ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿಸಿ, ಹೊಡೆದಾಡಿಕೊಂಡ ಬಿಜೆಪಿ - ಕಾಂಗ್ರೆಸ್ ಶಾಸಕರು ; ಬೀದರ್ ಕೆಡಿಪಿ ಸಭೆಯಲ್ಲಿ ಡಿಶುಂ - ಡಿಶುಂ !

05-01-26 10:06 pm       HK News Desk   ಕರ್ನಾಟಕ

ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ನಡೆದ ಜಿಲ್ಲಾಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯಲ್ಲಿ ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದಲಿಂಗಪ್ಪ ಪಾಟೀಲ್ ಹಾಗೂ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ಪರಸ್ಪರ ಕೈ ಕೈ ಮಿಲಾಯಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡರು.

ಬೀದರ್, ಜ.05: ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ನಡೆದ ಜಿಲ್ಲಾಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯಲ್ಲಿ ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದಲಿಂಗಪ್ಪ ಪಾಟೀಲ್ ಹಾಗೂ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ಪರಸ್ಪರ ಕೈ ಕೈ ಮಿಲಾಯಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡರು.

ಇದರಿಂದ ಸಭೆಯಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ಬಳಿಕ ಸಭೆಯನ್ನೇ ಮುಂದೂಡಲಾಯಿತು.

ಹುಮನಾಬಾದ್ ಮತ ಕ್ಷೇತ್ರದ ಅರಣ್ಯ ಜಮೀನಿನ ಕುರಿತು ಸಭೆಯಲ್ಲಿ ಚರ್ಚೆ ನಡೆಯುತ್ತಿತ್ತು. ಚರ್ಚೆಯಲ್ಲಿ ಭಾಗವಹಿಸಿ ಡಾ. ಸಿದ್ದಲಿಂಗಪ್ಪ ಪಾಟೀಲ ಹಾಗೂ ಭೀಮರಾವ್  ಮಾತನಾಡುತ್ತಿದ್ದರು. ಈ ವೇಳೆ ಇಬ್ಬರು ಪರಸ್ಪರ ಆರೋಪ-ಪ್ರತ್ಯಾತೋಪ, ಟೀಕೆ-ಟಿಪ್ಪಣಿಯಲ್ಲಿ ತೊಡಗಿದರು.

ಸಿದ್ದಲಿಂಗಪ್ಪ ಪಾಟೀಲ್ ಮಾತನಾಡುವಾಗ  ಭೀಮರಾವ್ ಪಾಟೀಲ್ ಅವರ ಬಳಿ ಹೋಗಿ ಜಗಳ ಮಾಡಿ ಕೈ ಕೈ ಮಿಲಾಯಿಸಿ ಜೋರು ಧ್ವನಿಯಲ್ಲಿ ನಿಂದಿಸಿಕೊಂಡರು. ಪರಿಸ್ಥಿತಿ‌ ಕೈಮೀರುತ್ತಿದ್ದಾಗ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ ಮಧ್ಯಪ್ರವೇಶಿಸಿ ಜಗಳ ಬಿಡಿಸಿದರು.
ಆನಂತರ ಅಲ್ಲೇ ಇದ್ದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ವೇದಿಕೆಯಿಂದ ಕೆಳಗಿಳಿದು ಮಧ್ಯ ಪ್ರವೇಶಿಸಿ ವಾತಾವರಣ ತಿಳಿಗೊಳಿಸಿದರು.

ಆನಂತರ ಅನಿರ್ದಿಷ್ಟ ಅವಧಿಗೆ ಸಭೆ ಮುಂದೂಡಲಾಗಿದೆ ಎಂದು ಘೋಷಿಸಲಾಯಿತು. ಯಾವುದೇ ರೀತಿಯ ಚರ್ಚೆಯಿಲ್ಲದೇ ಸಭೆ ಮೊಟಕುಗೊಂಡಿತು.

A quarterly KDP review meeting at the District Panchayat office turned chaotic when BJP MLA Dr. Siddalingappa Patil and Congress MLC Bhimrao Patil engaged in a heated verbal exchange that escalated into a physical scuffle.