ಬ್ರೇಕಿಂಗ್ ನ್ಯೂಸ್
26-02-26 12:58 pm HK News Staffer ಕರ್ನಾಟಕ
ಬೆಂಗಳೂರು, ಫೆ. 26: ಬಡ ಕುಟುಂಬದ ಆಟೋ ಚಾಲಕರೊಬ್ಬರ ಮಗಳು ನ್ಯಾಯಾಧೀಶರ ಪರೀಕ್ಷೆ ಬರೆದು ತೇರ್ಗಡೆಯಾಗಿ ಇಡೀ ರಾಜ್ಯದ ಗಮನ ಸೆಳೆದಿದ್ದಾಳೆ. ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ತಿರುಪಾಳ್ಯ ಎಂಬ ಪುಟ್ಟ ಹಳ್ಳಿಯ ಹೆಣ್ಣುಮಗಳು ನಾಗಿಣಿ ಎಲ್. ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆಯಾಗಿದ್ದಾರೆ.
ಆಟೋ ಚಾಲಕನ ಮಗಳಾಗಿ ಬೆಳೆದು, ತಾಯಿ ಜೊತೆಗೆ ಹೂವು ಮಾರುತ್ತಲೇ ಬೆಳೆದ ನಾಗಿಣಿ ಎಂಬ ಹೆಣ್ಮಗಳು ಇಂದು ನ್ಯಾಯ ತೀರ್ಮಾನದ ಸೀಟಿನಲ್ಲಿ ಕುಳಿತುಕೊಳ್ಳಲು ಸಜ್ಜಾಗಿರುವುದು ಕೇವಲ ಒಂದು ಕುಟುಂಬದ ಯಶಸ್ಸಲ್ಲ, ಬದಲಿಗೆ ಹೋರಾಟದ ಹಾದಿಯಲ್ಲಿರುವ ಕೋಟ್ಯಂತರ ಯುವಜನತೆಗೆ ಸ್ಫೂರ್ತಿ.
ನಾಗಿಣಿ ಅವರ ತಂದೆ ಲಕ್ಷ್ಮಣ್ ದಿನವಿಡೀ ಆಟೋ ಚಾಲನೆ ಮಾಡಿ ಸಂಸಾರ ನಡೆಸುತ್ತಿದ್ದರೆ, ತಾಯಿ ಮಂಜುಳಾ ಮಾರುಕಟ್ಟೆಯಲ್ಲಿ ಮನೆಗೆಲಸ ಮುಗಿಸಿ ಹೂವಿನ ವ್ಯಾಪಾರ ಮಾಡುತ್ತಿದ್ದರು. ಮನೆಯಲ್ಲಿ ಬಡತನ ಇದ್ದರೂ, ಮಗಳ ವಿದ್ಯಾಭ್ಯಾಸಕ್ಕೆ ಪೋಷಕರು ಅಡ್ಡಿ ಬರಲಿಲ್ಲ. ನಾಗಿಣಿ ಕೂಡ ಬಾಲ್ಯದಿಂದಲೇ ತಾಯಿಗೆ ಹೂವಿನ ವ್ಯಾಪಾರದಲ್ಲಿ ನೆರವಾಗುತ್ತಿದ್ದರು. ಇದರ ಜೊತೆಗೇ ಓದನ್ನೂ ಮಾಡಿಕೊಂಡಿದ್ದಳು.
10ನೇ ತರಗತಿಯ ವರೆಗೆ ಸರ್ಕಾರಿ ಕನ್ನಡ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದ ನಾಗಿಣಿ ತಂದೆ, ತಾಯಿಯ ಪರಿಶ್ರಮಕ್ಕೆ ತಕ್ಕ ಸಾಧನೆ ಮಾಡಿದ್ದಾಳೆ. ಚಿಕ್ಕಂದಿನಿಂದಲೂ ಓದಿನಲ್ಲಿ ಸದಾ ಮುಂದಿದ್ದ ನಾಗಿಣಿ , ಬೆಳಗ್ಗೆ ಅಮ್ಮ ಕಟ್ಟಿ ಕೊಟ್ಟ ಹೂವನ್ನು ಮಾರಾಟ ಮಾಡಿಯೇ ಶಾಲೆಗೆ ಹೋಗುತ್ತಿದ್ದಳು. ವಕೀಲೆಯಾಗಿ ವೃತ್ತಿ ಆರಂಭಿಸಿದ ಬಳಿಕವು ಹಗಲಿರುಳು ಓದಿಗೆ ಶ್ರಮ ಪಡುತ್ತಿದ್ದರು. ನ್ಯಾಯಾಧೀಶರ ಪರೀಕ್ಷೆ ಬರೆದು ತೇರ್ಗಡೆ ಆಗಿದ್ದಾರೆ. ಮಗಳು ಶ್ರಮಪಟ್ಟಿದ್ದಕ್ಕೆ ಈಗ ನ್ಯಾಯಾಧೀಶೆಯಾಗಿ ಆಯ್ಕೆಯಾಗಿರುವುದು ಖುಷಿಯಾಗಿದೆ ಎಂದು ತಾಯಿ ಮಂಜುಳಾ ಸಂತಸ ಹಂಚಿಕೊಂಡಿದ್ದಾರೆ.
ನಮ್ಮ ಕಷ್ಟ ಅರಿತಿದ್ದ ಮಗಳು ಸಹ ಹಗಲಿರುಳು ಕಷ್ಟಪಟ್ಟು ಓದುತ್ತಿದ್ದಳು. ಇಂದು ಇಡೀ ಊರಿನ ಜನ ಹೆಮ್ಮೆಪಡುವಂತೆ ನ್ಯಾಯಾಧೀಶೆಯಾಗಿ ಆಯ್ಕೆಯಾಗಿದ್ದಾಳೆ. ಮಗಳ ಸಾಧನೆ ನನಗೆ ಖುಷಿ ತಂದಿದೆ. ನ್ಯಾಯಾಧೀಶೆಯಾಗಿ ನೊಂದವರಿಗೆ ದನಿಯಾಗಲಿ ಎಂದು ತಂದೆ ಲಕ್ಷ್ಮಣ್ ಶುಭ ಹಾರೈಸಿದ್ದಾರೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am