ಬ್ರೇಕಿಂಗ್ ನ್ಯೂಸ್
26-12-25 01:35 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಡಿ 26 : ತಾಲೂಕಿನ ಅಜ್ಜವಾರ ಬಳಿ ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ನಾಲ್ವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಜ್ಜವಾರ ಗ್ರಾಮದ ಒಂದೇ ಕುಟುಂಬದ ಅಣ್ಣ ನರಸಿಂಹ(22), ತಮ್ಮ ನಂದೀಶ್(20), ಅದೇ ಗ್ರಾಮದ ಮನೋಜ್(19), ಅರುಣ್ (20) ಮೃತರು.
ನಾಲ್ವರು ನಗರದ ಚರ್ಚ್ ನಲ್ಲಿ ಕ್ರಿಸ್ ಮಸ್ ಸಂಭ್ರಮ ನೋಡಿಕೊಂಡು ಒಂದೇ ಬೈಕಿನಲ್ಲಿ ಗ್ರಾಮಕ್ಕೆ ವಾಪಸ್ ಆಗುವ ವೇಳೆ ಪ್ರಮುಖ ರಸ್ತೆಯಿಂದ ದಿಢೀರ್ ತಿರುವು ಪಡೆಯಲು ಹೋದ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಡಿಕ್ಕಿಯಾಗಿ ದುರಂತ ಸಂಭವಿಸಿದೆ.
ಚಿಕ್ಕಬಳ್ಳಾಪುರ - ಶಿಡ್ಲಘಟ್ಟ ರಸ್ತೆ ಮಧ್ಯೆ ಬರುವ ಅಜ್ಜವಾರ ಗ್ರಾಮಕ್ಕೆ ತಿರುವ ಪಡೆಯಲು ಯತ್ನಿಸಿದಾಗ ಎದುರುಗಡೆಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸಂಪೂರ್ಣ ಜಖಂ ಆಗಿದೆ. ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
5 ಲಕ್ಷ ರೂ. ಪರಿಹಾರ ಘೋಷಣೆ ;
ಇನ್ನು ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯ ಶಾಸಕ ಪ್ರದೀಪ್ ಈಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪರಿಸ್ಥಿತಿಯ ಗಂಭೀರತೆಯನ್ನು ವಿವರಿಸಿದರು. ಶಾಸಕರ ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಗಳು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ ಹಾಗೂ ಕೂಡಲೇ ಪರಿಹಾರ ವಿತರಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
ಚಿತ್ರದುರ್ಗದ ಬಸ್ ದುರಂತದ ಬೆನ್ನಲ್ಲೇ ಸಂಭವಿಸಿದ ಈ ಸರಣಿ ಅಪಘಾತಗಳು ರಾಜ್ಯದ ಜನತೆಯಲ್ಲಿ ಮತ್ತು ವಾಹನ ಸವಾರರಲ್ಲಿ ತೀವ್ರ ಆತಂಕ ಮೂಡಿಸಿವೆ.
A tragic accident near Ajjavar village in Chikkaballapur claimed the lives of four youths when a tipper collided head-on with their bike. The deceased — Narasimha (22), his brother Nandeesh (20), and their friends Manoj (19) and Arun (20) — all belonged to the same locality.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 01:08 pm
HK News Desk
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm