ಬ್ರೇಕಿಂಗ್ ನ್ಯೂಸ್
03-03-26 08:37 pm HK News Staffer ಕರ್ನಾಟಕ
ಧಾರವಾಡ, ಮಾರ್ಚ್ 3: ರಸ್ತೆ ಅಪಘಾತವೆಂದು ಬಿಂಬಿಸಲ್ಪಟ್ಟ ಮಹಿಳೆಯ ಸಾವಿನ ಹಿಂದೆ ಸಂಚು ಅಡಗಿದ್ದುದನ್ನು ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಬಯಲು ಮಾಡಿದ್ದಾರೆ. ಪತ್ನಿಯ ಕೊಲೆಗೆ ಸುಪಾರಿ ನೀಡಿದ ಆರೋಪದಲ್ಲಿ ಪತಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.
ಧಾರವಾಡ ತಾಲೂಕಿನ ಸೋಮಾಪುರ ಗ್ರಾಮದ ಲಲಿತಾ (43) ಅವರ ಹತ್ಯೆ ಪ್ರಕರಣದಲ್ಲಿ ನರೇಂದ್ರ ಗ್ರಾಮದ ಉದಯ ದ್ಯಾಮಪ್ಪ ಹಾತರಗಿ ಪ್ರಮುಖ ಆರೋಪಿಯಾಗಿದ್ದಾರೆ. ತಮ್ಮ ಪತ್ನಿಯನ್ನು ಕೊಲೆ ಮಾಡಲು ಉದಯ ತನ್ನ ಸ್ನೇಹಿತ ನಾಗಪ್ಪ ಪಡೇಕಲ್, ಅಭಿಷೇಕ್ ವರಗಣ್ಣವರ್ ಮತ್ತು ನಾಗರಾಜ ಉಪ್ಪಿನ್ ಅವರಿಗೆ ಸುಪಾರಿ ನೀಡಿದ್ದಾನೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆರೋಪಿಗಳು ಮಹೇಂದ್ರ ಥಾರ್ ವಾಹನವನ್ನು ಬಳಸಿಕೊಂಡು ಲಲಿತಾ ಅವರ ಮೇಲೆ ಹಿಂದಿನಿಂದ ಡಿಕ್ಕಿ ಹೊಡೆದು, ಅದನ್ನು ರಸ್ತೆ ಅಪಘಾತದಂತೆ ತೋರಿಸಲು ಯತ್ನಿಸಿದ್ದರು.
ಫೆಬ್ರವರಿ 26ರಂದು ಸವದತ್ತಿ ರಸ್ತೆಯ ದುರ್ಗಾದೇವಿ ದೇವಸ್ಥಾನದ ಸಮೀಪ ನಡೆದ ಅಪಘಾತದಲ್ಲಿ ಲಲಿತಾ ಸ್ಥಳದಲ್ಲೇ ಮೃತಪಟ್ಟಿದ್ದರು. ಆರಂಭದಲ್ಲಿ ಅಪಘಾತ ಪ್ರಕರಣವಾಗಿ ದಾಖಲಿಸಿಕೊಂಡ ಪೊಲೀಸರು, ಡಿಕ್ಕಿ ಹೊಡೆದ ವಾಹನದ ಹಿಂದಿನಿಂದ ಬರುತ್ತಿದ್ದ ಬಸ್ನ ಡ್ಯಾಶ್ಬೋರ್ಡ್ ಕ್ಯಾಮೆರಾದ ದೃಶ್ಯಗಳನ್ನು ಪರಿಶೀಲಿಸಿದಾಗ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿತು. ವಿಡಿಯೋ ಪರಿಶೀಲನೆಯ ನಂತರ ಹತ್ಯೆ ಸಂಚು ಬಯಲಾಗಿದ್ದು, ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಪ್ರಕರಣದ ಕುರಿತು ಮಾಹಿತಿ ನೀಡಿದ ಎಸ್ಪಿ ಗುಂಜನ್ ಆರ್ಯ ಅವರ ಪ್ರಕಾರ, ಲಲಿತಾ ಮತ್ತು ಉದಯ ದಂಪತಿಗಳ ನಡುವೆ ಕಳೆದ ಹತ್ತು ವರ್ಷಗಳಿಂದ ದಾಂಪತ್ಯ ಕಲಹ ಮುಂದುವರಿದಿತ್ತು. ಜೀವನಾಂಶಕ್ಕಾಗಿ ಲಲಿತಾ ನ್ಯಾಯಾಲಯದ ಮೊರೆ ಹೋಗಿದ್ದು, ಎರಡು ಎಕರೆ ಜಮೀನು ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ವಿಚಾರಣೆ ಅಂತಿಮ ಹಂತ ತಲುಪಿದ್ದ ಸಂದರ್ಭದಲ್ಲಿ, ಜಮೀನು ನೀಡಲು ನಿರಾಕರಿಸಿದ ಉದಯ ಕೊಲೆ ಸಂಚು ರೂಪಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ದಿನ ಉದಯ ಲಲಿತಾ ಅವರಿಗೆ ಫೋನ್ ಮಾಡಿ ಅಮ್ಮಿನಬಾವಿ ಗ್ರಾಮದ ಬಳಿ ಮಾತನಾಡುವುದಾಗಿ ಕರೆಸಿಕೊಂಡಿದ್ದಾನೆ. ಪತಿಯ ಸೂಚನೆಯಂತೆ ಸ್ಥಳಕ್ಕೆ ಬಂದ ಲಲಿತಾ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿಗಳು ಥಾರ್ ವಾಹನದಲ್ಲಿ ಬಂದು ಹಿಂದಿನಿಂದ ಡಿಕ್ಕಿ ಹೊಡೆದು ಹತ್ಯೆ ಮಾಡಿದ್ದಾರೆ. ಈ ದೃಶ್ಯಗಳು ಬಸ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅನುಮಾನಗೊಂಡ ಬಸ್ ಚಾಲಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಪ್ರಸ್ತುತ ನಾಲ್ವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ಮುಂದುವರಿಸಲಾಗಿದ್ದು, ಹತ್ಯೆಗೆ ಬಳಸಿದ ಥಾರ್ ವಾಹನವನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ತನಿಖೆ ಮುಂದುವರಿದಿದೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am