ಬ್ರೇಕಿಂಗ್ ನ್ಯೂಸ್
07-01-26 03:07 pm HK News Desk ಕರ್ನಾಟಕ
ಹುಬ್ಬಳ್ಳಿ, ಜ.7 : ಬಿಜೆಪಿ ಕಾರ್ಯಕರ್ತ ಮಹಿಳೆಯನ್ನು ಇಲ್ಲಿನ ಕೇಶ್ವಾಪುರ ಪೊಲೀಸರು ಹಲ್ಲೆ ಪ್ರಕರಣ ಸಂಬಂಧಿಸಿ ಬಂಧಿನ ಮಾಡಿ ಕರೆದೊಯ್ಯುವ ವೇಳೆ ಹಲ್ಲೆಗೈದು ವಿವಸ್ತ್ರಗೊಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಕಾರ್ಪೊರೇಟರ್ ಕೊಟ್ಟ ದೂರಿನ ಮೇಲೆ ಬಿಜೆಪಿ ಮಹಿಳಾ ಕಾರ್ಯಕರ್ತೆಯ ಬಂಧನಕ್ಕೆ ಪೊಲೀಸರು ಮುಂದಾಗಿದ್ದು, ಈ ವೇಳೆ ಬಟ್ಟೆ ಹರಿದುಕೊಂಡ ಘಟನೆ ನಡೆದಿದೆ.
ಜನವರಿ 1ರಂದು ಮತಪಟ್ಟಿ ಪರಿಷ್ಕರಣೆ ಸಂಬಂಧಿಸಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಬಿಜೆಪಿಯ ಸುಜಾತಾ ಹಂಡಿ ಎಂಬವರು ಅಧಿಕಾರಿಗಳ ಜೊತೆ ಸೇರಿ ಮತದಾರ ಪಟ್ಟಿಯಿಂದ ಮತದಾರರನ್ನು ತೆರವು ಮಾಡುತ್ತಿದ್ದಾರೆಂದು ಕಾಂಗ್ರೆಸ್ ಕಾರ್ಪೊರೇಟರ್ ಸುವರ್ಣ ಆರೋಪ ಮಾಡಿದ್ದರು. ಈ ವಿಚಾರದಲ್ಲಿ ಇಬ್ಬರ ನಡುವೆ ಜಗಳವಾಗಿ ಸುಜಾತಾ ವಿರುದ್ಧ ದೂರು ದಾಖಲಾಗಿತ್ತು. ಇದರಂತೆ, ಪೊಲೀಸರು ಸುಜಾತಾ ಬಂಧನಕ್ಕೆ ತೆರಳಿದ್ದು ಈ ವೇಳೆ ಪೊಲೀಸರು ಆಕೆಯನ್ನು ಬಂಧಿಸಿ ಕರೆದೊಯ್ಯುವ ವೇಳೆ ರಂಪ ಆಗಿದೆ. ಎಳೆದಾಡಿದ ವೇಳೆ ಬಟ್ಟೆ ಹರಿದಿದ್ದು ಪೊಲೀಸರ ವರ್ತನೆ ಬಗ್ಗೆ ಟೀಕೆ ಕೇಳಿಬಂದಿದೆ. ಪೊಲೀಸರು ವಾಹನಕ್ಕೆ ಹತ್ತಿಸುವ ವೇಳೆ ಎಳೆದಾಡಿದ್ದಾರೆಂದು ಕುಟುಂಬ ಸದಸ್ಯರು ಆರೋಪಿಸಿದ್ದು ಇದರ ವಿಡಿಯೋ ವೈರಲ್ ಆಗದೆ.


ಪೊಲೀಸರು ಮಹಿಳೆಯ ಬಟ್ಟೆ ಬಿಚ್ಚಿ ಥಳಿಸಿದ್ದಾರೆಂದು ವ್ಯಾಪಕ ಟೀಕೆ ವ್ಯಕ್ತವಾಗಿದೆ. ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್, “ಪೊಲೀಸರು ಮಹಿಳೆಯ ಮೇಲೆ ಹಲ್ಲೆ ಮಾಡಿಲ್ಲ. ಬಂಧನದ ವೇಳೆ ಪ್ರತಿರೋಧ ಒಡ್ಡಿದ ಸಂತ್ರಸ್ತೆಯೇ ಸ್ವತಃ ತನ್ನ ಬಟ್ಟೆಗಳನ್ನು ಹರಿದುಕೊಂಡಿದ್ದಾಳೆ. ಅಲ್ಲದೆ, ಪೊಲೀಸರಿಗೆ ಕಚ್ಚಿ ಗಾಯಗೊಳಿಸಲು ಪ್ರಯತ್ನಿಸಿದ್ದಾಳೆ. ಈ ಬಗ್ಗೆ ಆಕೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.
ಬಂಧನದ ಸಂದರ್ಭದಲ್ಲಿ ಪೊಲೀಸರ ಜೊತೆ ಅನುಚಿತ ವರ್ತನೆ ತೋರಿದ್ದಾರೆ ಎಂದು ಮತ್ತೊಂದು ದೂರು ದಾಖಲಾಗಿದೆ. ಇದೀಗ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ ಬದಿಗಿಟ್ಟು ಕೇಶ್ವಾಪುರ ಪೊಲೀಸರೇ ಆಕೆಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
A controversy has erupted after allegations that Keshwapur police in Hubballi manhandled and partially stripped a BJP woman worker while taking her into custody in connection with an assault case. The arrest was made based on a complaint filed by a Congress Corporator, and during the arrest, the woman’s clothes were torn, leading to widespread criticism of the police’s behaviour.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm