ಬ್ರೇಕಿಂಗ್ ನ್ಯೂಸ್
16-03-26 03:36 pm HK News Staffer ಕರ್ನಾಟಕ
ಲಕ್ನೋ, ಮಾರ್ಚ್ 10: ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ತನ್ನನ್ನು ಐಎಎಸ್ ಅಧಿಕಾರಿ ಎಂದು ಪೋಸು ಕೊಟ್ಟು ಜನಸಾಮಾನ್ಯರಿಗೆ ಕರೆ ಮಾಡುತ್ತಿದ್ದ ರಾಹುಲ್ ಕೌಶಿಕ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ಪ್ರಕರಣವು ಈಗ ಚರ್ಚೆಗೆ ಗ್ರಾಸವಾಗಿದೆ.
ಮೀರತ್ ಜಿಲ್ಲೆಯ ನೌಚಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಹುಲ್ ಕೌಶಿಕ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನನ್ನು ತಾನು ಐಎಎಸ್ ಅಧಿಕಾರಿ ಎಂದು ಗುರುತಿಸಿಕೊಂಡು ಜನರನ್ನು ಬೆದರಿಸುತ್ತಿದ್ದ ಮತ್ತು ಅಧಿಕಾರಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದ ಎಂಬುದು ಈತನ ಮೇಲಿರುವ ಆರೋಪ.
ರಾಹುಲ್ ಬಂಧನದ ನಂತರ ಆತನ ಕುಟುಂಬಸ್ಥರು ಪೊಲೀಸರಿಗೆ ಐಎಎಸ್ ಪಾಸ್ ಆಗಿರುವ ಬಗ್ಗೆ ದಾಖಲೆಗಳನ್ನು ಸಲ್ಲಿಸಿದ್ದಾರೆ. ಇವರು ನೀಡಿರುವ ಮಾಹಿತಿಯ ಪ್ರಕಾರ, ರಾಹುಲ್ 2008ರಲ್ಲಿ ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದು, ಭಾರತೀಯ ಅಂಚೆ ಸೇವೆಗೆ ಆಯ್ಕೆಯಾಗಿದ್ದ ಎನ್ನಲಾಗಿದೆ. ಇದಕ್ಕೆ ಪೂರಕವಾಗಿ ತರಬೇತಿಯ ಫೋಟೋಗಳು, ಪ್ರಮಾಣಪತ್ರಗಳು ಮತ್ತು ಹಳೆಯ ಪತ್ರಿಕಾ ವರದಿಗಳನ್ನು ಕುಟುಂಬವು ಪ್ರಸ್ತುತಪಡಿಸಿದೆ.
ಕುಟುಂಬದವರು ನೀಡಿದ ದಾಖಲೆಗಳನ್ನು ಪರಿಶೀಲಿಸಿದ ನಂತರ ಪೊಲೀಸರು ರಾಹುಲ್ಗೆ ಸ್ಟೇಷನ್ ಜಾಮೀನು ನೀಡಿ ಬಿಡುಗಡೆ ಮಾಡಿದ್ದಾರೆ. ಆದರೆ, ಆ ದಾಖಲೆಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪರಿಶೀಲನೆ ವೇಳೆ ರಾಹುಲ್ ಕೌಶಿಕ್ ಪ್ರಸ್ತುತ ಯಾವುದೇ ಸರ್ಕಾರಿ ಹುದ್ದೆಯಲ್ಲಿ ಇಲ್ಲ ಎಂಬುದು ದೃಢಪಟ್ಟಿದೆ. ಪೊಲೀಸರ ಪ್ರಕಾರ, ಯಾರಾದರೂ ಹಿಂದೆ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದರೂ ಸಹ, ಅವರು ಈಗ ಸೇವೆಯಲ್ಲಿ ಇಲ್ಲದಿದ್ದಾಗ ತಮ್ಮನ್ನು ಐಎಎಸ್ ಅಧಿಕಾರಿ ಎಂದು ಹೇಳಿಕೊಳ್ಳುವುದು ಕಾನೂನುಬಾಹಿರವಾಗುತ್ತದೆ.
ರಾಹುಲ್ ಕೌಶಿಕ್ ತನ್ನ ಮೇಲಿನ ಕ್ರಮವನ್ನು ಪ್ರಶ್ನಿಸಿದ್ದು, ಪೊಲೀಸರು ವಿನಾಕಾರಣ ನನ್ನನ್ನು ಬಂಧಿಸಿದ್ದಾರೆ ಮತ್ತು ಅಕ್ರಮವಾಗಿ ಮೊಬೈಲ್ ವಶಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm