ಬ್ರೇಕಿಂಗ್ ನ್ಯೂಸ್
02-12-25 10:17 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.2 : ಬೆಂಗಳೂರು ನಗರ ಪೊಲೀಸ್ ಆಯುಕ್ತರ ಇಮೇಲ್ ವಿಳಾಸಕ್ಕೆ 'ಜೈಷ್-ಇ-ಮೊಹಮ್ಮದ್' ಹೆಸರಲ್ಲಿ ಶಾಪಿಂಗ್ ಮಾಲ್ ಮತ್ತು ಏರ್ಪೋರ್ಟ್ ಕಚೇರಿಗೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಬೆದರಿಕೆ ಸಂದೇಶ ಕಳುಹಿಸಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ನಗರದ ಆಯ್ದ ಪ್ರಮುಖ ಶಾಪಿಂಗ್ ಮಾಲ್ಗಳನ್ನು ಗುರಿಯಾಗಿಸಿ ಬೆದರಿಕೆ ಸಂದೇಶ ರವಾನೆಯಾಗಿದೆ. ನವೆಂಬರ್ 30, 2025 ರಂದು ಬೆಳಗ್ಗೆ 11.53ಕ್ಕೆ ಈ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಅನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಅಧಿಕೃತ ಇ-ಮೇಲ್ಗೆ ಕಳುಹಿಸಲಾಗಿದೆ.
ಬೆದರಿಕೆ ಹಾಕಿದ ವ್ಯಕ್ತಿ ತನ್ನನ್ನು 'ಜೈಷ್-ಇ ಮೊಹಮ್ಮದ್ ವೈಟ್ ಕಾಲರ್ ಟೆರರ್ ಟೀಮ್' ಎಂದು ಪರಿಚಯಿಸಿ ಇಂಗ್ಲಿಷ್ನಲ್ಲಿ ಸಂದೇಶ ಬರೆದಿದ್ದಾನೆ. ಜೈಷ್-ಇ-ಮೊಹಮ್ಮದ್ ವೈಟ್ ಕಾಲರ್ ಟೆರರ್ ಟೀಮ್ನಿಂದ ಇದೊಂದು ಎಚ್ಚರಿಕೆ. ನಾವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು, ಒರಿಯನ್ ಮಾಲ್, ಲುಲು ಮಾಲ್, ಫೋರಂ ಸೌತ್ ಮಾಲ್, ಮಂತ್ರಿ ಸ್ಕ್ವೇರ್ ಮಾಲ್ ಗಳನ್ನು ಗುರಿಯಾಗಿಸಿಕೊಂಡಿದ್ದೇವೆ. ಸಂಜೆ 7 ಗಂಟೆಯ ನಂತರ ಬಾಂಬ್ ಸ್ಫೋಟಗೊಳ್ಳಲಿದೆ. ನಮ್ಮ ಅಲ್ಲಾ ಮತ್ತು ನಮ್ಮ ಮಾಸ್ಟರ್ ಮೋಹಿತ್ ಅವರಿಗೆ ಧನ್ಯವಾದಗಳು. ಅಲ್ಲದೆ, 'ಇದು ಸಂಭವಿಸದಿರಲು ಬಯಸಿದರೆ ನೀವು +91 936***8077 ಸಂಖ್ಯೆಗೆ ಕರೆ ಮಾಡಿ, ಹಣವನ್ನು ಪಾವತಿ ಮಾಡಿ ಎಂದು ಹಣಕ್ಕೆ ಬೇಡಿಕೆ ಇಡುವ ಪ್ರಯತ್ನವನ್ನೂ ಮಾಡಲಾಗಿದೆ.
ಬೆದರಿಕೆ ಇ-ಮೇಲ್ ಅನ್ನು ಮೋಹಿತ್ ಕುಮಾರ್ ಹೆಸರಿನ ಇಮೇಲ್ ಐಡಿ ಮೂಲಕ ರವಾನಿಸಲಾಗಿದೆ. ಸಂದೇಶವು ಬಂದ ತಕ್ಷಣವೇ ಎಚ್ಚೆತ್ತ ಪೊಲೀಸರು, ವಿಮಾನ ನಿಲ್ದಾಣ ಮತ್ತು ಹೆಸರಿಸಲಾದ ಮಾಲ್ಗಳ ಸುತ್ತಮುತ್ತ ತೀವ್ರ ತಪಾಸಣೆ ನಡೆಸಿದರು. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳಗಳು ಸ್ಥಳಗಳನ್ನು ಪರಿಶೀಲಿಸಿದ್ದು, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಹೀಗಾಗಿ ಇದು ಹುಸಿ ಬಾಂಬ್ ಬೆದರಿಕೆ ಎಂಬುದು ದೃಢಪಟ್ಟಿದೆ.
ಈ ಬಗ್ಗೆ ಬೆಂಗಳೂರಿನ ಕೇಂದ್ರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ಇ-ಮೇಲ್ ಐಡಿಯಲ್ಲಿ ಉಲ್ಲೇಖಿಸಲಾದ 'ಮೋಹಿತ್ ಕುಮಾರ್' ಎಂಬಾತನೇ ಆರೋಪಿಯೇ ಅಥವಾ ಬೇರೆ ಯಾರೋ ಈ ಐಡಿ ಬಳಸಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
A hoax email sent to the Bengaluru City Police Commissioner’s official address threatened bomb blasts at Kempegowda International Airport and major shopping malls in the city, claiming to be from the “Jaish-e-Mohammed White Collar Terror Team.” The email, sent on November 30, 2025, warned of explosions after 7 PM and even demanded money via a phone number.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 01:08 pm
HK News Desk
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm