ಬ್ರೇಕಿಂಗ್ ನ್ಯೂಸ್
12-12-25 08:47 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 12 : ಸಾಕು ಗಿಳಿಯನ್ನು ರಕ್ಷಿಸಲು ಹೋಗಿ ಯುವಕ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ ಘಟನೆ ರಾಜಧಾನಿಯ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೀರಭದ್ರ ನಗರದಲ್ಲಿ ಸಂಭವಿಸಿದೆ. ಅರುಣ್ ಕುಮಾರ್ (32) ಸಾವನ್ನಪ್ಪಿರುವ ಯುವಕ.
ಲಿಖಿತಾ ಎಂಬವರು 2 ಲಕ್ಷ ರೂ. ವಿದೇಶಿ ಗಿಳಿಯೊಂದನ್ನು ತಮ್ಮ ಫ್ಲ್ಯಾಟ್ನಲ್ಲಿ ಸಾಕಿದ್ದರು. ಇಂದು ಅಪಾರ್ಟ್ಮೆಂಟ್ ಆವರಣದಲ್ಲಿರುವ ಹೈಟೆನ್ಷನ್ ವೈರ್ ಕಂಬದ ಮೇಲೆ ಕುಳಿತಿತ್ತು. ಇದನ್ನು ನೋಡಿದ ಲಿಖಿತಾರ ಸಂಬಂಧಿ ಅರುಣ್ ಕುಮಾರ್, ಕಬ್ಬಿಣದ ಪೈಪ್ಗೆ ಕಟ್ಟಿಗೆ ಸೇರಿಸಿ ಅಪಾರ್ಟ್ಮೆಂಟ್ ಕಾಂಪೌಂಡ್ ಮೇಲೆ ನಿಂತು ಗಿಳಿಯನ್ನು ಓಡಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ 66 ಸಾವಿರ ಕೆ.ವಿ ವಿದ್ಯುತ್ ಪ್ರವಹಿಸಿದ ಪರಿಣಾಮ ಅರುಣ್ ಕುಮಾರ್, ಕಾಂಪೌಂಡ್ ಮೇಲಿಂದ ಕೆಳಗೆ ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಾರ್ಟ್ಮೆಂಟ್ ಆವರಣದೊಳಗೆ ಹೈಟೆನ್ಷನ್ ವೈರ್ಗಳು ಇರುವುದಕ್ಕೆ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಗಿರಿನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಡ್ಯದ ನಾಗಮಂಗಲ ಮೂಲದ ಅರುಣ್ ಕುಮಾರ್, ತನ್ನ ಚಿಕ್ಕಮ್ಮನ ಮನೆಗೆ ಆಗಾಗ ಬಂದು ಉಳಿದುಕೊಳ್ತಿದ್ದ, ಖಾಸಗಿಯಾಗಿ ಕೆಲಸ ಮಾಡುತ್ತಿದ್ದ ಅರುಣ್, ತಾಯಿಗೆ ಆಸರೆಯಾಗಿದ್ದರು.
In a tragic incident, a 32-year-old man died of electrocution while attempting to rescue a pet parrot worth ₹2 lakh in Veerabhadra Nagar under Girinagar Police Station limits. The deceased has been identified as Arun Kumar (32).
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 01:08 pm
HK News Desk
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm