ಬ್ರೇಕಿಂಗ್ ನ್ಯೂಸ್
17-12-25 12:45 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.17 : ರೈಲ್ವೇ ವಿದ್ಯುದೀಕರಣ ಸಲುವಾಗಿ ಆರು ತಿಂಗಳ ಹಿಂದೆ ರದ್ದಾಗಿದ್ದ ಬೆಂಗಳೂರು- ಮಂಗಳೂರು- ಕಾರವಾರ ರೈಲು ಸೇವೆಯನ್ನು ಪುನಾರಂಭಗೊಳಿಸಲು ನಿರ್ಧರಿಸಲಾಗಿದೆ. ಕರಾವಳಿಗೆ ಸಂಚಾರ ಮಾಡುವ ವಿವಿಧ ರೈಲುಗಳಲ್ಲಿ ಒಂದಾದ ಗೊಮ್ಮಟೇಶ್ವರ ಎಕ್ಸ್ಪ್ರೆಸ್ ರೈಲು (16575/16576) ಸೇವೆ ಮತ್ತೆ ಶುರುವಾಗಿದ್ದು ರೈಲ್ವೇ ಇಲಾಖೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟಿದೆ.
ಬೆಂಗಳೂರಿನ ಯಶವಂತಪುರದಿಂದ ಈ ರೈಲು ಸಂಚಾರ ಆರಂಭಿಸಲಿದ್ದು ವಾರದಲ್ಲಿ ಮೂರು ದಿನ ಇರಲಿದೆ. ಇತ್ತೀಚೆಗೆ ಯಶವಂತಪುರ, ಹಾಸನ, ಸಕಲೇಶಪುರ ಮಾರ್ಗದಲ್ಲಿ ವಿದ್ಯುದೀಕರಣ ಮತ್ತು ಇತರ ಕಾಮಗಾರಿಗಳ ಕಾರಣದಿಂದಾಗಿ ಈ ರೈಲು ಸೇವೆಯನ್ನು ಜೂನ್ ನಿಂದ ನವೆಂಬರ್ ವರೆಗೆ ಆರು ತಿಂಗಳ ಕಾಲ ರದ್ದುಗೊಳಿಸಲಾಗಿತ್ತು. ಇದೀಗ ಮತ್ತೆ ಸೇವೆ ಪುನಾರಂಭಿಸಲಾಗಿದೆ.
ಪ್ರವಾಸೋದ್ಯಮ ಉತ್ತೇಜನ ಉದ್ದೇಶದಿಂದ ಪ್ರಕೃತಿ ಸೌಂದರ್ಯ ಸವಿಯಲು ಅನುಕೂಲವಾಗುವಂತೆ ರೈಲ್ವೆ ಇಲಾಖೆ ಈ ಗೊಮ್ಮಟೇಶ್ವರ ರೈಲಿಗೂ ವಿಸ್ಟಾಡೋಮ್ ಕೋಚ್ ಅಳವಡಿಸಿದೆ. ಅಗಲ ಗಾಜಿನ ಕಿಟಿಕಿ, ಬೃಹತ್ ಗಾಜಿನ ಮೇಲ್ಚಾವಣಿ, ವ್ಯವಸ್ಥಿತ ಆಸನಗಳಿದ್ದವು. ಇದರಿಂದ ಮಳೆಗಾಲದಲ್ಲಿ ಹಾಸನ, ಸಂಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಮಂಗಳೂರು ಮಾರ್ಗದುದ್ದಕ್ಕೂ ಕಾಣುವ ಪ್ರಕೃತಿಯನ್ನು ಸವಿಯಬಹುದಾಗಿತ್ತು. ಮಳೆಗಾಲದಲ್ಲೇ ಈ ರೈಲಿನ ರದ್ದತಿಯಿಂದ ಪ್ರಯಾಣಿಕರಿಗೆ ಒಂದಷ್ಟು ನಿರಾಸೆಯಾಗಿತ್ತು.
ಇದೀಗ ಶ್ರವಣಬೆಳಗೊಳ ಮೂಲಕ ಸಾಗುವ ಗೋಮಟೇಶ್ವರ ರೈಲು ಮತ್ತೆ ಆರಂಭಗೊಂಡಿದ್ದು ಯವಂತಪುರದಿಂದ ರವಿವಾರ, ಮಂಗಳವಾರ ಮತ್ತು ಗುರುವಾರ ಹೀಗೆ ವಾರದಲ್ಲಿ ಮೂರು ದಿನ ಪ್ರಯಾಣಿಸುತ್ತದೆ. ಯಶವಂತಪುರದಿಂದ ಹೊರಟು ಚಿಕ್ಕಬಾಣಾವರ, ಹಾಸನ, ಶ್ರವಣಬೆಳಗೊಳ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕ- ಪುತ್ತೂರು, ಬಂಟವಾಳ ಮೂಲಕ ಮಂಗಳೂರಿಗೆ ಹೋಗುತ್ತದೆ. ಗೊಮ್ಮಟೇಶ್ವರ ರೈಲು ಸೇವೆ ಪುನಾರಂಭಗೊಳ್ಳುತ್ತಿದ್ದಂತೆ ಟಿಕೆಟ್ ಬುಕ್ಕಿಂಗ್ ಸಹ ಆರಂಭಗೊಂಡಿದೆ. ಪ್ರಯಾಣಕ್ಕೂ ಮುನ್ನ ಪ್ರಯಾಣಿಕರು ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ https://www.indianrail.gov.in ಭೇಟಿ ನೀಡಬೇಕು. ರೈಲಿನ ಸೇವೆ ಬಗ್ಗೆ ಮಾಹಿತಿ, ಟಿಕೆಟ್, ಮಾರ್ಗ ಇತರ ಮಾಹಿತಿಗಾಗಿ ಸಹಾಯವಾಣಿ 139ಕ್ಕೆ ಕರೆ ಮಾಡುವಂತೆ ರೈಲ್ವೇ ಇಲಾಖೆ ಪ್ರಕಟಣೆಯಲ್ಲಿ ಕೋರಿದೆ.
Railway authorities have announced the resumption of the Yeshwantpur–Mangaluru–Karwar Gomateshwara Express (Train No. 16575/16576), bringing relief to passengers traveling to the coastal region. The train service, which was suspended for six months due to electrification and infrastructure works on the Yeshwantpur–Hassan–Sakleshpur route, has now been restarted.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 07:02 pm
HK News Staffer
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm