ಬ್ರೇಕಿಂಗ್ ನ್ಯೂಸ್
30-12-20 08:40 pm Mangaluru Correspondent ಕರ್ನಾಟಕ
ಬೆಂಗಳೂರು, ಡಿ.30: ಗ್ರಾಮ ಪಂಚಾಯತಿ ಚುನಾವಣೆಯ ಫಲಿತಾಂಶ ಪ್ರಕಟಣೆ ವಿಚಾರದಲ್ಲಿ ಟಿವಿ ವಾಹಿನಿಗಳಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ.
ಗ್ರಾಮ ಪಂಚಾಯತಿ ಚುನಾವಣೆ ಪಕ್ಷ ರಹಿತವಾಗಿರುತ್ತದೆ. ಆದರೆ, ಕೆಲವು ಟಿವಿ ವಾಹಿನಿಗಳು ಗ್ರಾಪಂ ಚುನಾವಣೆಯ ಫಲಿತಾಂಶ ಪ್ರಕಟಣೆಯ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಆಧಾರಿತ ಚುನಾವಣೆಯ ರೀತಿ ಪ್ರಸಾರ ಮಾಡುತ್ತಿದೆ. ಇದರಿಂದ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿದಂತಾಗುತ್ತದೆ.

ಅಲ್ಲದೆ, ಪಕ್ಷ ರಹಿತ ಚುನಾವಣೆ ಆಗಿರುವ ಸಂದರ್ಭದಲ್ಲಿ ಯಾವುದೇ ಆಧಾರ ಇಲ್ಲದೆ ರಾಜಕೀಯ ಪಕ್ಷಗಳ ಪರ ಫಲಿತಾಂಶ ಪ್ರಸಾರ ಮಾಡಬಾರದು. ಈ ಬಗ್ಗೆ ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗೆ ಸೂಚನೆ ನೀಡುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಿಗೆ ರಾಜ್ಯ ಚುನಾವಣಾ ಆಯೋಗದಿಂದ ಸುತ್ತೋಲೆ ಮೂಲಕ ನಿರ್ದೇಶನ ನೀಡಲಾಗಿದೆ.
ಗ್ರಾಪಂ ಚುನಾವಣೆ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಡಿ.31 ರ ವರೆಗೂ ನಡೆಯಲಿದೆ. ಈ ಮಧ್ಯೆ ಪ್ರಸಾರ ಮಾಧ್ಯಮಗಳು ನಿರ್ದಿಷ್ಟ ರಾಜಕೀಯ ಪಕ್ಷಗಳು ಗ್ರಾಪಂ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾಗಿ ಪ್ರಕಟ ಮಾಡುವಂತಿಲ್ಲ ಎಂದಿದ್ದರೂ, ಪಕ್ಷಗಳ ಬೆಂಬಲಿತರು ಎನ್ನುವ ನೆಲೆಯಲ್ಲಿ ಪ್ರಸಾರ ಮಾಡುತ್ತಿವೆ. ಈ ವೇಳೆ, ಹೆಚ್ಚಿನ ಬಾರಿ ರಾಜಕೀಯ ಪಕ್ಷಗಳ ನಾಯಕರು ಕೂಡ ತಮ್ಮ ಪಕ್ಷಗಳಿಗೇ ಗೆಲುವು ಅನ್ನುವ ನೆಲೆಯಲ್ಲಿ ಹೇಳಿಕೆ ನೀಡುತ್ತಾರೆ. ಅಲ್ಲದೆ, ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತಾರೆ. ಅಭ್ಯರ್ಥಿಗಳ ಪರವಾಗಿ ರಾಜಕೀಯ ಪಕ್ಷಗಳ ಬಾವುಟ ಹಿಡಿದು ವಿಜಯೋತ್ಸವ ಆಚರಣೆಯೂ ನಡೆಯುತ್ತದೆ. ಈ ವೇಳೆ, ಮಾಧ್ಯಮಗಳು ಕೂಡ ಅದನ್ನೇ ಪ್ರಸಾರ ಮಾಡುತ್ತಿರುವುದು ಸಾಮಾನ್ಯ ಎಂಬಂತಾಗಿದೆ. ಈ ಬಗ್ಗೆ ಎಚ್ಚರಿಸಬೇಕಾದ ಮಾಧ್ಯಮಗಳು ಅದನ್ನೇ ಪ್ರಸಾರ ಮಾಡುತ್ತಿರುವ ಬಗ್ಗೆ ಚುನಾವಣಾ ಆಯೋಗ ಪರೋಕ್ಷವಾಗಿ ಚಾಟಿ ಬೀಸಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 09:03 pm
HK News Staffer
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm