ಬ್ರೇಕಿಂಗ್ ನ್ಯೂಸ್
13-01-26 10:13 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ 13 : ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದ್ದು, ಅಕಾಲಿಕ ಮಳೆಯಿಂದ ಕಾಫಿ, ಅಡಿಕೆ, ಕಾಳುಮೆಣಸು ಬೆಳೆಗಾರರು ಕಂಗಲಾಗಿದ್ದಾರೆ.
ಕಳಸ, ಕುದುರೆಮುಖ, ಹೊರನಾಡು, ಶೃಂಗೇರಿ, ಚಿಕ್ಕಮಗಳೂರು ಕೆಲವು ಭಾಗದಲ್ಲಿ ಮಳೆಯಾಗಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ಮಳೆಯಾಗಿದೆ. ಮಳೆಯೊಂದಿಗೆ ಗಾಳಿ ಬೀಸಿದ್ದು ವಿಪರೀತ ಚಳಿಯ ವಾತಾವರಣದಿಂದ ಇಲ್ಲಿನ ಜನರು ರೋಸಿ ಹೋಗಿದ್ದಾರೆ.
ವರ್ಷದ ಮೊದಲ ವರ್ಷಧಾರೆಗೆ ಕಣದಲ್ಲಿ ಒಣಗಲು ಹಾಕಿದ್ದ ಕಾಫಿ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದೆ. ಇದ್ದಕ್ಕಿಂದಂತೆ ಆರಂಭವಾದ ಧಾರಾಕಾರ ಮಳೆಯಿಂದ ಬಾರೀ ನಷ್ಟ ಉಂಟಾಗಿದೆ.

ಈಗಾಗಲೇ ಕಾಫಿ ಮತ್ತು ಅಡಿಕೆ ಕೊಯ್ದು ಆರಂಭವಾಗಿದ್ದು, ಮೋಡ ಕವಿದ ವಾತಾವರಣದಲ್ಲಿ ಅಡಿಕೆ ಮತ್ತು ಕಾಫಿ ಕಾಳು ಒಣಗಿಸುವುದು ದೊಡ್ಡ ಸವಾಲಾಗಿತ್ತು. ಅಕಾಲಿಕ ಮಳೆಯಿಂದ ಬೆಳೆಗಾರರು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿದ್ದಾರೆ.
ಮಳೆಯಿಂದ ಭತ್ತದಕ್ಕೂ ಹಾನಿಯಾಗಿದೆ. ಕಟಾವಿಗೆ ಬಂದಿರುವ ಕಾಫಿ ಹಣ್ಣುಗಳು ಮಳೆಗೆ ಗಿಡದಿಂದ ಉದುರುವ ಆತಂಕ ಎದುರಾಗಿದೆ. ಒಟ್ಟಾರೆಯಾಗಿ ವರ್ಷದ ಮೊದಲ ವರ್ಷಧಾರೆ ರೈತರು ಮತ್ತು ಬೆಳೆಗಾರರಲ್ಲಿ ಆತಂಕವನ್ನು ಮೂಡಿಸಿದೆ. ಮಳೆ ಹೀಗೆ ಮುಂದುವರಿದರೆ ಇನ್ನಷ್ಟು ನಷ್ಟ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ.
ಕಳಸ, ಕುದುರೆಮುಖ, ಹೊರನಾಡು, ಶೃಂಗೇರಿ, ಮೂಡಿಗೆರೆ, ಬಾಳೆಹೊನ್ನೂರು ಹಾಗೂ ಚಿಕ್ಕಮಗಳೂರು ಸುತ್ತಮುತ್ತ ಒಂದು ಗಂಟೆಗಳ ಕಾಲ ಭಾರೀ ಗಾಳಿಯೊಂದಿಗೆ ಮಳೆಯಾಗಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮೋಡ ಕವಿದ ವಾತಾವರಣದ ನಡುವೆ ಕಾಫಿ ಒಣಗಿಸುವುದೇ ದೊಡ್ಡ ಸವಾಲಾಗಿತ್ತು. ಈ ಸಮಯದಲ್ಲಿ ಇದ್ದಕ್ಕಿದ್ದಂತೆ ಸುರಿದ ಈ ಧಾರಾಕಾರ ಮಳೆ ಅನ್ನದಾತರ ಆತಂಕವನ್ನು ಇಮ್ಮಡಿಗೊಳಿಸಿದೆ.
ಅಕಾಲಿಕ ಮಳೆಯ ಹೊಡೆತಕ್ಕೆ ಗಿಡದಲ್ಲೇ ಹಣ್ಣಾಗಿರುವ ಕಾಫಿ ನೆಲಕ್ಕುದುರುತ್ತಿದ್ದರೆ, ಮತ್ತೊಂದೆಡೆ ಕಟಾವಿಗೆ ಬಂದಿರುವ ಭತ್ತದ ಬೆಳೆ ಕೂಡ ನೆಲಕಚ್ಚುವ ಭೀತಿ ಎದುರಾಗಿದೆ.
Heavy unseasonal rainfall in the Malenadu region of Chikkamagaluru district has left coffee growers devastated. Areas including Kalasa, Kudremukh, Horanadu, Sringeri, Mudigere, Balehonnur and parts of Chikkamagaluru witnessed intense rainfall accompanied by strong winds for over an hour, disrupting normal life.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm