ಬ್ರೇಕಿಂಗ್ ನ್ಯೂಸ್
31-12-25 10:57 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.31 : ಬೆಂಗಳೂರಿನ ಕೋಗಿಲು ಲೇಔಟ್ ನಲ್ಲಿ ಅಕ್ರಮ ವಲಸಿಗರ ಮನೆಗಳ ತೆರವು ವಿಚಾರದಲ್ಲಿ ಬಿಜೆಪಿ ತನ್ನ ಸತ್ಯಶೋಧನಾ ಸಮಿತಿ ರಚಿಸಿದ್ದು, ವಿವರವಾದ ವರದಿ ಸಲ್ಲಿಸಲು ಸಮಿತಿಗೆ ಸೂಚಿಸಲಾಗಿದೆ.
ಸರ್ಕಾರಿ ಭೂಮಿ ಅತಿಕ್ರಮಣ ತೆರವುಗೊಳಿಸುವ ಅಭಿಯಾನದ ಭಾಗವಾಗಿ ಪರಿಶೀಲಿಸಿ ವರದಿ ಸಲ್ಲಿಸಲು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಬುಧವಾರ "ಸತ್ಯ ಶೋಧನಾ ಸಮಿತಿ"ಯನ್ನು ರಚಿಸಿದ್ದಾರೆ. ಏಳು ಸದಸ್ಯರ ಈ ಸಮಿತಿಯು ಶಾಸಕರಾದ ಎಸ್.ಆರ್ ವಿಶ್ವನಾಥ್ ಮತ್ತು ಎಸ್ ಮುನಿರಾಜು ಸೇರಿದಂತೆ ಬಿಜೆಪಿ ಶಾಸಕರು ಮತ್ತು ನಾಯಕರನ್ನು ಒಳಗೊಂಡಿದೆ.
ಬೆಂಗಳೂರು ನಗರ ಉತ್ತರ ಭಾಗದ ಯಲಹಂಕದ ಕೋಗಿಲು ಬಳಿಯ ಫಕೀರ್ ಕಾಲೋನಿ ಮತ್ತು ವಾಸಿಂ ಲೇಔಟ್ನಲ್ಲಿ ಮನೆಗಳನ್ನು ಕೆಡವಿದ ಹಿಂದಿನ ಸತ್ಯ ಅರಿಯಲು ಸಮಿತಿಯನ್ನು ರಚಿಸಲಾಗಿದೆ ಎಂದು ವಿಜಯೇಂದ್ರ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸಮಿತಿಯು ಸ್ಥಳಕ್ಕೆ ಭೇಟಿ ನೀಡಿ, ವಿಚಾರಣೆ ನಡೆಸಿ ಒಂದು ವಾರದೊಳಗೆ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.
ಡಿಸೆಂಬರ್ 20 ರಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ ಪ್ರಸ್ತಾವಿತ ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕಾಗಿ ಅತಿಕ್ರಮಣಗಳನ್ನು ತೆರವುಗೊಳಿಸಲು ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು. ಯಾವುದೇ ಅಧಿಕೃತ ಅನುಮತಿಯಿಲ್ಲದೆ ಮನೆಗಳನ್ನು ನಿರ್ಮಿಸಲಾಗಿದೆ ಎಂಬುದನ್ನು ಮನಗಂಡು ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಬುಧವಾರ ಕೋಗಿಲು ಬಡಾವಣೆಗೆ ತೆರಳಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, 'ಕಾಂಗ್ರೆಸ್ ಸರ್ಕಾರವು ತನ್ನ ಓಲೈಕೆ ರಾಜಕೀಯದಿಂದಾಗಿ ರಾಜ್ಯದಲ್ಲಿ 'ಮಿನಿ ಬಾಂಗ್ಲಾದೇಶ'ವನ್ನು ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು. ಅಕ್ರಮ ಮನೆಗಳನ್ನು ಕೆಡವಿದರೂ ಇನ್ಯಾರದ್ದೋ ಒತ್ತಡದಿಂದ ಹೊರ ರಾಜ್ಯಗಳ ಜನರಿಗೆ ಮನೆಗಳನ್ನು ಹಂಚಿಕೆ ಮಾಡಲು ಸರ್ಕಾರ ಮುಂದಾಗಿದೆ, ಇದಕ್ಕೆ ನಾವು ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಸರ್ಕಾರ ಕೇವಲ ಮುಸ್ಲಿಂ ಓಲೈಕೆಗಾಗಿ ಈ ರೀತಿ ಮಾಡುತ್ತಿದ್ದಾರೆ. ಹಾಗಾದ್ರೆ ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಮನೆ ಕಳಕೊಂಡ 13 ಸಾವಿರ ಮಂದಿಗೆ ಏನು ಮಾಡುತ್ತದೆ, ಅವರು ಮನುಷ್ಯರಲ್ವಾ ಎಂದು ಪ್ರಶ್ನಿಸಿದರು.
The BJP has formed a seven-member fact-finding committee to investigate the demolition of alleged illegal migrant homes in Bengaluru’s Kogilu Layout. Karnataka BJP president B.Y. Vijayendra directed the committee to inspect the site and submit a detailed report within a week.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm