ಬ್ರೇಕಿಂಗ್ ನ್ಯೂಸ್
11-02-26 01:09 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.11 : ಭಾರತದಲ್ಲಿ ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ಯುವಿ ಕ್ಯಾನ್ ಫೌಂಡೇಷನ್ ಆರಂಭಿಸಿರುವ ಸ್ವಸ್ಥ ಮಹಿಳೆ–ಸ್ವಸ್ಥ ಭಾರತ ಕಾರ್ಯಕ್ರಮ ಕಲಬರಗಿ ಜಿಲ್ಲೆಯಲ್ಲಿ ನಡೆದಿದ್ದು ಜನಸಾಮಾನ್ಯರನ್ನು ತಲುಪುವಲ್ಲಿ ಯಶಸ್ವಿಯಾಗಿದೆ.
ಯೋಜನೆಯ ಮೊದಲ ಹಂತದಲ್ಲಿ 14,000 ಮಹಿಳೆಯರನ್ನು ಸ್ತನ ಕ್ಯಾನ್ಸರ್ ಸ್ಕ್ರೀನಿಂಗ್ಗೆ ಒಳಪಡಿಸಲಾಗಿದ್ದು, ಸೇವಾವಂಚಿತ ಮತ್ತು ಗ್ರಾಮೀಣ ಪ್ರದೇಶಗಳ ಮಹಿಳೆಯರಿಗೆ ಆರೋಗ್ಯ ಸೇವೆ ತಲುಪಿಸುವಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ. ಕರ್ನಾಟಕದ ಉತ್ತರ ಭಾಗ ಕಲಬುರಗಿ ಜಿಲ್ಲೆಯಲ್ಲಿ ನಾಲ್ಕು ಸಾವಿರ ಮಹಿಳೆಯರನ್ನು ಸ್ಕ್ರೀನಿಂಗ್ ಒಳಪಡಿಸಿದ್ದಾರೆ. ಈ ವೇಳೆ, 565 ಅನುಮಾನಾಸ್ಪದ ಪ್ರಕರಣಗಳು ಪತ್ತೆಯಾಗಿದ್ದು, ನಾಲ್ಕು ಸ್ತನ ಕ್ಯಾನ್ಸರ್ ಪ್ರಕರಣಗಳು ದೃಢಪಟ್ಟಿವೆ.

ಮೊದಲ ಹಂತದಲ್ಲಿ ಸಮುದಾಯ ತಲುಪುವಿಕೆ ಮತ್ತು ಜಾಗೃತಿ ಶಿಬಿರಗಳ ಮೂಲಕ 21,000ಕ್ಕೂ ಹೆಚ್ಚು ಮಹಿಳೆಯರಿಗೆ ಸ್ತನ ಆರೋಗ್ಯ, ಸ್ವಯಂ ಪರೀಕ್ಷೆ ಮತ್ತು ಆರಂಭಿಕ ಪತ್ತೆಯ ಮಹತ್ವದ ಕುರಿತು ಮಾಹಿತಿ ನೀಡಲಾಗಿದೆ.
ಯೋಜನೆಯ ಕುರಿತು ಮಾತನಾಡಿದ ಯುವರಾಜ್ ಸಿಂಗ್, “ಸ್ತನ ಕ್ಯಾನ್ಸರ್ನಿಂದ ಉಂಟಾಗುವ ಸಾವುಗಳನ್ನು ಕಡಿಮೆ ಮಾಡಲು ಆರಂಭಿಕ ಪತ್ತೆ ಅತ್ಯಂತ ಮುಖ್ಯ. ನಮ್ಮಲ್ಲಿ ಚಿಕಿತ್ಸೆಯ ಕೊರತೆಯಿಲ್ಲ. ಜನರಲ್ಲಿ ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿಯ ಕೊರತೆ ಇದೆ. ತಂತ್ರಜ್ಞಾನ ನೆರವಿನ ಸ್ಕ್ರೀನಿಂಗ್ ಮತ್ತು ಬೇರುಮಟ್ಟದ ಜಾಗೃತಿ ಮೂಲಕ ಸ್ತನ ಕ್ಯಾನ್ಸರ್ ಎದುರಿಸಲು ಸಾಧ್ಯವಿದೆ” ಎಂದು ಹೇಳಿದರು.
ಜುಲೈ 2024ರಲ್ಲಿ ಆರಂಭಗೊಂಡ ಬೃಹತ್ ಆರೋಗ್ಯ ಜಾಗೃತಿ ಕಾರ್ಯಕ್ರಮವು, 15 ರಾಜ್ಯಗಳ ಆಯ್ದ ಜಿಲ್ಲೆಗಳಲ್ಲಿ ಅನುಷ್ಠಾನಗೊಂಡಿದ್ದು, ಹಿಂದುಳಿದ ಪ್ರದೇಶಗಳ ಮೇಲೆ ಕೇಂದ್ರೀಕೃತವಾಗಿದೆ. ರಾಷ್ಟ್ರ ಮಟ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ನಾಗರಿಕರಿಗೆ ಜಾಗೃತಿ ನೀಡಲಾಗಿದ್ದು, 2 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸ್ಕ್ರೀನಿಂಗ್, 2,700ಕ್ಕೂ ಹೆಚ್ಚು ಅನುಮಾನಾಸ್ಪದ ಪ್ರಕರಣಗಳ ಗುರುತಿಸಲಾಗಿದೆ. 13 ದೃಢಪಟ್ಟ ಸ್ತನ ಕ್ಯಾನ್ಸರ್ ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ. ಮೊದಲ ಹಂತದ ಯಶಸ್ಸಿನ ಆಧಾರದಲ್ಲಿ ಸ್ವಸ್ಥ ಮಹಿಳಾ–ಸ್ವಸ್ಥ ಭಾರತ ಎರಡನೇ ಹಂತವನ್ನೂ ಘೋಷಿಸಲಾಗಿದೆ.
As part of Yuvraj Singh’s YouWeCan Foundation initiative “Swasth Mahila–Swasth Bharat,” a large-scale breast cancer awareness and screening camp was conducted in Kalaburagi, Karnataka. Around 4,000 women were screened in the district, with 565 suspected cases identified and four confirmed as breast cancer. The nationwide program has reached over five lakh people, aiming to promote early detection and reduce breast cancer-related deaths through awareness and technology-supported screening.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm