ಬ್ರೇಕಿಂಗ್ ನ್ಯೂಸ್
30-01-26 12:20 pm Bangalore Correspondent ಕರ್ನಾಟಕ
ಬೆಂಗಳೂರು, ಜ.30 : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದನ್ನು ರಾಜ್ಯ ಸರ್ಕಾರ ಒಪ್ಪಿಕೊಂಡಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ವಿಮಾ ಕಂಪನಿಗಳು ಮತ್ತು ಸರ್ಕಾರದ ಸಮೀಕ್ಷಾ ವಿಭಾಗವು ರೈತರ ಹಿತರಕ್ಷಣೆಯಲ್ಲಿ ವಿಫಲವಾಗಿವೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಧಾನ ಪರವಾಗಿ ಪರಿಷತ್ತಿನಲ್ಲಿ ಕಿಶೋರ್ ಕುಮಾರ್ ಕೇಳಿದ ಪ್ರಶ್ನೆಗೆ ಸರ್ಕಾರ ಉತ್ತರ ನೀಡಿದೆ. ಸರ್ಕಾರ ನೀಡಿರುವ ದಾಖಲೆಯಂತೆ ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ 44,653 ರೈತರಿಗೆ ಸೇರಬೇಕಾದ 4,662.09 ಲಕ್ಷ ವಿಮಾ ಪರಿಹಾರ ಇನ್ನೂ ಪಾವತಿಯಾಗಿಲ್ಲ. ಉಡುಪಿ ಜಿಲ್ಲೆಯಲ್ಲೂ ನೂರಾರು ರೈತರಿಗೆ ವಿಮಾ ಪರಿಹಾರ ಬಾಕಿಯಿದ್ದು ಸರ್ಕಾರ ನಿರ್ಲಕ್ಷ್ಯ ವಹಿಸಿರುವುದನ್ನು ಕಿಶೋರ್ ಕುಮಾರ್ ಆಕ್ಷೇಪಿಸಿದ್ದಾರೆ.
ದಾಖಲೆಗಳಲ್ಲಿ ದೂರುಗಳೇ ಇಲ್ಲ !
ಕರಾವಳಿ ಭಾಗದ ರೈತರು ಬೆಳೆ ಸಮೀಕ್ಷೆ ಮತ್ತು ವಿಮೆಯ ಬಗ್ಗೆ ನಿರಂತರ ದೂರು ನೀಡುತ್ತಿದ್ದರೂ, ಸರ್ಕಾರದ ಅಧಿಕೃತ ದಾಖಲೆಗಳ ಪ್ರಕಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಂದ ಯಾವುದೇ ದೂರು ಸಲ್ಲಿಕೆಯಾಗಿಲ್ಲ ಎಂದು ತೋರಿಸಲಾಗಿದೆ. ಇದು ಅಧಿಕಾರಿಗಳು ನೀಡುತ್ತಿರುವ ತಪ್ಪು ಮಾಹಿತಿಯೇ ಅಥವಾ ರೈತರ ದೂರುಗಳನ್ನು ಕಡೆಗಣಿಸಲಾಗುತ್ತಿದೆಯೇ ಎಂಬ ಅನುಮಾನ ಮೂಡಿಸಿದೆ.
ಈ ಬಾರಿ ಬೆಳೆ ಸಮೀಕ್ಷೆ ಅವೈಜ್ಞಾನಿಕವಾಗಿ ನಡೆದಿದ್ದು, ತೋಟಗಾರಿಕಾ ಬೆಳೆಗಾರರಿಗೆ ದೊಡ್ಡ ಅನ್ಯಾಯವಾಗಿದೆ. ಈ ಬಗ್ಗೆ ಉನ್ನತ ಮಟ್ಟದ ಆಂತರಿಕ ತನಿಖೆ ನಡೆಸಿ, ರೈತರಿಗೆ ಸುಳ್ಳು ಮಾಹಿತಿ ನೀಡುತ್ತಿರುವ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕಿಶೋರ್ ಕುಮಾರ್ ಸಚಿವರನ್ನು ಒತ್ತಾಯಿಸಿದ್ದಾರೆ.
ಬಾಕಿ ಇರುವ ಒಟ್ಟು 26,512.52 ಲಕ್ಷ ಹಣವನ್ನು ರಾಜ್ಯದ 1,94,691 ರೈತರಿಗೆ ತಕ್ಷಣವೇ ಬಿಡುಗಡೆ ಮಾಡಲು ವಿಮಾ ಕಂಪನಿಗಳಿಗೆ ಸರ್ಕಾರ ಗಡುವು ನೀಡಬೇಕು. "ನಮ್ಮ ಭಾಗದ ರೈತರು ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರವಲ್ಲದೆ, ಅಧಿಕೃತವಾಗಿ ಈ ಪತ್ರಿಕಾ ಮಾಹಿತಿಯ ಆಧಾರದ ಮೇಲೆ ಅಧಿಕಾರಿಗಳನ್ನು ಪ್ರಶ್ನಿಸಬೇಕು. ರೈತರ ಹಕ್ಕುಗಳಿಗಾಗಿ ನಾನು ಸದನದ ಒಳಗೂ ಮತ್ತು ಹೊರಗೂ ನಿರಂತರವಾಗಿ ಹೋರಾಟ ನಡೆಸಲಿದ್ದೇನೆ" ಎಂದು ಕಿಶೋರ್ ಕುಮಾರ್ ಪುತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The Karnataka government has admitted that thousands of farmers in Dakshina Kannada and Udupi districts are yet to receive crop insurance compensation. Replying to a question by MLC Kishore Kumar Puttur, the government revealed that ₹46.62 crore remains unpaid to over 44,000 farmers in Dakshina Kannada alone, sparking criticism over official negligence and flawed crop surveys.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am