ಬ್ರೇಕಿಂಗ್ ನ್ಯೂಸ್
30-01-26 05:00 pm Bangalore Correspondent ಕರ್ನಾಟಕ
ಬೆಂಗಳೂರು, ಜ 30 : ಲಂಚದ ಆರೋಪದಲ್ಲಿ ಟ್ರ್ಯಾಪ್ಗೆ ಸಿಲುಕುತ್ತಿದ್ದಂತೆ ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಹೈಡ್ರಾಮಾ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಲಂಚ ಸ್ವೀಕರಿಸುವ ವೇಳೆ ಲೋಕಾ ಅಧಿಕಾರಿಗಳು ದಾಳಿ ನಡೆಸಿದಾಗ ಗೋವಿಂದರಾಜು ತಪ್ಪಿಸಿಕೊಳ್ಳಲು ನಾಟಕೀಯ ವರ್ತನೆ ತೋರಿಸಿದ್ದು ಸದ್ಯ ಈ ವಿಡಿಯೋ ಸಖತ್ ವೈರಲ್ ಆಗಿದೆ.
ಗೋವಿಂದ ರಾಜು ಲಂಚಕ್ಕೆ ಭೇಡಿಕೆ ಇಟ್ಟಿದ್ದಾರೆ ಎಂಬ ಮಾಹಿತಿ ಪಡೆದ ಲೋಕಾ ಅಧಿಕಾರಿಗಳು ಪಕ್ಕ ಪ್ಲ್ಯಾನ್ ಮಾಡಿಕೊಂಡು ಯೋಜನೆ ರೂಪಿಸಿ ಟ್ರ್ಯಾಪ್ ನಡೆಸಿದ್ದರು. ಲಂಚದ ಹಣ ಸ್ವೀಕರಿಸುತ್ತಿದ್ದ ಕ್ಷಣದಲ್ಲೇ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಇನ್ಸ್ಪೆಕ್ಟರ್ ಗೋವಿಂದರಾಜು ಗಾಬರಿಗೊಂಡು ಅಸಹಜವಾಗಿ ವರ್ತಿಸಿದ್ದಾನೆ.



ಲೋಕಾ ಅಧಿಕಾರಿಗ ಬಲೆಗೆ ತಗಲಕೊಂಡ ಬೆನ್ನಲ್ಲೇ ಗೋವಿಂದರಾಜು ವಿಚಿತ್ರವಾಗಿ ಚಿರಾಡಿ ಅವರಿಂದ ಬಿಡಿಸಿಕೊಳ್ಳಲು ಟ್ರೈ ಮಾಡಿದ್ದಾನೆ . ಜೊತೆಗೆ ತನಗೆ ಆರೋಗ್ಯ ಸಮಸ್ಯೆ ಇದೆ ಎಂದು ಹೇಳಿ ಗಲಾಟೆ ಮಾಡಿದ್ದು, ಕೆಲಕಾಲ ಅಧಿಕಾರಿಗಳ ಕಾರ್ಯಾಚರಣೆಗೆ ಅಡ್ಡಿ ಉಂಟುಮಾಡಿದ್ದಾನೆ. ಆದರೆ ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಭ್ರಷ್ಟನನ್ನ ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಗೋವಿಂದರಾಜು ವಿರುದ್ಧ ಭ್ರಷ್ಟಾಚಾರ ನಿರೋಧಕ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ಮುಂದುವರೆದಿದೆ. ಈ ಘಟನೆ ಪೊಲೀಸ್ ಇಲಾಖೆಯಲ್ಲಿ ಚರ್ಚೆಗೆ ಕಾರಣವಾಗಿದ್ದು, ಶಿಸ್ತು ಮತ್ತು ಹೊಣೆಗಾರಿಕೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.
ಇನ್ನೂ ದೂರುದಾರ ಸೂರಜ್ ಮಾತನಾಡಿ, “ಪ್ರತಿದಿನ ಠಾಣೆಗೆ ಕರೆಸಿ ಮಾನಸಿಕ ಹಿಂಸೆ ನೀಡಲಾಗುತ್ತಿತ್ತು. ಪ್ರಕರಣದಿಂದ ಪಾರಾಗಲು ಮೇಲಧಿಕಾರಿಗಳಿಗೆ ಹಣ ಕೊಡಬೇಕು ಎಂದು ಹೇಳಲಾಗುತ್ತಿತ್ತು. ಪೊಲೀಸ್ ಠಾಣೆ ನ್ಯಾಯ ಸಿಗುವ ಜಾಗ ಎಂದು ನಂಬಿದ್ದೆವು, ಆದರೆ ಅನುಭವವೇ ಬೇರೆ ಆಗಿತ್ತು” ಎಂದು ಹೇಳಿದ್ದಾರೆ.
ಈ ಕುರಿತು ಲೋಕಾಯುಕ್ತ ಎಸ್ಪಿ ಶಿವಪ್ರಕಾಶ್ ದೇವರಾಜು ಮಾತನಾಡಿ, “ಪ್ರಿವೆನ್ಷನ್ ಆಫ್ ಕರಪ್ಷನ್ ಆ್ಯಕ್ಟ್ ಅಡಿ ಟ್ರ್ಯಾಪ್ ಕಾರ್ಯಾಚರಣೆ ನಡೆಸಲಾಗಿದೆ. ಇನ್ಸ್ಪೆಕ್ಟರ್ ಗೋವಿಂದರಾಜು ಐದು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಒಂದು ಲಕ್ಷ ರೂ. ಈಗಾಗಲೇ ಪಡೆದಿದ್ದು, ಉಳಿದ ನಾಲ್ಕು ಲಕ್ಷ ಪಡೆಯುವಾಗ ಟ್ರ್ಯಾಪ್ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.
ಘಟನೆ ಕುರಿತು ಮಾತನಾಡಿರುವ ಕೆ ಆರ್ ಎಸ್ ಪಕ್ಷ, ಜನರು ಕೊಟ್ಟ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಮೆರೆಯುವ ಎಲ್ಲಾ ದುಷ್ಟ ಮತ್ತು ಭ್ರಷ್ಟ ಅಧಿಕಾರಿಗಳು ಹಾಗೂ ರಾಜಕಾರಣಿಗಳು ಇದನ್ನು ನೋಡಿ ಸದಾ ನೆನಪಿಟ್ಟುಕೊಳ್ಳಬೇಕು. ಬದಲಾಗದಿದ್ದರೆ ನಿಮಗೂ ಇದೇ ಗತಿ ಇಂದಲ್ಲ ನಾಳೆ ಆಗಲಿದೆ. ಪರಿಸ್ಥಿತಿ ಕೈಮೀರಿದರೆ ಭ್ರಷ್ಟರನ್ನು ಜನರು ಅಟ್ಟಾಡಿಸಿ ಹೊಡೆಯುತ್ತಾರೆ, ಎಚ್ಚರ!!! ಶ್ರೀಲಂಕಾ, ಬಾಂಗ್ಲಾ, ನೇಪಾಳ ನೆನಪಿಸಿಕೊಳ್ಳಿ ಎಂದಿದೆ.
When a #Bengaluru cop got caught red-handed by anti corruption sleuths while accepting Rs 4 lakh #bribe…he started screaming to gain public sympathy.
— TOI Bengaluru (@TOIBengaluru) January 30, 2026
The cop is inspector Govindaraju of K P Agrahara station. He threatened to implicate a man in a cheating case.@timesofindia pic.twitter.com/iz3KTKZvJL
A dramatic video of police inspector Govindaraju being caught in a Lokayukta trap while accepting a bribe has gone viral on social media. The inspector allegedly created a ruckus, cited health issues, and tried to evade arrest, but officials restrained and detained him. The incident has sparked public outrage online, raising serious questions about corruption, accountability, and discipline within the police force.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm