ಬ್ರೇಕಿಂಗ್ ನ್ಯೂಸ್
17-02-26 02:53 pm HK News Desk ಕರ್ನಾಟಕ
ಬೆಂಗಳೂರು, ಫೆ.17: ದೇಶದ ಸಂಗೀತ ಕ್ಷೇತ್ರದಲ್ಲಿ ದೊಡ್ಡ ಪ್ರಭಾವ ಬೀರಬಲ್ಲ ಮಹತ್ವದ ಆದೇಶವೊಂದನ್ನು ದೆಹಲಿ ಹೈಕೋರ್ಟ್ ಹೊರಡಿಸಿದೆ. ಪ್ರಸಿದ್ಧ ಸಂಗೀತ ನಿರ್ದೇಶಕ ಇಳಯರಾಜಾ ಅವರಿಗೆ ಸಂಬಂಧಿಸಿದ 134 ಚಲನಚಿತ್ರ ಹಾಡುಗಳ ಹಕ್ಕು ವಿಚಾರದಲ್ಲಿ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ.
1976–2001ರ ಅವಧಿಯಲ್ಲಿ ರಚಿಸಲಾದ 134 ಚಿತ್ರಗಳ ಹಾಡುಗಳ ಹಕ್ಕು ತಮ್ಮದೇ ಎಂದು ಸರಿಗಮ ಕಂಪನಿ ಹೇಳಿಕೊಂಡಿತ್ತು. ಇಳಯರಾಜಾ ಸಂಗೀತ ಸಂಯೋಜಿಸಿದ 134 ಚಲನಚಿತ್ರಗಳ ಸಂಗೀತ ಹಾಗೂ ಧ್ವನಿಮುದ್ರಣ ಹಕ್ಕುಗಳನ್ನು ನಿರ್ಮಾಪಕರೊಂದಿಗೆ ಮಾಡಿದ ಔಪಚಾರಿಕ ಒಪ್ಪಂದಗಳ ಮೂಲಕ ವಿಶ್ವವ್ಯಾಪಿ ಮತ್ತು ಶಾಶ್ವತವಾಗಿ ಪಡೆದಿದ್ದೇವೆ ಎಂದು ಸರಿಗಮ ನ್ಯಾಯಾಲಯಕ್ಕೆ ತಿಳಿಸಿತ್ತು.
ಆದರೆ ಇಳಯರಾಜಾ ಈ ಹಾಡುಗಳನ್ನು ಅಮೆಜಾನ್ ಮ್ಯೂಸಿಕ್, ಐಟ್ಯೂನ್ಸ್ ಮತ್ತು ಜಿಯೋಸಾವನ್ ಸೇರಿದಂತೆ ಡಿಜಿಟಲ್ ವೇದಿಕೆಗಳಲ್ಲಿ ಅಪ್ಲೋಡ್ ಮಾಡಿ ತಮ್ಮದೇ ಹಕ್ಕು ಎಂದು ಹೇಳಿಕೊಳ್ಳುತ್ತಿರುವುದು ಕಾನೂನುಬಾಹಿರ ಎಂದು ಸಂಸ್ಥೆ ವಾದಿಸಿತ್ತು.
ಸರಿಗಮ ಪರ ವಕೀಲರು 1957ರ ಹಕ್ಕುಸ್ವಾಮ್ಯ ಕಾಯಿದೆಯ ಪ್ರಕಾರ ಚಲನಚಿತ್ರಕ್ಕಾಗಿ ರಚಿಸಲಾದ ಸಂಗೀತದ ಮೊದಲ ಮಾಲೀಕರು ನಿರ್ಮಾಪಕರೇ ಆಗುತ್ತಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ತುಷಾರ್ ರಾವ್ ಕೆಟೇಲಾ ಸರಿಗಮದ ವಾದ ಒಪ್ಪಿಕೊಂಡು, ತಡೆಯಾಜ್ಞೆ ನೀಡದಿದ್ದರೆ ಕಂಪನಿಗೆ ತುಂಬಲಾಗದ ನಷ್ಟವಾಗುತ್ತದೆ ಎಂದು ಹೇಳಿದ್ದಾರೆ. ಜೊತೆಗೆ ಇಳಯರಾಜಾ ಹಾಗೂ ಅವರ ಪ್ರತಿನಿಧಿಗಳು ಸಂಬಂಧಿತ ಹಾಡುಗಳನ್ನು ಬಳಸಬಾರದು ಅಥವಾ ಪರವಾನಗಿ ನೀಡಬಾರದು ಎಂದು ಆದೇಶಿಸಿದ್ದಾರೆ.
ಈಗಾಗಲೇ ಜನಪ್ರಿಯ ತಮಿಳು ಹಾಡು “ಎನ್ ಇನಿಯಾ ಪೊನ್ ನಿಲವೇ” ಬಳಕೆ ಕುರಿತಾಗಿ ಇಳಯರಾಜಾ ಮತ್ತು ಸರಿಗಮಾ ನಡುವೆ ವಿವಾದ ನಡೆದಿತ್ತು. ಅಘಾಥಿಯಾ ಚಿತ್ರದ ಬಳಕೆಗೆ ಸಂಬಂಧಿಸಿ ನ್ಯಾಯಾಲಯ ಮೊದಲು ನಿರ್ಮಾಪಕರು ಸರಿಗಮಾದಿಂದ ಪರವಾನಗಿ ಪಡೆಯದೆ ಹಾಡನ್ನು ಬಳಸಬಾರದು ಎಂದು ಹೇಳಿತ್ತು. ನಂತರ ನಿರ್ಮಾಪಕರ ಹೂಡಿಕೆ ಪರಿಗಣಿಸಿ, ನ್ಯಾಯಾಲಯದ ರಿಜಿಸ್ಟ್ರಾರ್ ಜನರಲ್ ಬಳಿ 30 ಲಕ್ಷ ರೂ. ಠೇವಣಿ ಇಡುವ ಷರತ್ತಿನೊಂದಿಗೆ ಬಳಕೆ ಮಾಡಲು ಅವಕಾಶ ನೀಡಲಾಗಿತ್ತು.
ನ್ಯಾಯಾಲಯದ ಆದೇಶ ಪ್ರಕಾರ, ಇಳಯರಾಜಾ ಅಥವಾ ಅವರ ಪರವಾಗಿ ಕಾರ್ಯ ನಿರ್ವಹಿಸುವ ಸಹಭಾಗಿಗಳು, ಪ್ರತಿನಿಧಿಗಳು ಅಥವಾ ಲೈಸೆನ್ಸಿಗಳು ಸರಿಗಮ ವಶದಲ್ಲಿರುವ 134 ಚಿತ್ರಗಳ ಧ್ವನಿಮುದ್ರಣ ಹಾಗೂ ಸಾಹಿತ್ಯ-ಸಂಗೀತ ಕೃತಿಗಳ ಮೇಲೆ ಯಾವುದೇ ಮಾಲೀಕತ್ವದ ಹಕ್ಕು ಹೊಂದಿದ್ದೇವೆ ಎಂದು ಹೇಳಿಕೊಳ್ಳುವಂತಿಲ್ಲ ಎಂದು ಆದೇಶ ಹೊರಡಿಸಿದೆ. ಈ ಪ್ರಕರಣ ಸಂಗೀತ ಕಾಪಿರೈಟ್ ಹಕ್ಕುಗಳ ಕುರಿತು ಚಿತ್ರೋದ್ಯಮ ಮತ್ತು ಡಿಜಿಟಲ್ ಸ್ಟ್ರೀಮಿಂಗ್ ವಲಯದಲ್ಲಿ ಮಹತ್ವದ ಪರಿಣಾಮ ಬೀರುವ ಸಾಧ್ಯತೆ ಇದೆ.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm