಡಿಕೆ ಶಿವಕುಮಾರ್) ಈಗ ಕೂಲಿ ಕೇಳುವವರು. ಆದರೆ ಪರಮೇಶ್ವರ್ ಅವರದ್ದೂ ಕೂಲಿ ಇದೆಯಲ್ಲಾ? ಅವರದ್ದು ಹಳೆಯ ಕೂಲಿ, ಮೊದಲು ಅದು ಚುಕ್ತಾ ಆಗಲಿ. ಆಮೇಲೆ ಇವರ ವಿಚಾರ ನೋಡೋಣ ಎಂದರು.
ನಾಯಕತ್ವದ ಬಗ್ಗೆ ಮಾತನಾಡಬಾರದು ಎಂದು ಹೈಕಮಾಂಡ್ ಹೇಳಿದ್ದಾರೆ. ಅದಕ್ಕಾಗಿ ನಾನು ಮಾತನಾಡುವುದಿಲ್ಲ. ನನ್ನ ವೈಯಕ್ತಿಕ ಆಶಯ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರಬೇಕೆಂಬುದು. ಮುಂದೆ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲೇ ಚುನಾವಣೆ ಹೋಗೋಣ. ಆಗ ಬಹುಮತ ಪಡೆದು ಅವರೇ ಐದು ವರ್ಷ ಸಿಎಂ ಆಗಲಿ ಎಂದರು.
In the midst of growing leadership tensions in Karnataka Congress, MLA K.N. Rajanna has stirred fresh debate by suggesting that if leadership must change, the Assembly should be dissolved and elections should be held under DK Shivakumar’s leadership. He remarked that while DK Shivakumar is demanding his “turn,” G. Parameshwara also deserves his pending “dues” first.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 09:03 pm
HK News Staffer
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm