ಬ್ರೇಕಿಂಗ್ ನ್ಯೂಸ್
13-12-25 04:00 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.13: ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದ ಮತಕಳ್ಳತನ ಪ್ರಕರಣದಲ್ಲಿ ತನಿಖೆ ನಡೆಸಿದ ವಿಶೇಷ ತನಿಖಾ ತಂಡ ಎಪಿಎಂಎಂ ನ್ಯಾಯಾಲಯಕ್ಕೆ ದೋಷರೋಪಟ್ಟಿ ಸಲ್ಲಿಸಿದೆ. ಪ್ರಕರಣದಲ್ಲಿ ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮತ್ತು ಅವರ ಪುತ್ರನ ಪಾತ್ರದ ಬಗ್ಗೆ ಉಲ್ಲೇಖವಾಗಿದೆ ಎಂದು ತಿಳಿದುಬಂದಿದೆ.
ಅಳಂದ ಮತಗಳವು ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಅವರ ಪುತ್ರ ಹರ್ಷಾನಂದ ಸೇರಿದಂತೆ ಒಟ್ಟು 7 ಜನರ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಎಸ್ಐಟಿ (ಡಿ.12) ಶುಕ್ರವಾರ 22 ಸಾವಿರ ಪುಟಗಳ ದೋಷರೋಪ ಪಟ್ಟಿ ಸಲ್ಲಿಸಿದ್ದು, ಏಳು ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ನಡೆದಿದ್ದ ಮತಗಳ್ಳತನ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿತ್ತು. ತನಿಖೆ ಪೂರ್ಣಗೊಳಿಸಿದ ಪೊಲೀಸರು 22 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಅಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಆರೋಪವನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿದ್ದರು. ಇದರ ಬೆನ್ನಲ್ಲೇ ಚುನಾವಣಾಧಿಕಾರಿಗಳಿಗೂ ದೂರು ನೀಡಲಾಗಿತ್ತು. ಅಲ್ಲದೆ, ಸಿದ್ದರಾಮಯ್ಯ ಸರ್ಕಾರವು ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಮಾಡಿತ್ತು. ತನಿಖೆ ಸಂದರ್ಭದಲ್ಲಿ ಬಂಧನ ಭೀತಿ ಎದುರಿಸಿದ್ದ ಸುಭಾಷ್ ಗುತ್ತೇದಾರ್ ಮತ್ತು ಪುತ್ರ ನಿರೀಕ್ಷಣಾ ಜಮೀನು ಪಡೆದಿದ್ದರು.
ಅಳಂದ ಕ್ಷೇತ್ರದಲ್ಲಿ 5,994 ಮತದಾರರ ಹೆಸರು ಅಳಿಸಲಾಗಿದೆ ಎಂಬುದಾಗಿ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ ಮತ ಕಳವು ಯತ್ನಕ್ಕೆ ಸೈಬರ್ ಸೆಂಟರ್ ಒಂದನ್ನು ಬಳಸಿಕೊಂಡಿದ್ದು ಪತ್ತೆಯಾಗಿತ್ತು. ಅಲ್ಲದೆ ಮತದಾರ ಪಟ್ಟಿಯಿಂದ ಹೆಸರು ಅಳಿಸಲು ಗುತ್ತೇದಾರ್ ಹಣ ಪಾವತಿ ಮಾಡಿದ್ದರು ಎನ್ನಲಾಗಿತ್ತು.
ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದ್ದು ತನಿಖೆಯಲ್ಲಿ ಹಲವಾರು ಅಂಶಗಳು ಪತ್ತೆಯಾಗಿದ್ದವು. ತಾಂತ್ರಿಕ ಮಾಹಿತಿ ಆಧರಿಸಿ ತನಿಖೆ ನಡೆಸಿದ್ದ ಎಸ್ಐಟಿ, ಮತ ಅಳಿಸಿ ಹಾಕಲು ಸಲ್ಲಿಸಿದ್ದ ಅರ್ಜಿಗಳ ಮೂಲ ಕೆದಕಿದಾಗ ಹಣದ ವಹಿವಾಟು ಕಂಡುಬಂದಿತ್ತು. ಅಕ್ರಂ ಪಾಷ ಎಂಬಾತ ಕಾಲ್ ಸೆಂಟರ್ ನಡೆಸ್ತಿದ್ದು ಅದರ ಮೂಲಕ ಒಟಿಪಿ ಬಳಸಿಕೊಂಡು ಮತಪಟ್ಟಿಯಿಂದ ಹೆಸರು ಡಿಲೀಟ್ ಮಾಡಿದ್ದರು ಎನ್ನುವ ಮಾಹಿತಿ ಲಭಿಸಿತ್ತು.
The Special Investigation Team (SIT) probing the alleged voter theft case in the Aland Assembly constituency of Kalaburagi district has filed a charge sheet before the APJM court. The charge sheet reportedly details the role of former BJP MLA Subhash Guttedar and his son Harshanand in the case.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 01:08 pm
HK News Desk
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm