ಬ್ರೇಕಿಂಗ್ ನ್ಯೂಸ್
12-03-26 02:48 pm HK News Staffer ಕರ್ನಾಟಕ
ತಮಿಳುನಾಡಿನ, ಮಾ.13: ಮಗಳಿಗೆ ಮದುವೆಯಾಗುತ್ತಿಲ್ಲ ಎಂದು ಮನನೊಂದ ತಂದೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚೆನ್ನೈ ನಗರದ ವದಪಾಲನಿ ಪ್ರದೇಶದಲ್ಲಿ ಸಂಭವಿಸಿದೆ. 57 ವರ್ಷದ ಆಟೋ ರಿಕ್ಷಾ ಚಾಲಕ ಕೃಷ್ಣಕುಮಾರ್ ಮೃತ ದುರ್ದೈವಿ.
.
ತಂದೆಯ ಸಾವಿನಿಂದ ಮನನೊಂದ ಮಗಳು ಪಾಕಿಯಾ ಕೂಡ ಕೆಲವೇ ಗಂಟೆಗಳ ಬಳಿಕ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷ್ಣ ಕುಮಾರ್ ಮಾರ್ಚ್ 7ರಂದು ಮನೆಬಿಟ್ಟು ಹೊರ ಹೋಗಿದ್ದವರು ಮರಳಿ ಮನೆಗೆ ಬಂದಿರಲಿಲ್ಲ. ಕುಟುಂಬದವರು ಹಲವು ಕಡೆ ಹುಡುಕಿದರೂ ಪತ್ತೆಯಾಗಿರಲಿಲ್ಲ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಿಸಿದ್ದರು.
ಆದರೆ ಮಾರ್ಚ್ 8ರ ರಾತ್ರಿ ಅವರ ಮೊಬೈಲ್ ಫೋನ್ ಮನೆಯ ಸಮೀಪದ ಬಾವಿಯ ಬಳಿ ಪತ್ತೆಯಾದ ಬಳಿಕ ಪರಿಶೀಲಿಸಿದಾಗ, ಬಾವಿಯ ಬಳಿ ಅವರ ಶವ ಪತ್ತೆಯಾಗಿದೆ. ತಂದೆಯ ಮೃತದೇಹವನ್ನು ಕಂಡು ಆಘಾತಕ್ಕೊಳಗಾದ ಪಾಕಿಯಾ, ತಾಯಿಯನ್ನು ಕೋಣೆಯಲ್ಲಿ ಲಾಕ್ ಮಾಡಿ ತಾನು ಅಡುಗೆ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ತಾಯಿ ಹಿರಿಯ ಮಗಳು ಬ್ರಿಂಡಾ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಬ್ರಿಂಡಾ ಸ್ಥಳಕ್ಕೆ ಬಂದು ತಾಯಿಯನ್ನು ರಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ದಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬಾವಿಯಿಂದ ಕೃಷ್ಣಕುಮಾರ್ ಅವರ ಶವವನ್ನು ಹೊರತೆಗೆದಿದ್ದಾರೆ. ಪಾಕಿಯಾ ಅವರನ್ನು ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದ್ದಾರೆ. ಕೃಷ್ಣಕುಮಾರ್ ಅವರಿಗೆ ಇಬ್ಬರು ಪುತ್ರಿಯರಿದ್ದು ಹಿರಿಯ ಮಗಳು ಬ್ರಿಂಡಾಗೆ ಮದುವೆಯಾಗಿದೆ. ಆದರೆ ಅವರ 30 ವರ್ಷದ ಪಾಕಿಯಾ ಇನ್ನೂ ಮದುವೆಯಾಗದೇ ಇರುವುದರಿಂದ ಕುಟುಂಬದ ಮೇಲೆ ಸಾಮಾಜಿಕ ಒತ್ತಡ ಹೆಚ್ಚಾಗಿದ್ದರಿಂದ ಕೃಷ್ಣಕುಮಾರ್ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎಂದು ತಿಳಿದುಬಂದಿದೆ. ಇದರಿಂದ ಕೃಷ್ಣಕುಮಾರ್ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm