ಬ್ರೇಕಿಂಗ್ ನ್ಯೂಸ್
13-03-26 09:44 am HK News Staffer ಕರ್ನಾಟಕ
ಕೊಪ್ಪಳ, ಮಾ 14: ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಸ್ಲೀಪರ್ ಬಸ್ನಿಂದ 90 ಲಕ್ಷ ಮೌಲ್ಯದ ಬಂಗಾರವನ್ನ ನಾಲ್ವರು ಖದೀಮರು ದರೋಡೆ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಬಸ್ ರಾತ್ರಿ ಊಟಕ್ಕೆ ನಿಲ್ಲಿಸಿದ್ದ ಸಂದರ್ಭದಲ್ಲಿ ಬಸ್ಸಿನಲ್ಲೇ ಮಲಗಿದ್ದ ಪ್ರಯಾಣಿಕರಿಂದ ಈ ಕೃತ್ಯ ನಡೆದಿದ್ದು, ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕೊಪ್ಪಳ ಜಿಲ್ಲೆಯ ಹೊರವಲಯದಲ್ಲಿ ನಡೆದ ಬಂಗಾರದ ದರೋಡೆ ಪ್ರಕರಣ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಮಂತ್ರಾಲಯದಿಂದ ಮಂಗಳೂರಿಗೆ ಬಸ್ನಲ್ಲಿ ಸಾಗಿಸುತ್ತಿದ್ದ 90 ಲಕ್ಷ ರೂ. ಒಡವೆ ಇರೋ ಬಂಗಾರದ ಚೀಲವನ್ನು ಖದೀಮರು ಕಳ್ಳತನ ಮಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನಾಲ್ಕು ಜನರಿಂದ ಈ ದರೋಡೆ ನಡೆದಿದೆ. ಇದೀಗ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.
ಸ್ಲೀಪರ್ ಬಸ್ನಲ್ಲೇ ಬಂದ ಮಾಸ್ಟರ್ ಮೈಂಡ್ ಕಳ್ಳ , ಸಿಂಧನೂರಿನಿಂದ ಬಸ್ನಲ್ಲೇ ಪ್ರಯಾಣಿಸಿ ಕೊಪ್ಪಳಕ್ಕೆ ಬಂದಿದ್ದಾನೆ. ಅದೇ ವೇಳೆ ಇನ್ನೂ ಮೂವರು ಖದೀಮರು ಬೇರೆ ವಾಹನದಲ್ಲಿ ಬಸ್ನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ಒಟ್ಟು ನಾಲ್ವರು ಸೇರಿಕೊಂಡು ಈ ದರೋಡೆ ಕೃತ್ಯವನ್ನು ಸಂಚು ರೂಪಿಸಿ ಕಳ್ಳತನ ನಡೆಸಿದ್ದಾರೆ.
ಮಂತ್ರಾಲಯದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಶ್ರೀ ಕುಮಾರ್ ಖಾಸಗಿ ಬಸ್ ಕೊಪ್ಪಳ ಹೊರವಲಯದಲ್ಲಿ ಊಟಕ್ಕಾಗಿ ನಿಲ್ಲಿಸಿತ್ತು. ಆ ವೇಳೆ ಊಟಕ್ಕೆ ಹೋದ ಮಹಮ್ಮದ್ ಮತ್ತು ಇರ್ಷಾದ್ ಎಂಬ ಪ್ರಯಾಣಿಕರ ಬ್ಯಾಗಿನಲ್ಲಿದ್ದ ಬಂಗಾರದ ಚೀಲವನ್ನು ಖದೀಮರು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ.
ಹೋಟೆಲ್ ಮುಂಭಾಗದಲ್ಲಿದ್ದ ಸಿಸಿ ಕ್ಯಾಮರದಲ್ಲಿ ಈ ದರೋಡೆ ಕೃತ್ಯದ ಸಂಪೂರ್ಣ ದೃಶ್ಯ ದಾಖಲಾಗಿದ್ದು, ಆರೋಪಿಗಳು ಹೇಗೆ ಬಸ್ ಹತ್ತಿ ಬಂಗಾರದ ಚೀಲವನ್ನು ಕದ್ದುಕೊಂಡು ಹೋಗಿದ್ದಾರೆ ಎಂಬುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಈ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm