ಬ್ರೇಕಿಂಗ್ ನ್ಯೂಸ್
29-11-25 08:11 pm Bangalore Correspondent ಕರ್ನಾಟಕ
ಬೆಂಗಳೂರು, ನ.29 : ಕೆಎಂಎಫ್ ನಂದಿನಿ ತುಪ್ಪಕ್ಕೆ ಎಲ್ಲಿಲ್ಲದ ಬೇಡಿಕೆ ಇರುವುದರಿಂದ ಇದನ್ನೇ ಬಂಡವಾಳ ಮಾಡಿಕೊಂಡ ಖದೀಮರು ನಂದಿನಿ ಹೆಸರಲ್ಲಿ ನಕಲಿ ತುಪ್ಪವನ್ನೂ ಮಾಡುತ್ತಿದ್ದಾರೆ. ಇದೀಗ ನಕಲಿಗಳಿಗೆ ಕಡಿವಾಣ ಹಾಕಲು ಕೆಎಂಎಫ್ ಭರ್ಜರಿ ಪ್ಲಾನ್ ಮಾಡಿಕೊಂಡಿದೆ.
ಇಡೀ ದೇಶದಲ್ಲಿ ವಿಶಿಷ್ಟ ರುಚಿ ಮತ್ತು ವಿಶ್ವಸನೀಯ ಬ್ರಾಂಡ್ ಎನಿಸಿರುವ ಕೆಎಂಎಫ್ ತುಪ್ಪವನ್ನ ನಕಲಿ ಮಾಡುವುದನ್ನು ಗಂಭೀರ ಪರಿಗಣಿಸಿದ ಆಡಳಿತ ಮಂಡಳಿ ಪರ್ಯಾಯ ಕ್ರಮಕ್ಕೆ ಮುಂದಾಗಿದೆ. ಕೆಟ್ಟ ಮೇಲೆ ಬುದ್ದಿ ಕಲಿತಂತಿರುವ ಕೆಎಂಎಫ್ ನಂದಿನಿ ಬ್ರ್ಯಾಂಡ್ಗೆ ಹೊಡೆತ ಬೀಳಬಾರದು ಎಂಬ ಉದ್ದೇಶದಿಂದ ಆಹಾರ ಇಲಾಖೆ ತಜ್ಞರ ಜೊತೆ ಚರ್ಚಿಸಿ ಮಾಸ್ಟರ್ ಪ್ಲಾನ್ ಮಾಡಿದೆ. ಪ್ಯಾಕ್ ಮೇಲೆ ಕ್ಯೂ ಆರ್ ಕೋಡ್ ಬಳಸಿದಲ್ಲಿ ತುಪ್ಪದ ಉತ್ಪಾದನೆ, ಪೂರೈಕೆ, ಯಾವ ಮಳಿಗೆ, ಯಾರಿಗೆ ಮಾರಾಟ ಮಾಡಿದ್ದಾರೆ ಎಂಬುದು ಕೇವಲ ಸ್ಕ್ಯಾನ್ ಮಾಡುವುದರಿಂದ ತಿಳಿಯಲಿದೆ.
ಇದರಿಂದ ಗ್ರಾಹಕರು ಖರೀದಿ ಮಾಡಿರುವುದು ಅಸಲಿಯೋ, ನಕಲಿಯೋ ಎಂಬುದು ಒಂದೇ ಹಂತದಲ್ಲಿ ಗೊತ್ತಾಗುತ್ತದೆ. ಶೀಘ್ರದಲ್ಲಿಯೇ ಕ್ಯೂ ಆರ್ ಕೋಡ್ ಜಾರಿಗೆ ತರಲು ಆಡಳಿತ ಮಂಡಳಿ ಮುಂದಾಗಿದ್ದು ಇದಕ್ಕೆ ತಗಲುವ ಹೆಚ್ಚುವರಿ ವೆಚ್ಚವನ್ನು ಗ್ರಾಹಕರ ಮೇಲೆ ಹೊರಿಸದೆ ತಾನೇ ಭರಿಸಲಿದೆ. ಕ್ಯೂ ಆರ್ ಕೋಡ್ ನಿಂದ ಯಾವ ಒಕ್ಕೂಟದಿಂದ ಉತ್ಪಾದನೆಯಾಗಿದೆ, ಯಾವ ಡಿಪೋಗೆ ಸರಬರಾಜು ನೀಡಲಾಗಿದೆ, ಯಾವ ಏರಿಯಾಗೆ ಡೆಲಿವರಿ ನೀಡಲಾಗಿದೆ, ಯಾವ ರೀಟೇಲ್ ಅಂಗಡಿಗೆ ಸೇಲ್ ಮಾಡಲಾಗಿದೆ ಎಂಬ ಮಾಹಿತಿ ಇರುತ್ತದೆ.
ಕ್ಯೂಆರ್ ಕೋಡ್ ಮೂಲಕ ಗ್ರಾಹಕರು ತುಪ್ಪದ ಉತ್ಪಾದನೆ, ಪೂರೈಕೆ, ಯಾವ ಮಳಿಗೆ, ಯಾರಿಗೆ ಮಾರಾಟ ಮಾಡಿದ್ದಾರೆ ಎಂಬುದನ್ನು ತಿಳಿಯಬಹುದು. ಇದರಿಂದ ತಾವು ಖರೀದಿಸಿದ ತುಪ್ಪ ಅಸಲಿಯೋ ನಕಲಿಯೋ ಅನ್ನೋದನ್ನು ಗ್ರಾಹಕರೇ ತಿಳಿಯಬಹುದು.
As demand for KMF Nandini ghee continues to soar across the country, miscreants have begun selling duplicate ghee using the Nandini brand name. To put an end to this fake ghee racket, the Karnataka Milk Federation (KMF) has come up with a strong master plan.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 09:03 pm
HK News Staffer
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm