ಬ್ರೇಕಿಂಗ್ ನ್ಯೂಸ್
07-03-26 12:01 pm HK News Staffer ಕರ್ನಾಟಕ
ವಿಜಯವಾಡ, ಮಾರ್ಚ್ 06: ಜನಸಂಖ್ಯೆ ಕುಸಿತದ ಹಿನ್ನೆಲೆ ದಂಪತಿಗಳು ಹೆಚ್ಚು ಮಕ್ಕಳನ್ನು ಹೊಂದಲು ಉತ್ತೇಜನ ನೀಡುವ ಉದ್ದೇಶದಿಂದ ಆಂಧ್ರಪ್ರದೇಶ ಸರ್ಕಾರ ಮಹತ್ವದ ಯೋಜನೆ ಘೋಷಿಸಿದೆ. 3ನೇ ಮಗುವಿಗೆ ₹25,000 ನಗದು ಪ್ರೋತ್ಸಾಹಧನ ಹಾಗೂ 18 ವರ್ಷದ ತನಕ ಉಚಿತ ಶಿಕ್ಷಣ ನೀಡಲು ಸರ್ಕಾರ ತೀರ್ಮಾನಿಸಿದ್ದು, ಇದರ ಕುರಿತ ಕರಡು ಮಸೂದೆಯನ್ನು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ. ಈ ಯೋಜನೆಯನ್ನು ಏಪ್ರಿಲ್ 1ರಿಂದ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸುತ್ತಿದೆ.
‘ಪೋಷಣ–ಶಿಕ್ಷಾ–ಸುರಕ್ಷಾ ಪ್ಯಾಕೇಜ್’ ಅಡಿಯಲ್ಲಿ ಈ ಯೋಜನೆ ಜಾರಿಯಾಗಲಿದೆ. ಇದರ ಜೊತೆಗೆ, ಕೆಲಸ ಮಾಡುವ ತಾಯಂದಿರಿಗೆ 12 ತಿಂಗಳ ಮಾತೃತ್ವ ರಜೆ ಹಾಗೂ ತಂದೆಗಳಿಗೆ 2 ತಿಂಗಳ ಪಿತೃತ್ವ ರಜೆ ನೀಡುವ ಪ್ರಸ್ತಾವನೆಯೂ ಇದೆ. ಐವಿಎಫ್ (IVF) ಮೂಲಕ ಮಗು ಪಡೆಯಲು ಬಯಸುವ ದಂಪತಿಗಳಿಗೆ ಸಬ್ಸಿಡಿ ದರದಲ್ಲಿ ಚಿಕಿತ್ಸೆ ಸೌಲಭ್ಯ ನೀಡಲಾಗುತ್ತದೆ.
ಇದೇ ವೇಳೆ, 3 ಮಕ್ಕಳನ್ನು ಹೊಂದಿರುವ ಸರ್ಕಾರಿ ನೌಕರರು ನಿವೃತ್ತಿಯ ವಯಸ್ಸಿನ ಹಂತಕ್ಕೆ ಬಂದಾಗ ಅವರಿಗೆ 15 ದಿನಗಳ ಯೋಗಕ್ಷೇಮ ರಜೆ ಹಾಗೂ ₹50,000 ಆರೋಗ್ಯ ನಿಧಿ ನೀಡುವ ವ್ಯವಸ್ಥೆಯೂ ಯೋಜನೆಯಲ್ಲಿ ಸೇರಿಸಲಾಗಿದೆ.
ಯೋಜನೆಗೆ ಕಾರಣವೇನು?
ಆಂಧ್ರಪ್ರದೇಶದಲ್ಲಿ ಜನನ ಪ್ರಮಾಣದಲ್ಲಿ ಗಣನೀಯ ಕುಸಿತ ಕಂಡುಬಂದಿದೆ. 1993ರಲ್ಲಿ ರಾಜ್ಯದ ಒಟ್ಟು ಫಲವತ್ತತೆ ದರ (ಟಿಎಫ್ಆರ್) 3.0 ಇತ್ತಾದರೆ, ಇದೀಗ ಅದು 1.4ಕ್ಕೆ ಇಳಿದಿದೆ. ಇದು ದಕ್ಷಿಣ ಭಾರತದ ಇತರ ರಾಜ್ಯಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ ಪ್ರಮಾಣವಾಗಿದೆ.
ಈ ಪರಿಸ್ಥಿತಿ ಮುಂದುವರೆದರೆ ರಾಜ್ಯದ ಆರ್ಥಿಕ ಬೆಳವಣಿಗೆಗೂ ಹಾಗೂ ಭವಿಷ್ಯದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಸರ್ಕಾರ ಆತಂಕ ವ್ಯಕ್ತಪಡಿಸಿದೆ.
ಈ ಹಿನ್ನೆಲೆಯಲ್ಲಿ ಜನಸಂಖ್ಯೆ ಕುಸಿತ ತಡೆಯಲು ಮೊದಲು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 2ಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಇದ್ದ ಸ್ಪರ್ಧಾ ನಿರ್ಬಂಧವನ್ನು ಸರ್ಕಾರ ತೆರವುಗೊಳಿಸಿತ್ತು. ಇದೀಗ ದಂಪತಿಗಳನ್ನು ಹೆಚ್ಚು ಮಕ್ಕಳನ್ನು ಹೊಂದಲು ಉತ್ತೇಜಿಸುವ ಉದ್ದೇಶದಿಂದ ಹೊಸ ಯೋಜನೆಯನ್ನು ಘೋಷಿಸಲಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm