ಬ್ರೇಕಿಂಗ್ ನ್ಯೂಸ್
01-12-25 01:08 pm HK News Desk ಕರ್ನಾಟಕ
ಬೆಳಗಾವಿ, ಡಿ.1: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ಹಿನ್ನೆಲೆ 20 ದಿನಗಳ ಕಾಲ ಸುತ್ತಮುತ್ತಲಿನ ಮೂರು ಕಿಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ದೆಹಲಿ ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣದಿಂದ ಎಚ್ಚತ್ತುಕೊಂಡ ಪೊಲೀಸರು ಸುವರ್ಣ ವಿಧಾನಸೌಧದ ಸುತ್ತಲೂ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಇದೇ ಡಿಸೆಂಬರ್ 8ರಿಂದ ಹತ್ತು ದಿನಗಳ ಅಧಿವೇಶನ ನಡೆಯಲಿದ್ದು ಈ ಹಿನ್ನೆಲೆ ಬೆಳಗಾವಿ ಪೊಲೀಸ್ ಕಮೀಷನರ್ ಭೂಷಣ್ ಬೋರಸೆ ಡಿ.1ರಿಂದ ಡಿ.21ರ ಮಧ್ಯರಾತ್ರಿ 12 ಗಂಟೆ ವರೆಗೆ ನಿಷೇಧಾಜ್ಞೆ ವಿಧಿಸಿದ್ದಾರೆ.
ಇದೇ ಮೊದಲ ಬಾರಿಗೆ 3 ಕಿಲೋಮೀಟರ್ ವರೆಗೂ ನಿಷೇಧಾಜ್ಞೆ ವ್ಯಾಪ್ತಿ ವಿಸ್ತರಿಸಲಾಗಿದೆ. ದೆಹಲಿಯಲ್ಲಿ ಬಾಂಬ್ ಬ್ಲಾಸ್ಟ್ ಆಗಿದ್ದರಿಂದ ಹೆಚ್ಚಿನ ಬಂದೋಬಸ್ತ್ ಮಾಡಲಾಗುತ್ತಿದೆ. ಸುವರ್ಣ ವಿಧಾನಸೌಧ ಸುತ್ತಲೂ ಈ ಬಾರಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ. 2012ರಿಂದ 2024ರ ಚಳಿಗಾಲದ ಅಧಿವೇಶನ ವೇಳೆ 27 ಅಹಿತಕರ ಘಟನೆಗಳು ಪ್ರಕರಣ ದಾಖಲಾಗಿವೆ. ಇದರಲ್ಲಿ 73 ಪೊಲೀಸ್ ಅಧಿಕಾರಿ, ಸಿಬ್ಬಂದಿ ಮತ್ತು 21 ಸಾರ್ವಜನಿಕರು ಗಾಯಗೊಂಡಿದ್ದಾರೆ. 6 ಲಕ್ಷ 23 ಸಾವಿರ ಮೌಲ್ಯದ ಸರ್ಕಾರಿ ಮತ್ತು ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿಯಾಗಿದೆ. ಹೀಗಾಗಿ ಈ ಬಾರಿ ವಿಶೇಷ ಭದ್ರತೆ ನೀಡಲಾಗಿದೆ.
ಹತ್ತು ದಿನಗಳ ಅಧಿವೇಶನ ಸಂದರ್ಭದಲ್ಲಿ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದವರಿಗೆ ಮಾತ್ರ ಪ್ರತಿಭಟನೆಗೆ ಅವಕಾಶ ನೀಡಲಾಗಿದೆ. ಒಂದೆಡೆ ಬಾಗಲಕೋಟ ಭಾಗದಲ್ಲಿ ಕಬ್ಬು, ಮೆಕ್ಕೆಜೋಳ ರೈತರ ಪ್ರತಿಭಟನೆ ನಡೆಯುತ್ತಿದ್ದು ಇದೇ ವೇಳೆ ಅಧಿವೇಶನ ಆಗುತ್ತಿರುವುದರಿಂದ ರೈತರು ಮುತ್ತಿಗೆ ಹಾಕುವ ಸಾಧ್ಯತೆ ಇದೆ. ಈ ಕಾರಣದಿಂದಲೋ ಏನೋ ಸುವರ್ಣ ವಿಧಾನಸೌಧದ ಸುತ್ತ 5 ಜನಕ್ಕಿಂತ ಹೆಚ್ಚು ಜನರ ಗುಂಪು ಸೇರಲು ಅವಕಾಶವಿಲ್ಲ. ಯಾವುದೇ ಆಯುಧ, ಮಾರಕಾಸ್ತ್ರ, ಬಡಿಗೆ ಒಯ್ಯಲು ಅವಕಾಶವಿಲ್ಲ. ಮೂರು ಕಿಮೀ ದೂರದಿಂದಲೇ ಗುಂಪನ್ನು ತಡೆಯಲು ಪೊಲೀಸರನ್ನು ಹಾಕಲಾಗುತ್ತಿದೆ.
ಇದಲ್ಲದೆ, ಪೊಲೀಸ್ ಅನುಮತಿ ಇಲ್ಲದೇ ಖಾಸಗಿ ವ್ಯಕ್ತಿಗಳು ಡ್ರೋಣ್ ಹಾರಿಸಲು ಅನುಮತಿ ಇಲ್ಲ. ಸುವರ್ಣ ವಿಧಾನಸೌಧದ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆಗೆ ಅವಕಾಶವಿಲ್ಲ. ಹೀಗೆ 10 ಅಂಶಗಳ ಷರತ್ತು ವಿಧಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
Ahead of the winter session at the Suvarna Vidhana Soudha in Belagavi, authorities have imposed prohibitory orders within a 3-kilometre radius for 20 days. The move comes as police tightened security following the recent Delhi Red Fort bomb blast incident.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 09:03 pm
HK News Staffer
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm