ಬ್ರೇಕಿಂಗ್ ನ್ಯೂಸ್
07-12-25 10:21 pm HK News Desk ಕರ್ನಾಟಕ
ಗಂಗಾವತಿ, ಡಿ 07 : ಪ್ರಿ ವೆಡ್ಡಿಂಗ್ ಶೂಟಿಂಗ್ ಮುಗಿಸಿ ಬೈಕ್ನಲ್ಲಿ ವಾಪಸ್ ಬರುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದು ಯುವತಿ ಮತ್ತು ಯುವಕ ಸಾವನ್ನಪ್ಪಿದ ದಾರುಣ ಘಟನೆ ಗಂಗಾವತಿ ತಾಲ್ಲೂಕಿನ ದಾಸನಾಳ ಸಮೀಪದ ಬಂಡ್ರಾಳ್-ವೆಂಕಟಗಿರಿ ಕ್ರಾಸ್ ಬಳಿ ಸಂಭವಿಸಿದೆ.
ಮೃತರನ್ನು ಕೊಪ್ಪಳ ತಾಲ್ಲೂಕಿನ ಇರಕಲ್ಗಡಾದ ನಿವಾಸಿ ಕರಿಯಪ್ಪ ಮಡಿವಾಳ್ ಹನುಮನಹಟ್ಟಿ (26) ಹಾಗೂ ಕವಿತಾ ಪಾವಾಡೆಪ್ಪ ಮಡಿವಾಳ (19) ಎಂದು ಗುರುತಿಸಲಾಗಿದೆ.
ಕಾರಟಗಿ ತಾಲ್ಲೂಕಿನ ಮುಸ್ಟೂರು ಗ್ರಾಮದವರಾದ ಕವಿತಾ ಮತ್ತು ಇರಕಲ್ಗಡಾದ ಕರಿಯಪ್ಪ ಮಡಿವಾಳ ಅವರ ನಿಶ್ಚಿತಾರ್ಥ ಐದು ತಿಂಗಳ ಹಿಂದೆ ನಡೆದಿತ್ತು. ಡಿಸೆಂಬರ್ 21ರಂದು ಮದುವೆ ನಿಗದಿಯಾಗಿತ್ತು. ಇನ್ನೆರಡು ವಾರದಲ್ಲಿ ಮದುವೆಯಾಗಬೇಕಿದ್ದ ಜೋಡಿ, ಪ್ರಿ ವೆಡ್ಡಿಂಗ್ ಶೂಟಿಂಗ್ಗಾಗಿ ಇಂದು ಬೆಳಗ್ಗೆ ಮನೆಯಿಂದ ಹೊರಟಿದ್ದರು. ಹೊಸಪೇಟೆಯ ಪಂಪಾವನ, ಮುನಿರಾಬಾದಿನ ಜಲಾಶಯ ಸೇರಿದಂತೆ ವಿವಿಧೆಡೆ ಸುತ್ತಾಡಿದ್ದರು. ಸಂಜೆಯಾಗುತ್ತಿದ್ದಂತೆ ಕವಿತಾ ಅವರನ್ನು ಮನೆಗೆ ಬಿಟ್ಟು ಬರಲು ಕರಿಯಪ್ಪ ತನ್ನ ದ್ವಿಚಕ್ರ ವಾಹನದಲ್ಲಿ ಗಂಗಾವತಿಗೆ ಹೋಗುತ್ತಿದ್ದರು. ಈ ವೇಳೆ, ವೆಂಕಟಗಿರಿಯ ಕಲ್ಲಿನ ಕ್ವಾರಿಯಿಂದ ವೇಗವಾಗಿ ಬರುತ್ತಿದ್ದ ಲಾರಿ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬೈಕ್ ಮೇಲೆ ಹರಿದಿದೆ. ಪರಿಣಾಮ, ಯುವತಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳು ಯುವಕನನ್ನು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರೂ ಮೃತಪಟ್ಟಿದ್ದಾರೆ.
A young couple from Koppal, set to marry on December 21, lost their lives in a horrific road accident near Dasanal while returning from their pre-wedding shoot. A speeding lorry rammed into their bike, killing the bride-to-be on the spot and leaving the groom fatally injured.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm