ಬ್ರೇಕಿಂಗ್ ನ್ಯೂಸ್
07-02-26 02:58 pm HK News Desk ಕರ್ನಾಟಕ
ಬೀದರ್, ಫೆ.7: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಮುಂದುವರೆಯುತ್ತಾರೆ. ಸಿಎಂ ಬದಲಾವಣೆ ಏನೂ ಇಲ್ಲ. ಈ ಬಗ್ಗೆ ಹೈಕಮಾಂಡ್ ಏನೂ ಹೇಳಿಲ್ಲ ಎಂದು ಸಿಎಂ ಪುತ್ರ, ಯತೀಂದ್ರ ಸಿದ್ದರಾಮಯ್ಯ ಅವರು ಬೀದರ್ ನಲ್ಲಿ ಮತ್ತೆ ಪುನರುಚ್ಚರಿಸಿದ್ದಾರೆ.
ರಾಜ್ಯದಲ್ಲಿ ಸದ್ಯಕ್ಕೆ ಯಾವುದೇ ಲೀಡರ್ಶಿಪ್ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿ ಮುಂದುವರೆಯಲ್ಲ ಅಂತ ಹೇಳೋಕೆ ಯಾವುದೇ ಕಾರಣಗಳಿಲ್ಲ. ಹೈಕಮಾಂಡ್ ನಾಯಕರು ಲೀಡರ್ಶಿಪ್ ಬದಲಾವಣೆ ಬಗ್ಗೆ ಏನೂ ಹೇಳಿಲ್ಲ. ಹಾಗಾಗಿ ಸಿದ್ದರಾಮಯ್ಯ ಅವರೇ ಮುಂದುವರಿಯುತ್ತಾರೆ ಎಂದು ಬೀದರ್ ಪ್ರವಾಸದಲ್ಲಿರುವ ಯತೀಂದ್ರ ಕಡ್ಡಿ ಮುರಿದಂತೆ ಹೇಳಿಕೆ ನೀಡಿದ್ದಾರೆ.
'ಯತೀಂದ್ರ ಅವರೇ ನಮ್ಮ ಹೈಕಮಾಂಡ್' ಎಂಬ ಡಿಕೆಶಿ ವ್ಯಂಗ್ಯದ ಹೇಳಿಕೆಗೆ, ಡಿಕೆಶಿ ಅವರು ಆ ರೀತಿ ಹೇಳಿದ್ದು ಸರಿಯಲ್ಲ ಎಂದೂ ತಿರುಗೇಟು ನೀಡಿದ್ದಾರೆ. ಹೈಕಮಾಂಡ್ ನಿರ್ಣಯಕ್ಕೆ ಸಿದ್ದರಾಮಯ್ಯ, ಡಿಕೆಶಿ ಅಥವಾ ನಾನು ಯಾರೇ ಆದ್ರೂ ಬದ್ಧವಾಗಿರ್ತೇವೆ. ಹೈಕಮಾಂಡ್ ಲೀಡರ್ಶಿಪ್ ಬದಲಾವಣೆ ಮಾಡ್ತೇವೆ ಅಂತಾ ಎಲ್ಲೂ ಹೇಳಿಲ್ಲ. ಹಾಗಾಗಿ ಸಿಎಂ ಬದಲಾವಣೆ ಇಲ್ಲ ಎಂದು ಯತೀಂದ್ರ ಹೇಳಿದ್ದಾರೆ .
ಮಾತು ಕೊಟ್ಟಿಲ್ಲ ಅಂತ ಸಿದ್ದರಾಮಯ್ಯರೇ ಕ್ಲೀಯರ್ ಮಾಡಲಿ..
ಯತೀಂದ್ರ ಹೇಳಿಕೆಯನ್ನು ಡಿಕೆಶಿ ಬಣದ ದಾವಣಗೆರೆ ಶಾಸಕ ಬಸವರಾಜು ಶಿವಗಂಗಾ ನಿರಾಕರಿಸಿದ್ದು ಇದರ ಬಗ್ಗೆ ಹೈಕಮಾಂಡ್ ಕೂಡಲೇ ಸ್ಪಷ್ಟಪಡಿಸಲಿ. ಸಿದ್ದರಾಮಯ್ಯ ಅವರೇ ಕ್ಲೀಯರ್ ಮಾಡಲಿ, ನಾನು ಯಾವುದೇ ಮಾತು ಕೊಟ್ಟಿಲ್ಲ ಅಂತ. ಆಗ ನಾವು ಯಾವುದೇ ಪ್ರಶ್ನೆ ಎತ್ತೋದಿಲ್ಲ ಎಂದಿದ್ದಾರೆ. ಅಲ್ಲದೆ, ಅಧಿಕಾರ ಹಂಚಿಕೆಯಾಗಿದೆ ಎಂದು ನನಗೆ ಮಾಹಿತಿ ಇದೆ. ಡಿಕೆಶಿಗೆ 139 ಶಾಸಕರ ಬೆಂಬಲವಿದೆ. 40 ರಿಂದ 50 ಜನ ನಮ್ಮಂತ ಯುವ ಶಾಸಕರು ಡಿಕೆಶಿ ಏನೇ ಹೇಳಿದ್ರೂ ಮಾಡಲು ರೆಡಿ ಇದ್ದೇವೆ. ಅವರು ಪ್ರಾಣ ಕೇಳಿದ್ರು ಕೊಡೋಕೆ ರೆಡಿ ಇದೀವಿ. ನನಗಿರುವ ಮಾಹಿತಿ ಪ್ರಕಾರ ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ ಎಂದು ದಾವಣಗೆರೆಯಲ್ಲಿ ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಹೇಳಿದ್ದಾರೆ.
ಯತೀಂದ್ರ ವೈಯಕ್ತಿಕ ಹೇಳಿಕೆ; ಪರಮೇಶ್ವರ್
ಇದೇ ವೇಳೆ, ತನ್ನ ತಂದೆಯೇ 5 ವರ್ಷ ಸಿಎಂ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಅದು ಅವರ ವೈಯಕ್ತಿಕ ಹೇಳಿಕೆ. ಯತೀಂದ್ರ ಯಾವ ಮಾಹಿತಿ ಪಡೆದು ಹೇಳಿದ್ರು ಗೊತ್ತಿಲ್ಲ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡತ್ತೆ. ಸದ್ಯಕ್ಕೆ ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಮಾದ್ಯಮಗಳು ಗೊಂದಲ ಎಂದು ಹೇಳುತ್ತಿದ್ದೀರಾ ಅಷ್ಟೇ. ಗೊಂದಲ ಇದ್ರೆ ಸಿ.ಎಲ್.ಪಿ ಸಭೆಯಲ್ಲಿ ಗೊತ್ತಾಗುತ್ತಿತ್ತು. ಮೊನ್ನೆ ನಡೆದ ಸಭೆಯಲ್ಲೂ ಯಾರು ಏನು ಹೇಳಿಲ್ಲ. ನಮ್ಮಲ್ಲಿ ಯಾವ ಗೊಂದಲವೂ ಇಲ್ಲ. ಸಿಎಂ ಬಜೆಟ್ ಮಂಡನೆ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am