ಬ್ರೇಕಿಂಗ್ ನ್ಯೂಸ್
02-02-26 03:02 pm HK News Desk ಕರ್ನಾಟಕ
ತುಮಕೂರು, ಫೆ.2 : ಸಿನಿಮಾ ಕಥೆಯಂತಿರುವ ನೈಜ ಘಟನೆಯೊಂದು ತುಮಕೂರು ನಗರದಲ್ಲಿ ನಡೆದಿದೆ. ಶ್ರೀಮಂತ ಉದ್ಯಮಿಯೊಬ್ಬರ ಮಗಳು, ಮದುವೆಗೆ ಸಂಬಂಧಿಸಿದ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದರೂ, ಮನೆಯ ಪಾರ್ಟ್ ಟೈಂ ವಾಹನ ಚಾಲಕನೊಂದಿಗೆ ಓಡಿಹೋಗಿ ಮದುವೆಯಾಗಿರುವ ಘಟನೆ ಕುಟುಂಬವನ್ನೇ ಬೆಚ್ಚಿಬೀಳಿಸಿದೆ.
ತುಮಕೂರು ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ, ನಗರದ ಉದ್ಯಮಿಯೊಬ್ಬರ ಮಗಳಿಗೆ ಅವರದೇ ಮನೆಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ರವೀಶ ಎಂಬಾತನೊಂದಿಗೆ ಪ್ರೇಮಾಂಕುರವಾಗಿತ್ತು. ಈ ವಿಚಾರ ಕುಟುಂಬದವರಿಗೆ ತಿಳಿದು ಎಚ್ಚರಿಕೆ ನೀಡಲಾಗಿತ್ತು. ಈ ನಡುವೆ ಕುಟುಂಬದವರು ಹಿಂದಿನಿಂದ ನಿಶ್ಚಯಿಸಿದ್ದಂತೆ, ಯುವತಿಯ ಮಾವನ ಮಗನೊಂದಿಗೆ ಮದುವೆ ನಿಶ್ಚಯಿಸಿ, ನಿಶ್ಚಿತಾರ್ಥ ಮುಗಿಸಿದ್ದರು. ಮದುವೆ ಆಹ್ವಾನ ಪತ್ರಿಕೆ ಹಂಚಿಕೆ, ಹಾಲ್ ಬುಕ್ಕಿಂಗ್, ಊಟ ಹಾಗೂ ಅಲಂಕಾರ ವ್ಯವಸ್ಥೆ ಸೇರಿದಂತೆ ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ.
ಆದರೆ ಮದುವೆಗೆ ಇನ್ನೊಂದು ತಿಂಗಳು ಬಾಕಿ ಇರುವಾಗಲೇ, ಜನವರಿ 19ರಂದು ಯುವತಿ ಮನೆ ಬಿಟ್ಟು ರವೀಶನೊಂದಿಗೆ ಪರಾರಿಯಾಗಿದ್ದಾಳೆ. ಇಬ್ಬರೂ ಚಿಕ್ಕನಾಯಕನಹಳ್ಳಿಯಲ್ಲಿ ಮದುವೆಯಾಗಿರುವುದು ನಂತರ ಬೆಳಕಿಗೆ ಬಂದಿದೆ. ಮಗಳು ಕಾಣೆಯಾಗಿರುವ ಹಿನ್ನೆಲೆ ಕುಟುಂಬಸ್ಥರು ತುಮಕೂರು ನಗರ ಠಾಣೆಗೆ ದೂರು ನೀಡಿದ್ದರು. ಈ ವೇಳೆ, ಯುವತಿಯೇ ಪೊಲೀಸರ ಮುಂದೆ ಹಾಜರಾಗಿ, “ಕುಟುಂಬದವರಿಂದ ಬೆದರಿಕೆ ಇದೆ. ನನಗೆ ರಕ್ಷಣೆ ಬೇಕು” ಎಂದು ಕೇಳಿಕೊಂಡಿದ್ದಾಳೆ.
ಯುವತಿ ಆರೋಪಗಳಿಗೆ ಪ್ರತಿಕ್ರಿಯಿಸಿದ ಆಕೆಯ ಸಹೋದರ, “ಅವಳ ಇಚ್ಛೆಗೆ ವಿರುದ್ಧವಾಗಿ ಮದುವೆ ನಿಶ್ಚಯಿಸಿಲ್ಲ. ಅವಳ ಒಪ್ಪಿಗೆಯೊಂದಿಗೆ ಚಿನ್ನಾಭರಣ, ಸೀರೆ ಖರೀದಿ ಹಾಗೂ ಮದುವೆ ಕಾರ್ಡ್ ಮುದ್ರಣ ಮಾಡಲಾಗಿತ್ತು. ತಾಯಿಯ ಆರೋಗ್ಯ ಸಮಸ್ಯೆಯ ನಡುವೆಯೂ ಮದುವೆ ಸಿದ್ಧತೆಗಾಗಿ ಓಡಾಡುತ್ತಿದ್ದೆವು. ಮದುವೆ ಇಷ್ಟವಿಲ್ಲ ಎಂದು ಹೇಳಬಹುದಿತ್ತು. ಈ ರೀತಿಯ ನಡೆ ನಮಗೆ ಆಘಾತ ತಂದಿದೆ” ಎಂದು ತಿಳಿಸಿದ್ದಾರೆ.
ಯುವತಿ ಕಾಣೆಯಾದ ಕುರಿತು ಪ್ರಕರಣ ದಾಖಲಾದ ಬಳಿಕ, ಪ್ರೇಮಿಗಳು ಮದುವೆಯಾಗಿರುವುದು ದೃಢಪಟ್ಟಿದೆ. ಕುಟುಂಬಸ್ಥರಿಂದ ಬೆದರಿಕೆ ಆರೋಪ ಇರುವ ಹಿನ್ನೆಲೆಯಲ್ಲಿ, ಪೊಲೀಸರ ಮಧ್ಯಸ್ಥಿಕೆಯಲ್ಲಿ ರಾಜಿ ಸಂಧಾನ ನಡೆಯಿತು. ಎರಡೂ ಕಡೆಯ ಕುಟುಂಬಗಳು ಒಪ್ಪಿಗೆ ಸೂಚಿಸಿ, ಖುಲಾಸೆ ಪತ್ರಗಳಿಗೆ ಸಹಿ ಹಾಕಿದ ಬಳಿಕ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In a real-life story resembling a film plot, a wealthy businessman’s daughter eloped with her part-time family driver just a month before her wedding. Despite being engaged to her cousin and with all wedding preparations completed, the woman reportedly left home on January 19 and married the driver, Ravish, in Chikkanayakanahalli.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm