ಬ್ರೇಕಿಂಗ್ ನ್ಯೂಸ್
12-03-26 02:48 pm HK News Staffer ಕರ್ನಾಟಕ
ತಮಿಳುನಾಡಿನ, ಮಾ.13: ಮಗಳಿಗೆ ಮದುವೆಯಾಗುತ್ತಿಲ್ಲ ಎಂದು ಮನನೊಂದ ತಂದೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚೆನ್ನೈ ನಗರದ ವದಪಾಲನಿ ಪ್ರದೇಶದಲ್ಲಿ ಸಂಭವಿಸಿದೆ. 57 ವರ್ಷದ ಆಟೋ ರಿಕ್ಷಾ ಚಾಲಕ ಕೃಷ್ಣಕುಮಾರ್ ಮೃತ ದುರ್ದೈವಿ.
.
ತಂದೆಯ ಸಾವಿನಿಂದ ಮನನೊಂದ ಮಗಳು ಪಾಕಿಯಾ ಕೂಡ ಕೆಲವೇ ಗಂಟೆಗಳ ಬಳಿಕ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷ್ಣ ಕುಮಾರ್ ಮಾರ್ಚ್ 7ರಂದು ಮನೆಬಿಟ್ಟು ಹೊರ ಹೋಗಿದ್ದವರು ಮರಳಿ ಮನೆಗೆ ಬಂದಿರಲಿಲ್ಲ. ಕುಟುಂಬದವರು ಹಲವು ಕಡೆ ಹುಡುಕಿದರೂ ಪತ್ತೆಯಾಗಿರಲಿಲ್ಲ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಿಸಿದ್ದರು.
ಆದರೆ ಮಾರ್ಚ್ 8ರ ರಾತ್ರಿ ಅವರ ಮೊಬೈಲ್ ಫೋನ್ ಮನೆಯ ಸಮೀಪದ ಬಾವಿಯ ಬಳಿ ಪತ್ತೆಯಾದ ಬಳಿಕ ಪರಿಶೀಲಿಸಿದಾಗ, ಬಾವಿಯ ಬಳಿ ಅವರ ಶವ ಪತ್ತೆಯಾಗಿದೆ. ತಂದೆಯ ಮೃತದೇಹವನ್ನು ಕಂಡು ಆಘಾತಕ್ಕೊಳಗಾದ ಪಾಕಿಯಾ, ತಾಯಿಯನ್ನು ಕೋಣೆಯಲ್ಲಿ ಲಾಕ್ ಮಾಡಿ ತಾನು ಅಡುಗೆ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ತಾಯಿ ಹಿರಿಯ ಮಗಳು ಬ್ರಿಂಡಾ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಬ್ರಿಂಡಾ ಸ್ಥಳಕ್ಕೆ ಬಂದು ತಾಯಿಯನ್ನು ರಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ದಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬಾವಿಯಿಂದ ಕೃಷ್ಣಕುಮಾರ್ ಅವರ ಶವವನ್ನು ಹೊರತೆಗೆದಿದ್ದಾರೆ. ಪಾಕಿಯಾ ಅವರನ್ನು ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದ್ದಾರೆ. ಕೃಷ್ಣಕುಮಾರ್ ಅವರಿಗೆ ಇಬ್ಬರು ಪುತ್ರಿಯರಿದ್ದು ಹಿರಿಯ ಮಗಳು ಬ್ರಿಂಡಾಗೆ ಮದುವೆಯಾಗಿದೆ. ಆದರೆ ಅವರ 30 ವರ್ಷದ ಪಾಕಿಯಾ ಇನ್ನೂ ಮದುವೆಯಾಗದೇ ಇರುವುದರಿಂದ ಕುಟುಂಬದ ಮೇಲೆ ಸಾಮಾಜಿಕ ಒತ್ತಡ ಹೆಚ್ಚಾಗಿದ್ದರಿಂದ ಕೃಷ್ಣಕುಮಾರ್ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎಂದು ತಿಳಿದುಬಂದಿದೆ. ಇದರಿಂದ ಕೃಷ್ಣಕುಮಾರ್ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am