ಬ್ರೇಕಿಂಗ್ ನ್ಯೂಸ್
28-11-25 09:31 pm HK News Desk ಕರ್ನಾಟಕ
ಮೈಸೂರು, ನ.28 : ರಾಜ್ಯದಲ್ಲಿ ಕಳೆದ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಕಾರಣರು. ತಮ್ಮ ಬೆಂಬಲಿಗ ಶಾಸಕರನ್ನು ಬಿಜೆಪಿಗೆ ಕಳಿಸಿದ್ದು ಇದೇ ಸಿದ್ದರಾಮಯ್ಯ.
ಪರಿಣಾಮ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂತು. ಕಾಂಗ್ರೆಸ್ ನಿಂದ 14 ಮಂದಿ ಶಾಸಕರನ್ನು ಕಳುಹಿಸಿ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಮಾಡಿದ್ದೇ ಸಿದ್ದರಾಮಯ್ಯ. ಹೀಗೆಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹರಿಹಾಯ್ದಿದ್ದಾರೆ.
ಸಿದ್ದರಾಮಯ್ಯರನ್ನು ನಾವು ಕಾಂಗ್ರೆಸ್ ಕರೆತಂದಾಗ ಈ ದುರಹಂಕಾರಿಯನ್ನು ಏಕೆ ಕರೆ ತರುತ್ತಿದ್ದೀರಿ ಎಂದು ಹಲವಾರು ಮಂದಿ ನಾಯಕರು ನಮ್ಮನ್ನು ಕೇಳಿದ್ದರು. ಆದರೆ ಕಾಂಗ್ರೆಸ್ ಗೆ ಕರೆತಂದವರನ್ನೇ ಸಿದ್ದರಾಮಯ್ಯ ಮುಗಿಸಿದರು. ಸಿದ್ದರಾಮಯ್ಯ ಕಾಂಗ್ರೆಸ್ ಸೇರಲು ಡಿ.ಕೆ ಶಿವಕುಮಾರ್ ಪಾತ್ರ ಪ್ರಮುಖವಾಗಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ವಿಜಯೇಂದ್ರನನ್ನು ಗೆಲ್ಲಿಸುವ ಸಲುವಾಗಿ ಶಿಕಾರಿಪುರದಲ್ಲಿ ಕುರುಬ ಸಮುದಾಯದ ನಾಯಕನಿಗೆ ಟಿಕೆಟ್ ತಪ್ಪಿಸಿದ್ದೇ ಸಿದ್ದರಾಮಯ್ಯ. ಲೋಕಸಭಾ ಚುನಾವಣೆಯಲ್ಲಿ ನಾನು ಸೋಲಲು ಕೂಡ ಸಿದ್ದರಾಮಯ್ಯ ಕಾರಣ. ಪ್ರತಾಪ್ ಸಿಂಹಗೆ ನೆರವು ನೀಡಿ ನನ್ನ ಸೋಲಿಗೆ ಸಿದ್ದರಾಮಯ್ಯ ಕಾರಣ ಆದರು. 2013ರ ವಿಧಾನಸಭೆ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಲ್ಲಿ ಡಾ.ಜಿ. ಪರಮೇಶ್ವರ್ ಸೋಲಿಗೆ ಯಾರು ಕಾರಣ?ಪರಮೇಶ್ವರ್ ಸಿಎಂ ಆಗುವುದನ್ನು ತಪ್ಪಿಸಲು ಅವರ ಸೋಲಿಗೆ ಸಿದ್ದರಾಮಯ್ಯ ಕಾರಣರಾದರು. ಪರಮೇಶ್ವರ್ ಸೋಲಿಗೂ ಸಿದ್ದರಾಮಯ್ಯರೇ ಕಾರಣ.
ರಾಜಕೀಯವಾಗಿ ಬೆಳೆಸಿದ ಹೆಚ್.ಡಿ ದೇವೇಗೌಡರನ್ನು ಧಿಕ್ಕರಿಸಿದ ಸಿದ್ದರಾಮಯ್ಯಗೆ ಕೃತಜ್ಞತೆ ಇಲ್ಲ. ಸಿದ್ದರಾಮಯ್ಯ ಕೃತಜ್ಞತಾ ಹೀನವಾಗಿದ್ದಾರೆ. ದೇವರಾಜ ಅರಸು ಅವರಿಗೆ ಸಿದ್ದರಾಮಯ್ಯ ಸರಿಸಮವಾಗಲು ಎಂದಿಗೂ ಸಾಧ್ಯವಿಲ್ಲ. ದೇವರಾಜ ಅರಸು ಅವರು ನೀಡಿದ ಕೊಡುಗೆಗಳನ್ನು ನೀಡಲು ಸಿದ್ದರಾಮಯ್ಯಗೆ ಸಾಧ್ಯವಿಲ್ಲ. ಡಿ.ಕೆ ಶಿವಕುಮಾರ್ ಹುಟ್ಟಾ ಕಾಂಗ್ರೆಸ್ಸಿಗ, ಎರಡೂವರೆ ವರ್ಷದ ಒಪ್ಪಂದ ಪ್ರಕಾರ ಅವರಿಗೆ ಅಧಿಕಾರ ಹಸ್ತಾಂತರ ಮಾಡಲೇಬೇಕು ಎಂದು ವಿಶ್ವನಾಥ್ ಹೇಳಿದರು.
ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದಾಗ ಸುತ್ತೂರು ಶ್ರೀಗಳ ಕಾಲು ಹಿಡಿದು ಕಾ.ಪು ಸಿದ್ದಲಿಂಗಸ್ವಾಮಿಯನ್ನು ತಣ್ಣಗಾಗಿಸಿದರು. ಚಾಮುಂಡೇಶ್ವರಿ ಕ್ಷೇತ್ರದ ಬೈ ಎಲೆಕ್ಷನ್ ನಲ್ಲಿ ಉಡುಪಿ ಮಠದ ಪೀಠಾಧಿಪತಿಗಳ ಕಾಲು ಹಿಡಿದರು. ಸಿದ್ದರಾಮಯ್ಯ ಒಳಗೊಂದು ಹೊರಗೊಂದು ಎಂಬಂತೆ ಡಬಲ್ ಸ್ಟ್ಯಾಂಡ್ ಹೊಂದಿದ್ದಾರೆ ಎಂದು ಎಂಎಲ್ಸಿ ಎಚ್. ವಿಶ್ವನಾಥ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.
In a sharp attack, MLC H. Vishwanath accused Chief Minister Siddaramaiah of being “ungrateful” and responsible for the BJP forming the government in Karnataka during the previous term. Vishwanath alleged that Siddaramaiah himself facilitated the defection of 14 Congress MLAs to the BJP, enabling B.S. Yediyurappa to take oath as Chief Minister.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 09:03 pm
HK News Staffer
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm