ಬ್ರೇಕಿಂಗ್ ನ್ಯೂಸ್
25-02-26 07:54 pm HK News Staffer ಕರ್ನಾಟಕ
ಚೆನ್ನೈ, ಫೆ.25: ವರನಟ ಡಾ. ರಾಜ್ಕುಮಾರ್ ಅವರನ್ನು ಕಾಡುಗಳ್ಳ ವೀರಪ್ಪನ್ ಅಪಹರಿಸಿದ ಪ್ರಕರಣದಲ್ಲಿ ಮದ್ರಾಸ್ ಹೈಕೋರ್ಟ್ 9 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದ್ದ ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ. ಪ್ರಕರಣ ನಡೆದು ಬರೋಬ್ಬರಿ 25 ವರ್ಷಗಳ ಬಳಿಕ ಆರೋಪಿಗಳಿಗೆ ಅಂತಿಮವಾಗಿ ಮುಕ್ತಿ ಸಿಕ್ಕಿದೆ.
ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿಗಳಾದ ಪಿ. ವೇಲ್ಮುರುಗನ್ ಹಾಗೂ ಎಂ. ಜ್ಯೋತಿರಾಮನ್ ಅವರ ಪೀಠ ಬುಧವಾರ ತೀರ್ಪು ಪ್ರಕಟಿಸಿದೆ. ಈ ಹಿಂದೆ ಸೆಪ್ಟೆಂಬರ್ 25, 2018ರಂದು ಸೆಷನ್ಸ್ ನ್ಯಾಯಾಲಯ 9 ಮಂದಿಯನ್ನು ಖುಲಾಸೆಗೊಳಿಸಿತ್ತು. ಆ ತೀರ್ಪನ್ನು ಪ್ರಶ್ನಿಸಿ ಚೆನ್ನೈ ಪೊಲೀಸರು ಹೈಕೋರ್ಟ್ ಮೊರೆ ಹೋಗಿದ್ದರು.
ಸಾಕ್ಷ್ಯ ಕೊರತೆಯೇ ಕಾರಣ:
ಸೆಷನ್ಸ್ ನ್ಯಾಯಾಲಯವು ಪೊಲೀಸ್ ಇಲಾಖೆ ಸೂಕ್ತ ಪುರಾವೆ ಸಲ್ಲಿಸದಿರುವುದನ್ನು ಉಲ್ಲೇಖಿಸಿ ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ರಾಜ್ಕುಮಾರ್ ಮತ್ತು ಅವರ ಪತ್ನಿ ಪಾರ್ವತಮ್ಮ ಅವರನ್ನು ವಿಚಾರಣೆ ನಡೆಸದಿರುವುದು, ಮಧ್ಯಸ್ಥಿಕೆದಾರರನ್ನು ಪ್ರಶ್ನಿಸದಿರುವುದು ಸೇರಿದಂತೆ ಹಲವು ಅಂಶಗಳನ್ನು ನ್ಯಾಯಾಲಯ ಗಮನಿಸಿದೆ. ಆರೋಪಿಗಳೆಂದು ಗುರುತಿಸಲ್ಪಟ್ಟಿದ್ದ ಗೋವಿಂದರಾಜ್, ಆಂಡ್ರಿಲ್, ಪಸುವಣ್ಣ, ಪುಟ್ಟುಸಾಮಿ, ಕಲ್ಮಂಡಿರಾಮನ್, ಮಾರನ್, ಸೆಲ್ವಂ, ಅಮೃತಲಿಂಗಂ ಹಾಗೂ ನಾಗರಾಜ್ ಸೇರಿದಂತೆ 9 ಮಂದಿಗೆ ಈಗ ಅಂತಿಮ ಮುಕ್ತಿ ಲಭಿಸಿದೆ.
108 ದಿನಗಳ ವನವಾಸ:
2000ರ ಜುಲೈ 30ರಂದು ಕರ್ನಾಟಕ-ತಮಿಳುನಾಡು ಗಡಿ ಭಾಗದ ಈರೋಡ್ ಜಿಲ್ಲೆಯ ತಲವಾಡಿ ಬಳಿಯ ದೊಡ್ಡ ಗಾಜನೂರು ತೋಟದ ಮನೆಯಿಂದ ರಾಜ್ಕುಮಾರ್ ಅವರನ್ನು ವೀರಪ್ಪನ್ ಅಪಹರಿಸಿದ್ದ. ಈ ಘಟನೆ ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿತ್ತು. ರಾಜ್ಕುಮಾರ್ ಅವರೊಂದಿಗೆ ಸಂಬಂಧಿಕರಾದ ಎಸ್.ಎ. ಗೋವಿಂದರಾಜ್, ನಾಗೇಶ್ ಮತ್ತು ಸಹಾಯಕ ನಿರ್ದೇಶಕ ನಾಗಪ್ಪ ಅವರನ್ನೂ ಅಪಹರಿಸಲಾಗಿತ್ತು. ನಾಗಪ್ಪ ಸೆಪ್ಟೆಂಬರ್ 28ರಂದು ಪಾರಾಗಿ ಬಂದಿದ್ದರು. ರಾಜ್ಕುಮಾರ್ ಸೇರಿದಂತೆ ಉಳಿದವರನ್ನು ವೀರಪ್ಪನ್ 108 ದಿನಗಳ ಬಳಿಕ ಬಿಡುಗಡೆ ಮಾಡಿದ್ದ. ರಾಜ್ಕುಮಾರ್ ಬಿಡುಗಡೆಗಾಗಿ ಕೋಟ್ಯಂತರ ರೂಪಾಯಿ ನೀಡಲಾಗಿದೆ ಎಂಬ ಆರೋಪಗಳ ಹಿನ್ನೆಲೆ 2001ರಲ್ಲಿ ಪ್ರಕರಣ ದಾಖಲಾಗಿತ್ತು.
ಎನ್ಕೌಂಟರ್ನಲ್ಲಿ ಅಂತ್ಯ:
2004ರ ಅಕ್ಟೋಬರ್ 18ರಂದು ತಮಿಳುನಾಡು ವಿಶೇಷ ಕಾರ್ಯಪಡೆ ನಡೆಸಿದ ‘ಆಪರೇಷನ್ ಕಕೂನ್’ ಎನ್ಕೌಂಟರ್ನಲ್ಲಿ ವೀರಪ್ಪನ್ ಮತ್ತು ಅವನ ಸಹಚರರಾದ ಸೇತುಕುಳಿ ಗೋವಿಂದನ್ ಹಾಗೂ ಚಂದ್ರೇಗೌಡ ಹತ್ಯೆಯಾಗಿದ್ದರು. ಪ್ರಕರಣದಲ್ಲಿ ಭಾಗಿಯಾಗಿದ್ದ ಮಲ್ಲು ಎಂಬಾತ ತನಿಖೆ ವೇಳೆ ಮೃತಪಟ್ಟಿದ್ದು, ರಮೇಶ್ ತಲೆಮರೆಸಿಕೊಂಡಿದ್ದನೆಂದು ದಾಖಲೆಗಳಲ್ಲಿ ಉಲ್ಲೇಖವಿದೆ.
ಉಳಿದ 9 ಮಂದಿ ಕಳೆದ ಹಲವು ವರ್ಷಗಳಿಂದ ಗೋಪಿಚೆಟ್ಟಿಪಾಳ್ಯಂ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿದ್ದರು. ಇದೀಗ ಹೈಕೋರ್ಟ್ ತೀರ್ಪಿನಿಂದ ಅವರಿಗೆ ಆರೋಪದಿಂದ ಬಿಡುಗಡೆ ಲಭಿಸಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 12:40 pm
HK News Staffer
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm