ಬ್ರೇಕಿಂಗ್ ನ್ಯೂಸ್
30-12-25 05:44 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.30 : ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಮತ್ತು ಉದ್ಯಮಿ ರಾಬರ್ಟ್ ವಾದ್ರಾ ದಂಪತಿಯ ಪುತ್ರ ರೈಹಾನ್ ವಾದ್ರಾ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ರೈಹಾನ್ ಅವರು ತಮ್ಮ ಬಹುಕಾಲದ ಗೆಳತಿ ಅವಿವಾ ಬೇಗ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಕಳೆದ ಏಳು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ, ಈಗ ಮದುವೆಯಾಗಲು ನಿರ್ಧರಿಸಿದ್ದಾರೆ. ರೈಹಾನ್ ಅವರು ಅವೀವಾ ಅವರಿಗೆ ವಿವಾಹ ಪ್ರಸ್ತಾಪ ಮಾಡಿದ್ದು, ಅದಕ್ಕೆ ಅವಿವಾ ಸಮ್ಮತಿ ಸೂಚಿಸಿದ್ದಾರೆ. ಇವರ ಸಂಬಂಧಕ್ಕೆ ಉಭಯ ಕುಟುಂಬಗಳೂ ಹಸಿರು ನಿಶಾನೆ ತೋರಿಸಿದ್ದು, ಶೀಘ್ರದಲ್ಲೇ ವಿವಾಹದ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ.


ರೈಹಾನ್ ವಾದ್ರಾ ವೃತ್ತಿಯಲ್ಲಿ ಒಬ್ಬ ಪರಿಣಿತ ಛಾಯಾಗ್ರಾಹಕ. ತನ್ನ ಹತ್ತನೇ ವಯಸ್ಸಿಗೇ ಕ್ಯಾಮೆರಾ ಕೈಗೆತ್ತಿಕೊಂಡ ರೈಹಾನ್ ವನ್ಯಜೀವಿ, ಬೀದಿ ಛಾಯಾಗ್ರಹಣ ಮತ್ತು ಕಮರ್ಷಿಯಲ್ ಫೋಟೋಗ್ರಫಿಯಲ್ಲಿ ಗುರುತಿಸಿದ್ದಾರೆ. ಹಾಗೆಯೇ ಅವಿವಾ ಬೇಗ್ ಮೂಲತಃ ದೆಹಲಿ ಮೂಲದವರಾಗಿದ್ದು, ವೃತ್ತಿಯಲ್ಲಿ ಛಾಯಾಗ್ರಾಹಕಿ ಮತ್ತು ನಿರ್ಮಾಪಕಿ ಆಗಿದ್ದಾರೆ. ದೆಹಲಿಯಲ್ಲಿ 'ಅಟೆಲಿಯರ್ 11' ಎಂಬ ಫೋಟೋಗ್ರಫಿ ಸ್ಟುಡಿಯೋ ನಡೆಸುತ್ತಿದ್ದಾರೆ.
ಇದಲ್ಲದೆ ರಾಷ್ಟ್ರಮಟ್ಟದ ಮಾಜಿ ಫುಟ್ಬಾಲ್ ಆಟಗಾರ್ತಿ. ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಕುಟುಂಬದ ಆಪ್ತರು ಮಾತ್ರ ಭಾಗಿಯಾಗಿದ್ದು ಶೀಘ್ರದಲ್ಲೇ ಮದುವೆ ದಿನಾಂಕವನ್ನು ಕುಟುಂಬ ಘೋಷಣೆ ಮಾಡಲಿದೆ. ರೈಹಾನ್ ವಾದ್ರಾ ಡೆಹ್ರಾಡೂನ್ನ ದಿ ಡೂನ್ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದರು. ರಾಜೀವ್ ಗಾಂಧಿ ಮತ್ತು ರಾಹುಲ್ ಗಾಂಧಿ ಕೂಡ ಅದೇ ಶಾಲೆಯಲ್ಲಿ ಅಧ್ಯಯನ ನಡೆಸಿದ್ದರು. ನಂತರ ಉನ್ನತ ಶಿಕ್ಷಣಕ್ಕಾಗಿ ಲಂಡನ್ನಲ್ಲಿರುವ ಸ್ಕೂಲ್ ಆಫ್ ಓರಿಯಂಟಲ್ ಮತ್ತು ಆಫ್ರಿಕನ್ ಸ್ಟಡೀಸ್ ಗೆ ತೆರಳಿದ್ದರು.
Raihan Vadra, son of Priyanka Gandhi and Robert Vadra, has gotten engaged to his childhood friend and longtime partner Aviva Baig. The couple, together for over seven years, exchanged rings in a private ceremony attended by close family. Raihan, a professional photographer, and Aviva, a photographer and producer, are expected to announce their wedding date soon.
30-12-25 11:12 pm
HK News Desk
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
ಕೇರಳದಲ್ಲಿ ಚುನಾವಣೆಯಾದ್ರೆ ಪಿಣರಾಯಿಗೆ ಕರ್ನಾಟಕದಲ್ಲ...
30-12-25 05:10 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
30-12-25 10:43 pm
Mangalore Correspondent
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
30-12-25 10:40 pm
Mangalore Correspondent
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm