ಬ್ರೇಕಿಂಗ್ ನ್ಯೂಸ್
12-03-26 02:48 pm HK News Staffer ಕರ್ನಾಟಕ
ತಮಿಳುನಾಡಿನ, ಮಾ.13: ಮಗಳಿಗೆ ಮದುವೆಯಾಗುತ್ತಿಲ್ಲ ಎಂದು ಮನನೊಂದ ತಂದೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚೆನ್ನೈ ನಗರದ ವದಪಾಲನಿ ಪ್ರದೇಶದಲ್ಲಿ ಸಂಭವಿಸಿದೆ. 57 ವರ್ಷದ ಆಟೋ ರಿಕ್ಷಾ ಚಾಲಕ ಕೃಷ್ಣಕುಮಾರ್ ಮೃತ ದುರ್ದೈವಿ.
.
ತಂದೆಯ ಸಾವಿನಿಂದ ಮನನೊಂದ ಮಗಳು ಪಾಕಿಯಾ ಕೂಡ ಕೆಲವೇ ಗಂಟೆಗಳ ಬಳಿಕ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷ್ಣ ಕುಮಾರ್ ಮಾರ್ಚ್ 7ರಂದು ಮನೆಬಿಟ್ಟು ಹೊರ ಹೋಗಿದ್ದವರು ಮರಳಿ ಮನೆಗೆ ಬಂದಿರಲಿಲ್ಲ. ಕುಟುಂಬದವರು ಹಲವು ಕಡೆ ಹುಡುಕಿದರೂ ಪತ್ತೆಯಾಗಿರಲಿಲ್ಲ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಿಸಿದ್ದರು.
ಆದರೆ ಮಾರ್ಚ್ 8ರ ರಾತ್ರಿ ಅವರ ಮೊಬೈಲ್ ಫೋನ್ ಮನೆಯ ಸಮೀಪದ ಬಾವಿಯ ಬಳಿ ಪತ್ತೆಯಾದ ಬಳಿಕ ಪರಿಶೀಲಿಸಿದಾಗ, ಬಾವಿಯ ಬಳಿ ಅವರ ಶವ ಪತ್ತೆಯಾಗಿದೆ. ತಂದೆಯ ಮೃತದೇಹವನ್ನು ಕಂಡು ಆಘಾತಕ್ಕೊಳಗಾದ ಪಾಕಿಯಾ, ತಾಯಿಯನ್ನು ಕೋಣೆಯಲ್ಲಿ ಲಾಕ್ ಮಾಡಿ ತಾನು ಅಡುಗೆ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ತಾಯಿ ಹಿರಿಯ ಮಗಳು ಬ್ರಿಂಡಾ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಬ್ರಿಂಡಾ ಸ್ಥಳಕ್ಕೆ ಬಂದು ತಾಯಿಯನ್ನು ರಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ದಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬಾವಿಯಿಂದ ಕೃಷ್ಣಕುಮಾರ್ ಅವರ ಶವವನ್ನು ಹೊರತೆಗೆದಿದ್ದಾರೆ. ಪಾಕಿಯಾ ಅವರನ್ನು ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದ್ದಾರೆ. ಕೃಷ್ಣಕುಮಾರ್ ಅವರಿಗೆ ಇಬ್ಬರು ಪುತ್ರಿಯರಿದ್ದು ಹಿರಿಯ ಮಗಳು ಬ್ರಿಂಡಾಗೆ ಮದುವೆಯಾಗಿದೆ. ಆದರೆ ಅವರ 30 ವರ್ಷದ ಪಾಕಿಯಾ ಇನ್ನೂ ಮದುವೆಯಾಗದೇ ಇರುವುದರಿಂದ ಕುಟುಂಬದ ಮೇಲೆ ಸಾಮಾಜಿಕ ಒತ್ತಡ ಹೆಚ್ಚಾಗಿದ್ದರಿಂದ ಕೃಷ್ಣಕುಮಾರ್ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎಂದು ತಿಳಿದುಬಂದಿದೆ. ಇದರಿಂದ ಕೃಷ್ಣಕುಮಾರ್ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm