ಬ್ರೇಕಿಂಗ್ ನ್ಯೂಸ್
23-01-26 03:21 pm Bangalore Correspondent ಕರ್ನಾಟಕ
ಬೆಂಗಳೂರು, ಜ.23 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಎಸ್.ಕೆ. ಮರಿಗೌಡ ಕೂಡ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳನ್ನು ಪಡೆದಿದ್ದ ವಿಚಾರ ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆಯಿಂದ ಬೆಳಕಿಗೆ ಬಂದಿದೆ. ಈ ಬೆನ್ನಲ್ಲೇ ಮರಿಗೌಡಗೆ ಸಂಬಂಧಿಸಿದ 20.85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.
ಮುಡಾ ಅಧ್ಯಕ್ಷರಾಗಿದ್ದ ಮರಿಗೌಡ ಅಕ್ರಮ ಮಾರ್ಗದಲ್ಲಿ ಆಗಿನ ಮುಡಾ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಸಹಾಯದ ಮೂಲಕ ನಿವೇಶನಗಳನ್ನು ಪಡೆದಿದ್ದರು. ಮರಿಗೌಡ ಅವರು ದಿನೇಶ್ ಕುಮಾರ್ ಅವರಿಂದ ಅಕ್ರಮ ಲಾಭ ಪಡೆದಿರುವುದು ತನಿಖೆಯಲ್ಲಿ ಗೊತ್ತಾಗಿದೆ. ಮರಿಗೌಡ ಅವರು ಮುಡಾದಿಂದ ವಾಮಮಾರ್ಗದಲ್ಲಿ ಮಂಜೂರು ಮಾಡಿಸಿಕೊಂಡಿದ್ದ ಆರು ನಿವೇಶನಗಳು ಹಾಗೂ ಮೂರು ವಸತಿ ಸಂಕೀರ್ಣ ಕಟ್ಟಡಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ಸ್ಥಿರಾಸ್ತಿ ಮೌಲ್ಯ 20.85 ಕೋಟಿ ರೂ.ಗಳಾಗಿದೆ ಎಂದು ಇ.ಡಿ ತಿಳಿಸಿದೆ.
460 ಕೋಟಿ ರೂ. ಆಸ್ತಿ ಮುಟ್ಟುಗೋಲು
ಮುಡಾ ನಿವೇಶನಗಳನ್ನು ಅಕ್ರಮ ಮಾರ್ಗದಲ್ಲಿ ಹಂಚಿಕೆ ಮಾಡಿರುವ ಪ್ರಕರಣ ಸಂಬಂಧ ಇ.ಡಿ ತನಿಖೆ ನಡೆಸುತ್ತಿದೆ. ಇದುವರೆಗೂ 460 ಕೋಟಿ ರೂ. ಮೌಲ್ಯದ ఆస్తి ಮುಟ್ಟುಗೋಲು ಹಾಕಿಕೊಂಡಿದೆ. ಈ ಹಿಂದೆ ಜಿ.ಟಿ.ದಿನೇಶ್ ಕುಮಾರ್ ಮತ್ತಿತರರು ಅಕ್ರಮವಾಗಿ ಸಂಪಾದನೆ ಮಾಡಿದ್ದ 283 ನಿವೇಶನಗಳನ್ನು ಇ.ಡಿ ಜಪ್ತಿ ಮಾಡಿತ್ತು.
'ಬಿ' ರಿಪೋರ್ಟ್ ವಿಚಾರಣೆ 28ಕ್ಕೆ
ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ. ಪಾರ್ವತಿ ಸೇರಿದಂತೆ ಐದು ಮಂದಿಗೆ ಕ್ಲೀನ್ ಚಿಟ್ ನೀಡಿದ್ದ 'ಬಿ' ರಿಪೋರ್ಟ್ ಆಕ್ಷೇಪಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜ.28ಕ್ಕೆ ಮುಂದೂಡಿದೆ. ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಮುಡಾ ನಿವೇಶನ ಹಂಚಿಕೆಯಲ್ಲಿ ಸಿಎಂ ಹಾಗೂ ಇತರರ ಪಾತ್ರವಿಲ್ಲ ಎಂದು ದೋಷಮುಕ್ತಗೊಳಿಸಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಜತೆಗೆ, ನ್ಯಾಯಾಲಯದ ಅನುಮತಿ ಪಡೆದು ತನಿಖೆ ಮುಂದುವರಿಸಿದ್ದರು. 'ಬಿ' ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
The Enforcement Directorate has attached assets worth ₹20.85 crore belonging to S.K. Marigowda, a close aide of Karnataka Chief Minister Siddaramaiah, in connection with the MUDA illegal site allotment case. ED investigations revealed that Marigowda allegedly acquired plots and buildings through unlawful means with the help of former MUDA commissioner G.T. Dinesh Kumar.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
15-04-26 01:18 pm
HK News Staffer
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm