ಬ್ರೇಕಿಂಗ್ ನ್ಯೂಸ್
22-12-25 11:09 pm HK News Desk ಕರ್ನಾಟಕ
ಕಲಬುರಗಿ, ಡಿ.22 : ಗಾಳಿಯಲ್ಲಿ ಗುಂಡು ಹಾರಿಸಿ ಸ್ವಾಮೀಜಿಯೊಬ್ಬರು ಸಾರ್ವಜನಿಕರ ಮಧ್ಯೆ ಬಿಲ್ಡಪ್ ಕೊಟ್ಟ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣ ಗ್ರಾಮದಲ್ಲಿ ನಡೆದಿದೆ.
ಉಡಚಣ ಗ್ರಾಮದ ಶಂಕರಲಿಂಗೇಶ್ವರ ಸಂಸ್ಥಾನ ಹಿರೇಮಠದ ಶಾಂತಲಿಂಗ ಶಿವಾಚಾರ್ಯ ಎಂಬವರು ಗಾಳಿಯಲ್ಲಿ ಗುಂಡು ಹಾರಿಸಿ ಜನರ ಮಧ್ಯೆ ಭಯ ಮೂಡಿಸಿದ್ದಾರೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣ ಗ್ರಾಮದಲ್ಲಿ ಈ ಮಠವಿದೆ. ಕಳೆದ ಕೆಲ ತಿಂಗಳುಗಳಿಂದ ಸ್ವಾಮೀಜಿ ಮಠ ತೊರೆದು ಎಸ್ಕೇಪ್ ಆಗಿದ್ದರು. ವಾರದ ಹಿಂದೆ ದಿಢೀರ್ ಆಗಿ ಮಠದಲ್ಲಿ ಪ್ರತ್ಯಕ್ಷರಾಗಿದ್ದರು.
ಕುಡಿದು ತೂರಾಡಿ ವಾಹನ ಅಪಘಾತ ಎಸಗಿದ್ದ ಸ್ವಾಮೀಜಿಯನ್ನು ಗ್ರಾಮಸ್ಥರು ಸೇರಿ ಮಠದಿಂದ ಹೊರಗೆ ಹಾಕಿದ್ದರು. ಮಠಕ್ಕೆ ಹೊಸ ಪೀಠಾಧಿಪತಿ ನೇಮಕದ ಚರ್ಚೆ ಬೆನ್ನಲ್ಲೇ ಸ್ವಾಮೀಜಿ ವಾಪಾಸಾಗಿದ್ದರು.
ಇದೀಗ ಮಠದ ಆವರಣದಲ್ಲಿ ನಿಂತು ಗಾಳಿಯಲ್ಲಿ ಗುಂಡು ಹಾರಿಸಿದ್ದು ಆಮೂಲಕ ತಮ್ಮ ವಿರೋಧಿಗಳನ್ನ ಹೆದರಿಸೋಕೆ ಯತ್ನಿಸಿದ್ದಾರೆ. ಇದೀಗ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಎಂಟು ತಿಂಗಳಿಂದ ಮಠ ತೊರೆದಿದ್ದರು. ಕುಡಿದು ರಂಪಾಟ ಮಾಡಿದ್ದನ್ನು ಗ್ರಾಮದ ಜನರು ಪ್ರಶ್ನಿಸಿದ್ದಕ್ಕೆ ಮಠ ತೊರೆದು ಹೋಗಿದ್ದರು.
A dramatic incident unfolded in Udachana village of Afzalpur taluk, Kalaburagi district, where a Swamiji fired a gun in the air and created panic among villagers. Shantalinga Shivacharya of Shankarlingshwara Hirémath, Udachana, reportedly fired shots in the air inside the mutt premises, attempting to intimidate people who were opposing him. A video of the incident has gone viral on social media.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 01:08 pm
HK News Desk
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm