ಬ್ರೇಕಿಂಗ್ ನ್ಯೂಸ್
07-01-26 10:33 pm Bangalore Correspondent ಕರ್ನಾಟಕ
ಬೆಂಗಳೂರು, ಜ 07 : ಅತಿ ಹೆಚ್ಚು ದಿನಗಳ ಕಾಲ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಮಾಡಿರುವ ಸಿದ್ದರಾಮಯ್ಯ ಅವರ ಸಾಧನೆ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ದಿ.ದೇವರಾಜ ಅರಸು ಅವರೊಂದಿಗೆ ಹಾಲಿ ಸಿಎಂ ಅವರನ್ನು ಹೋಲಿಸಲಾಗದು ಎಂದಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಬಿಎಸ್ವೈ, "ಸಿದ್ದರಾಮಯ್ಯ ಅವರು ಅತಿ ಹೆಚ್ಚು ದಿನಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ ಸರಿ. ಆದರೆ ದೇವರಾಜ ಅರಸು ಅವರ ಆಡಳಿತ ವೈಖರಿಯೇ ಬೇರೆ, ಇವರ ಆಡಳಿತ ವೈಖರಿಯೇ ಬೇರೆ. ಅವರ ಜೊತೆ ಇವರನ್ನು ಹೋಲಿಸಲಾಗದು" ಎಂದು ವ್ಯಾಖ್ಯಾನಿಸಿದರು.
"ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಕಡೆ ಬಿಜೆಪಿ ವಿಶೇಷವಾದ ಗಮನ ಕೊಡಲಿದೆ. ಸಂಘಟನೆ ಬಲಪಡಿಸುವ ದೃಷ್ಟಿಯಿಂದ ಇಂದಿನಿಂದ ರಾಜ್ಯಾಧ್ಯಕ್ಷರು ಮತ್ತು ಎಲ್ಲ ಪ್ರಮುಖರು ಸೇರಿ ಪ್ರತಿ ಜಿಲ್ಲಾ ಪ್ರಮುಖರ ಸಮಾವೇಶವನ್ನು ಮಾಡುತ್ತಿದ್ದೇವೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆಯೂ ಚರ್ಚಿಸುತ್ತಿದ್ದೇವೆ. ಈ ಸರ್ಕಾರದ ದುರಾಡಳಿತವನ್ನು ಜನರ ಗಮನಕ್ಕೆ ತರುವ ಮೂಲಕ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಕಡೆ ವಿಶೇಷವಾದ ಗಮನ ಕೊಡಲು ತೀರ್ಮಾಸಲಾಗಿದೆ" ಎಂದರು.
"ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಈ ಸಂದರ್ಭದಲ್ಲಿ ಸಮಾವೇಶದ ಮೂಲಕ ಸಾಧನೆ ಮಾಡುವುದಾಗಿ ಹೊರಟಿರುವುದನ್ನು ಜನರು ಮೆಚ್ಚುವುದಿಲ್ಲ. ಈಗಾಗಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಪಡೆಯುತ್ತಿದೆ. ಮುಂದಿನ ಚುನಾವಣೆಯಲ್ಲೂ ನಾವು ನಿಶ್ಚಿತವಾಗಿ ದೊಡ್ಡ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸಬೇಕು ಎಂಬ ದೃಷ್ಟಿಯಿಂದ ಕೆಲಸ ಮಾಡುತ್ತಿದ್ದೇವೆ. ನಮ್ಮ ಕಾರ್ಯಕರ್ತರೂ ತುಂಬ ಉತ್ಸಾಹದಿಂದ ಮುಂದೆ ಬಂದಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದನ್ನು ತಾವು ಗಮನಿಸಲಿದ್ದೀರಿ" ಎಂದು ವಿಶ್ವಾಸ ವ್ಯಕ್ತಪಡಿಸಿದರು.
Reacting to Chief Minister Siddaramaiah becoming the longest-serving CM of Karnataka, former Chief Minister B.S. Yediyurappa said Siddaramaiah cannot be compared with former CM Devaraj Urs.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm