ಬ್ರೇಕಿಂಗ್ ನ್ಯೂಸ್
11-02-26 01:09 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.11 : ಭಾರತದಲ್ಲಿ ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ಯುವಿ ಕ್ಯಾನ್ ಫೌಂಡೇಷನ್ ಆರಂಭಿಸಿರುವ ಸ್ವಸ್ಥ ಮಹಿಳೆ–ಸ್ವಸ್ಥ ಭಾರತ ಕಾರ್ಯಕ್ರಮ ಕಲಬರಗಿ ಜಿಲ್ಲೆಯಲ್ಲಿ ನಡೆದಿದ್ದು ಜನಸಾಮಾನ್ಯರನ್ನು ತಲುಪುವಲ್ಲಿ ಯಶಸ್ವಿಯಾಗಿದೆ.
ಯೋಜನೆಯ ಮೊದಲ ಹಂತದಲ್ಲಿ 14,000 ಮಹಿಳೆಯರನ್ನು ಸ್ತನ ಕ್ಯಾನ್ಸರ್ ಸ್ಕ್ರೀನಿಂಗ್ಗೆ ಒಳಪಡಿಸಲಾಗಿದ್ದು, ಸೇವಾವಂಚಿತ ಮತ್ತು ಗ್ರಾಮೀಣ ಪ್ರದೇಶಗಳ ಮಹಿಳೆಯರಿಗೆ ಆರೋಗ್ಯ ಸೇವೆ ತಲುಪಿಸುವಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ. ಕರ್ನಾಟಕದ ಉತ್ತರ ಭಾಗ ಕಲಬುರಗಿ ಜಿಲ್ಲೆಯಲ್ಲಿ ನಾಲ್ಕು ಸಾವಿರ ಮಹಿಳೆಯರನ್ನು ಸ್ಕ್ರೀನಿಂಗ್ ಒಳಪಡಿಸಿದ್ದಾರೆ. ಈ ವೇಳೆ, 565 ಅನುಮಾನಾಸ್ಪದ ಪ್ರಕರಣಗಳು ಪತ್ತೆಯಾಗಿದ್ದು, ನಾಲ್ಕು ಸ್ತನ ಕ್ಯಾನ್ಸರ್ ಪ್ರಕರಣಗಳು ದೃಢಪಟ್ಟಿವೆ.

ಮೊದಲ ಹಂತದಲ್ಲಿ ಸಮುದಾಯ ತಲುಪುವಿಕೆ ಮತ್ತು ಜಾಗೃತಿ ಶಿಬಿರಗಳ ಮೂಲಕ 21,000ಕ್ಕೂ ಹೆಚ್ಚು ಮಹಿಳೆಯರಿಗೆ ಸ್ತನ ಆರೋಗ್ಯ, ಸ್ವಯಂ ಪರೀಕ್ಷೆ ಮತ್ತು ಆರಂಭಿಕ ಪತ್ತೆಯ ಮಹತ್ವದ ಕುರಿತು ಮಾಹಿತಿ ನೀಡಲಾಗಿದೆ.
ಯೋಜನೆಯ ಕುರಿತು ಮಾತನಾಡಿದ ಯುವರಾಜ್ ಸಿಂಗ್, “ಸ್ತನ ಕ್ಯಾನ್ಸರ್ನಿಂದ ಉಂಟಾಗುವ ಸಾವುಗಳನ್ನು ಕಡಿಮೆ ಮಾಡಲು ಆರಂಭಿಕ ಪತ್ತೆ ಅತ್ಯಂತ ಮುಖ್ಯ. ನಮ್ಮಲ್ಲಿ ಚಿಕಿತ್ಸೆಯ ಕೊರತೆಯಿಲ್ಲ. ಜನರಲ್ಲಿ ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿಯ ಕೊರತೆ ಇದೆ. ತಂತ್ರಜ್ಞಾನ ನೆರವಿನ ಸ್ಕ್ರೀನಿಂಗ್ ಮತ್ತು ಬೇರುಮಟ್ಟದ ಜಾಗೃತಿ ಮೂಲಕ ಸ್ತನ ಕ್ಯಾನ್ಸರ್ ಎದುರಿಸಲು ಸಾಧ್ಯವಿದೆ” ಎಂದು ಹೇಳಿದರು.
ಜುಲೈ 2024ರಲ್ಲಿ ಆರಂಭಗೊಂಡ ಬೃಹತ್ ಆರೋಗ್ಯ ಜಾಗೃತಿ ಕಾರ್ಯಕ್ರಮವು, 15 ರಾಜ್ಯಗಳ ಆಯ್ದ ಜಿಲ್ಲೆಗಳಲ್ಲಿ ಅನುಷ್ಠಾನಗೊಂಡಿದ್ದು, ಹಿಂದುಳಿದ ಪ್ರದೇಶಗಳ ಮೇಲೆ ಕೇಂದ್ರೀಕೃತವಾಗಿದೆ. ರಾಷ್ಟ್ರ ಮಟ್ಟದಲ್ಲಿ 5 ಲಕ್ಷಕ್ಕೂ ಹೆಚ್ಚು ನಾಗರಿಕರಿಗೆ ಜಾಗೃತಿ ನೀಡಲಾಗಿದ್ದು, 2 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸ್ಕ್ರೀನಿಂಗ್, 2,700ಕ್ಕೂ ಹೆಚ್ಚು ಅನುಮಾನಾಸ್ಪದ ಪ್ರಕರಣಗಳ ಗುರುತಿಸಲಾಗಿದೆ. 13 ದೃಢಪಟ್ಟ ಸ್ತನ ಕ್ಯಾನ್ಸರ್ ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ. ಮೊದಲ ಹಂತದ ಯಶಸ್ಸಿನ ಆಧಾರದಲ್ಲಿ ಸ್ವಸ್ಥ ಮಹಿಳಾ–ಸ್ವಸ್ಥ ಭಾರತ ಎರಡನೇ ಹಂತವನ್ನೂ ಘೋಷಿಸಲಾಗಿದೆ.
As part of Yuvraj Singh’s YouWeCan Foundation initiative “Swasth Mahila–Swasth Bharat,” a large-scale breast cancer awareness and screening camp was conducted in Kalaburagi, Karnataka. Around 4,000 women were screened in the district, with 565 suspected cases identified and four confirmed as breast cancer. The nationwide program has reached over five lakh people, aiming to promote early detection and reduce breast cancer-related deaths through awareness and technology-supported screening.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am