ಬ್ರೇಕಿಂಗ್ ನ್ಯೂಸ್
02-02-26 03:02 pm HK News Desk ಕರ್ನಾಟಕ
ತುಮಕೂರು, ಫೆ.2 : ಸಿನಿಮಾ ಕಥೆಯಂತಿರುವ ನೈಜ ಘಟನೆಯೊಂದು ತುಮಕೂರು ನಗರದಲ್ಲಿ ನಡೆದಿದೆ. ಶ್ರೀಮಂತ ಉದ್ಯಮಿಯೊಬ್ಬರ ಮಗಳು, ಮದುವೆಗೆ ಸಂಬಂಧಿಸಿದ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದರೂ, ಮನೆಯ ಪಾರ್ಟ್ ಟೈಂ ವಾಹನ ಚಾಲಕನೊಂದಿಗೆ ಓಡಿಹೋಗಿ ಮದುವೆಯಾಗಿರುವ ಘಟನೆ ಕುಟುಂಬವನ್ನೇ ಬೆಚ್ಚಿಬೀಳಿಸಿದೆ.
ತುಮಕೂರು ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ, ನಗರದ ಉದ್ಯಮಿಯೊಬ್ಬರ ಮಗಳಿಗೆ ಅವರದೇ ಮನೆಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ರವೀಶ ಎಂಬಾತನೊಂದಿಗೆ ಪ್ರೇಮಾಂಕುರವಾಗಿತ್ತು. ಈ ವಿಚಾರ ಕುಟುಂಬದವರಿಗೆ ತಿಳಿದು ಎಚ್ಚರಿಕೆ ನೀಡಲಾಗಿತ್ತು. ಈ ನಡುವೆ ಕುಟುಂಬದವರು ಹಿಂದಿನಿಂದ ನಿಶ್ಚಯಿಸಿದ್ದಂತೆ, ಯುವತಿಯ ಮಾವನ ಮಗನೊಂದಿಗೆ ಮದುವೆ ನಿಶ್ಚಯಿಸಿ, ನಿಶ್ಚಿತಾರ್ಥ ಮುಗಿಸಿದ್ದರು. ಮದುವೆ ಆಹ್ವಾನ ಪತ್ರಿಕೆ ಹಂಚಿಕೆ, ಹಾಲ್ ಬುಕ್ಕಿಂಗ್, ಊಟ ಹಾಗೂ ಅಲಂಕಾರ ವ್ಯವಸ್ಥೆ ಸೇರಿದಂತೆ ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ.
ಆದರೆ ಮದುವೆಗೆ ಇನ್ನೊಂದು ತಿಂಗಳು ಬಾಕಿ ಇರುವಾಗಲೇ, ಜನವರಿ 19ರಂದು ಯುವತಿ ಮನೆ ಬಿಟ್ಟು ರವೀಶನೊಂದಿಗೆ ಪರಾರಿಯಾಗಿದ್ದಾಳೆ. ಇಬ್ಬರೂ ಚಿಕ್ಕನಾಯಕನಹಳ್ಳಿಯಲ್ಲಿ ಮದುವೆಯಾಗಿರುವುದು ನಂತರ ಬೆಳಕಿಗೆ ಬಂದಿದೆ. ಮಗಳು ಕಾಣೆಯಾಗಿರುವ ಹಿನ್ನೆಲೆ ಕುಟುಂಬಸ್ಥರು ತುಮಕೂರು ನಗರ ಠಾಣೆಗೆ ದೂರು ನೀಡಿದ್ದರು. ಈ ವೇಳೆ, ಯುವತಿಯೇ ಪೊಲೀಸರ ಮುಂದೆ ಹಾಜರಾಗಿ, “ಕುಟುಂಬದವರಿಂದ ಬೆದರಿಕೆ ಇದೆ. ನನಗೆ ರಕ್ಷಣೆ ಬೇಕು” ಎಂದು ಕೇಳಿಕೊಂಡಿದ್ದಾಳೆ.
ಯುವತಿ ಆರೋಪಗಳಿಗೆ ಪ್ರತಿಕ್ರಿಯಿಸಿದ ಆಕೆಯ ಸಹೋದರ, “ಅವಳ ಇಚ್ಛೆಗೆ ವಿರುದ್ಧವಾಗಿ ಮದುವೆ ನಿಶ್ಚಯಿಸಿಲ್ಲ. ಅವಳ ಒಪ್ಪಿಗೆಯೊಂದಿಗೆ ಚಿನ್ನಾಭರಣ, ಸೀರೆ ಖರೀದಿ ಹಾಗೂ ಮದುವೆ ಕಾರ್ಡ್ ಮುದ್ರಣ ಮಾಡಲಾಗಿತ್ತು. ತಾಯಿಯ ಆರೋಗ್ಯ ಸಮಸ್ಯೆಯ ನಡುವೆಯೂ ಮದುವೆ ಸಿದ್ಧತೆಗಾಗಿ ಓಡಾಡುತ್ತಿದ್ದೆವು. ಮದುವೆ ಇಷ್ಟವಿಲ್ಲ ಎಂದು ಹೇಳಬಹುದಿತ್ತು. ಈ ರೀತಿಯ ನಡೆ ನಮಗೆ ಆಘಾತ ತಂದಿದೆ” ಎಂದು ತಿಳಿಸಿದ್ದಾರೆ.
ಯುವತಿ ಕಾಣೆಯಾದ ಕುರಿತು ಪ್ರಕರಣ ದಾಖಲಾದ ಬಳಿಕ, ಪ್ರೇಮಿಗಳು ಮದುವೆಯಾಗಿರುವುದು ದೃಢಪಟ್ಟಿದೆ. ಕುಟುಂಬಸ್ಥರಿಂದ ಬೆದರಿಕೆ ಆರೋಪ ಇರುವ ಹಿನ್ನೆಲೆಯಲ್ಲಿ, ಪೊಲೀಸರ ಮಧ್ಯಸ್ಥಿಕೆಯಲ್ಲಿ ರಾಜಿ ಸಂಧಾನ ನಡೆಯಿತು. ಎರಡೂ ಕಡೆಯ ಕುಟುಂಬಗಳು ಒಪ್ಪಿಗೆ ಸೂಚಿಸಿ, ಖುಲಾಸೆ ಪತ್ರಗಳಿಗೆ ಸಹಿ ಹಾಕಿದ ಬಳಿಕ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In a real-life story resembling a film plot, a wealthy businessman’s daughter eloped with her part-time family driver just a month before her wedding. Despite being engaged to her cousin and with all wedding preparations completed, the woman reportedly left home on January 19 and married the driver, Ravish, in Chikkanayakanahalli.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am