ಬ್ರೇಕಿಂಗ್ ನ್ಯೂಸ್
07-03-26 12:01 pm HK News Staffer ಕರ್ನಾಟಕ
ವಿಜಯವಾಡ, ಮಾರ್ಚ್ 06: ಜನಸಂಖ್ಯೆ ಕುಸಿತದ ಹಿನ್ನೆಲೆ ದಂಪತಿಗಳು ಹೆಚ್ಚು ಮಕ್ಕಳನ್ನು ಹೊಂದಲು ಉತ್ತೇಜನ ನೀಡುವ ಉದ್ದೇಶದಿಂದ ಆಂಧ್ರಪ್ರದೇಶ ಸರ್ಕಾರ ಮಹತ್ವದ ಯೋಜನೆ ಘೋಷಿಸಿದೆ. 3ನೇ ಮಗುವಿಗೆ ₹25,000 ನಗದು ಪ್ರೋತ್ಸಾಹಧನ ಹಾಗೂ 18 ವರ್ಷದ ತನಕ ಉಚಿತ ಶಿಕ್ಷಣ ನೀಡಲು ಸರ್ಕಾರ ತೀರ್ಮಾನಿಸಿದ್ದು, ಇದರ ಕುರಿತ ಕರಡು ಮಸೂದೆಯನ್ನು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ. ಈ ಯೋಜನೆಯನ್ನು ಏಪ್ರಿಲ್ 1ರಿಂದ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸುತ್ತಿದೆ.
‘ಪೋಷಣ–ಶಿಕ್ಷಾ–ಸುರಕ್ಷಾ ಪ್ಯಾಕೇಜ್’ ಅಡಿಯಲ್ಲಿ ಈ ಯೋಜನೆ ಜಾರಿಯಾಗಲಿದೆ. ಇದರ ಜೊತೆಗೆ, ಕೆಲಸ ಮಾಡುವ ತಾಯಂದಿರಿಗೆ 12 ತಿಂಗಳ ಮಾತೃತ್ವ ರಜೆ ಹಾಗೂ ತಂದೆಗಳಿಗೆ 2 ತಿಂಗಳ ಪಿತೃತ್ವ ರಜೆ ನೀಡುವ ಪ್ರಸ್ತಾವನೆಯೂ ಇದೆ. ಐವಿಎಫ್ (IVF) ಮೂಲಕ ಮಗು ಪಡೆಯಲು ಬಯಸುವ ದಂಪತಿಗಳಿಗೆ ಸಬ್ಸಿಡಿ ದರದಲ್ಲಿ ಚಿಕಿತ್ಸೆ ಸೌಲಭ್ಯ ನೀಡಲಾಗುತ್ತದೆ.
ಇದೇ ವೇಳೆ, 3 ಮಕ್ಕಳನ್ನು ಹೊಂದಿರುವ ಸರ್ಕಾರಿ ನೌಕರರು ನಿವೃತ್ತಿಯ ವಯಸ್ಸಿನ ಹಂತಕ್ಕೆ ಬಂದಾಗ ಅವರಿಗೆ 15 ದಿನಗಳ ಯೋಗಕ್ಷೇಮ ರಜೆ ಹಾಗೂ ₹50,000 ಆರೋಗ್ಯ ನಿಧಿ ನೀಡುವ ವ್ಯವಸ್ಥೆಯೂ ಯೋಜನೆಯಲ್ಲಿ ಸೇರಿಸಲಾಗಿದೆ.
ಯೋಜನೆಗೆ ಕಾರಣವೇನು?
ಆಂಧ್ರಪ್ರದೇಶದಲ್ಲಿ ಜನನ ಪ್ರಮಾಣದಲ್ಲಿ ಗಣನೀಯ ಕುಸಿತ ಕಂಡುಬಂದಿದೆ. 1993ರಲ್ಲಿ ರಾಜ್ಯದ ಒಟ್ಟು ಫಲವತ್ತತೆ ದರ (ಟಿಎಫ್ಆರ್) 3.0 ಇತ್ತಾದರೆ, ಇದೀಗ ಅದು 1.4ಕ್ಕೆ ಇಳಿದಿದೆ. ಇದು ದಕ್ಷಿಣ ಭಾರತದ ಇತರ ರಾಜ್ಯಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ ಪ್ರಮಾಣವಾಗಿದೆ.
ಈ ಪರಿಸ್ಥಿತಿ ಮುಂದುವರೆದರೆ ರಾಜ್ಯದ ಆರ್ಥಿಕ ಬೆಳವಣಿಗೆಗೂ ಹಾಗೂ ಭವಿಷ್ಯದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಸರ್ಕಾರ ಆತಂಕ ವ್ಯಕ್ತಪಡಿಸಿದೆ.
ಈ ಹಿನ್ನೆಲೆಯಲ್ಲಿ ಜನಸಂಖ್ಯೆ ಕುಸಿತ ತಡೆಯಲು ಮೊದಲು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 2ಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಇದ್ದ ಸ್ಪರ್ಧಾ ನಿರ್ಬಂಧವನ್ನು ಸರ್ಕಾರ ತೆರವುಗೊಳಿಸಿತ್ತು. ಇದೀಗ ದಂಪತಿಗಳನ್ನು ಹೆಚ್ಚು ಮಕ್ಕಳನ್ನು ಹೊಂದಲು ಉತ್ತೇಜಿಸುವ ಉದ್ದೇಶದಿಂದ ಹೊಸ ಯೋಜನೆಯನ್ನು ಘೋಷಿಸಲಾಗಿದೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am