ಬ್ರೇಕಿಂಗ್ ನ್ಯೂಸ್
19-02-26 03:11 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಫೆ.19: ಜಿ. ಪರಮೇಶ್ವರ್ ಅಥವಾ ಡಿ.ಕೆ. ಶಿವಕುಮಾರ್ ಇಬ್ಬರಲ್ಲಿ ಒಬ್ಬರು ಮುಂದಿನ ಮುಖ್ಯಮಂತ್ರಿಯಾಗಬಹುದು ಎಂದು ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ರಾಜ್ಯ ರಾಜಕಾರಣದ ಬಗ್ಗೆ ಭವಿಷ್ಯ ಹೇಳಿದ್ದಾರೆ.
ಆದರೆ ಸಿದ್ದರಾಮಯ್ಯ ಈಗಲೇ ಕುರ್ಚಿ ಬಿಟ್ಟು ಕೊಡುತ್ತಾರೆಯೆ ಎಂಬ ಪ್ರಶ್ನೆಗೆ ನಿರ್ಧಿಷ್ಟ ಉತ್ತರ ನೀಡಿಲ್ಲ. “ಸಂಕ್ರಾಂತಿ ನಂತರ ಬಜೆಟ್ ಮಂಡನೆ ಬಳಿಕ ಸ್ವಲ್ಪ ರಾಜಕಾರಣದಲ್ಲಿ ಬದಲಾವಣೆಯಾದರೂ, ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡಬೇಕು. ಆಗ ಮಾತ್ರ ಅಧಿಕಾರ ಬದಲಾವಣೆ ಆಗುತ್ತದೆ. ಹಾಗಂತ, ಕರ್ನಾಟಕದ ರಾಜಕಾರಣಕ್ಕೆ ಯಾವುದೇ ಆಪತ್ತಿಲ್ಲ ಎಂದು ಶ್ರೀಗಳು ಹೇಳಿದ್ದಾರೆ.
ಕಾಶಿ ಜೊತೆ ಪ್ರಯಾಗ್ರಾಜ್ಗೆ ಭೇಟಿ ನೀಡಿದ್ದಾಗಿ ಹೇಳಿರುವ ಶ್ರೀಗಳು ವಿಶ್ವದಲ್ಲಿ ಯುದ್ಧದ ಭೀತಿ ಮುಂದುವರಿಯಲಿದೆ. ಜಗತ್ತಿಗೆ ಒಂದಲ್ಲೊಂದು ಸಮಸ್ಯೆ ಎದುರಾಗಲಿದೆ. ಆದರೆ ಕರ್ನಾಟಕ ಸುರಕ್ಷಿತವಾಗಲಿದೆ ಎಂಬ ಅಭಯ ನೀಡಿದ್ದಾರೆ.
ಸಿದ್ದರಾಮಯ್ಯ ಅಧಿಕಾರವನ್ನು ಬಿಟ್ಟು ಕೊಟ್ಟರೆ ಮಾತ್ರ ಡಿಕೆಶಿ ಸಿಎಂ ಆಗಲಿದ್ದಾರೆ, ಆದರೆ ಅಧಿಕಾರ ಬಿಟ್ಟು ಕೊಡುವುದು ಸುಲಭ ಕಾರ್ಯವಲ್ಲವೆಂದು ಹಿಂದಿನ ಭವಿಷ್ಯ ಸೂಚನೆಗಳಲ್ಲಿ ಕೋಡಿಮಠದ ಪೀಠಾಧ್ಯಕ್ಷರು ಸೂಚಿಸಿದ್ದರು.
20 ತಿಂಗಳು ರಾಜಕಾರಣದ ಕಿಚ್ಚು ನಂತರ, ಡಿಕೆಶಿ ಬೆಂಬಲಿಗರು ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡುವಂತೆ ಆಗ್ರಹಿಸುತ್ತಿದ್ದಾರೆ. ಕಳೆದ ವರ್ಷದ ನವರಾತ್ರಿಯಲ್ಲಿ ಡಿಕೆಶಿ ಇಶಾ ಫೌಂಡೇಶನ್ ವೇದಿಕೆಯಲ್ಲಿ ಪ್ರಮುಖ ವ್ಯಕ್ತಿಗಳ ಜೊತೆ ಹಾಜರಾಗಿದ್ದರು, ಇದರಿಂದಲೇ ರಾಜ್ಯ ರಾಜಕಾರಣದಲ್ಲಿ ದೊಡ್ಡ ಬದಲಾವಣೆ ಆಗಲಿದೆ ಎಂಬ ನಿರೀಕ್ಷೆ ಮೂಡಿತ್ತು. ಆದರೆ, ದೊಡ್ಡ ಬದಲಾವಣೆ ಆಗದೇ ಇದ್ದರೂ, ಡಿ.ಕೆ. ಶಿವಕುಮಾರ್ ಕುರ್ಚಿಗಾಗಿ ಹಠದಿಂದ ಯತ್ನಿಸುತ್ತಿದ್ದಾರೆ ಎನ್ನುವ ಸೂಚನೆ ಇಂದು ಪ್ರಸ್ತುತ ರಾಜಕೀಯ ವರ್ತಮಾನವನ್ನು ಪ್ರತಿಬಿಂಬಿಸುತ್ತದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm