ಬ್ರೇಕಿಂಗ್ ನ್ಯೂಸ್
14-03-26 10:14 pm HK News Staffer ಕರ್ನಾಟಕ
ದಾವಣಗೆರೆ, ಮಾರ್ಚ್ 14 : ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆಗೆ ಪುತ್ರಿಯೇ ತನ್ನ ಲಿವರ್ ದಾನ ಮಾಡಿರುವ ಅಪರೂಪದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದಲ್ಲಿ ನಡೆದಿದೆ. ಕಂದಾಯ ಇಲಾಖೆಯ ಆಹಾರ ಶಾಖೆ ಶಿರಸ್ತೇದಾರ ಆಗಿರುವ ಅಜ್ಜಪ್ಪ ಪತ್ರಿ ಎಂಬವರಿಗೆ ಅವರ ಮಗಳು ಚಂದನಾ ತನ್ನ ಲಿವರ್ ಕೊಟ್ಟು ಅಪ್ಪನ ಜೀವ ಉಳಿಸಿದ್ದಾಳೆ.
ತಂದೆ ಅಜ್ಜಪ್ಪನ ವಿರೋಧದ ನಡುವೆಯೂ ಪುತ್ರಿ ಚಂದನಾ ತನ್ನ ಪ್ರೀತಿ ತೋರಿದ್ದಾಳೆ. ಇದೇ ವೇಳೆ, ಆಸ್ಪತ್ರೆಯ ಬಿಲ್ ಪಾವತಿಸಲಾಗದೆ ನಮ್ಮ ಕುಟುಂಬ ಸಂಕಷ್ಟಕ್ಕೆ ಸಿಲುಕಿದ್ದು, ಇದ್ದ ಮೂರು ಎಕರೆ ಜಮೀನು ಮಾರಾಟ ಮಾಡಿ ಆಸ್ಪತ್ರೆ ಶುಲ್ಕ ಪಾವತಿಸಿದ್ದೇವೆ. ಆದರೂ, ಇನ್ನೂ ಪಾವತಿಸಬೇಕಾದ ಮೊತ್ತ ಬಾಕಿ ಇದೆ ಎಂದು ಅಜ್ಜಪ್ಪನ ಕುಟುಂಬಸ್ಥರು ತಮ್ಮ ನೋವನ್ನು ತೋಡಿಕೊಂಡಿದ್ದಾರೆ.
ಅಜ್ಜಪ್ಪ ಅವರು ಜಗಳೂರು ಪಟ್ಟಣದ ತಾಲೂಕು ಕಚೇರಿಯಲ್ಲಿ ರಾಜಸ್ವ ನಿರೀಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ಆಹಾರ ಶಾಖೆಯಲ್ಲಿ ಶಿರಸ್ತೇದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಅಜ್ಜಪ್ಪ ತಮ್ಮ ಅನಾರೋಗ್ಯದ ಹಿನ್ನೆಲೆಯಲ್ಲಿ ಇತ್ತೀಚೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಅಜ್ಜಪ್ಪನನ್ನು ತಪಾಸಣೆ ನಡೆಸಿದ ಆಸ್ಪತ್ರೆಯ ವೈದ್ಯರು, ಅವರಿಗೆ ಆಲ್ಕೋಹಾಲ್ ರಹಿತ ಲಿವರ್ ಸಿರೋಸಿಸ್ (ನಾನ್ ಆಲ್ಕೋಹಾಲ್ ಡಿಸೀಜ್) ಇರುವುದಾಗಿ ದೃಢಪಡಿಸಿದ್ದರು. ಬಳಿಕ ಲಿವರ್ ಟ್ರಾನ್ಸ್ಪ್ಲಾಂಟ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆ ಪುತ್ರಿ ಚಂದನಾ ತನ್ನ ಲಿವರ್ (ಯಕೃತ್) ನ ಒಂದು ಭಾಗವನ್ನು ದಾನ ಮಾಡುವ ಮೂಲಕ ತಂದೆಯ ಜೀವವನ್ನು ಉಳಿಸಿದ್ದಾರೆ.
ಲಿವರ್ ಟ್ರಾನ್ಸ್ಪ್ಲಾಂಟ್ ಯಶಸ್ವಿ ಆಯಿತು. ಆದರೆ, ಆಸ್ಪತ್ರೆಯ ಚಿಕಿತ್ಸಾ ವೆಚ್ಚವು ಲಕ್ಷಾಂತರ ರೂಪಾಯಿ ಆಯಿತು. ಅದನ್ನು ಭರಿಸಲು ನನ್ನ ತಂದೆ ಇಲಾಖೆಯಲ್ಲಿ ಸೇವೆಗೈದ 29 ವರ್ಷದ ಸರ್ಕಾರಿ ಸಂಬಳ ಕೂಡಿಸಿ ಕಳೆದರೂ ಆಸ್ಪತ್ರೆ ವೆಚ್ಚಕ್ಕೆ ಸಾಲುತ್ತಿಲ್ಲ. ತಾನು ಕೂಡ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸಾಧ್ಯವಾದಷ್ಟು ಕಟ್ಟಿದ್ದೇವೆ ಎಂದು ಚಂದನಾ ಹೇಳಿದ್ದಾರೆ. ತನ್ನ ಲಿವರ್ ದಾನ ಮಾಡಿ ತಂದೆಯ ಪ್ರಾಣ ಉಳಿಸಿದ್ದಕ್ಕಾಗಿ ಸಾರ್ವಜನಿಕ ವಲಯದಲ್ಲಿ ಚಂದನಾ ಬಗ್ಗೆ ಪ್ರಶಂಸೆ ವ್ಯಕ್ತವಾಗುತ್ತಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm