ಬ್ರೇಕಿಂಗ್ ನ್ಯೂಸ್
02-01-21 07:19 pm Prabhakar, Shivamogga ಕರ್ನಾಟಕ
ಶಿವಮೊಗ್ಗ, ಜ.02: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ವಿರುದ್ಧ ಮಾತನಾಡುತ್ತಿದ್ದಾರೆ. ಇವರು ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದ್ದಾರೆ. ಗ್ರಾ.ಪಂ. ಚುನಾವಣೆಯ ಸೋಲು ಕಾಂಗ್ರೆಸ್ ನಾಯಕರನ್ನು ಹತಾಶೆಗೆ ತಳ್ಳಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಟೀಕಿಸಿದ್ದಾರೆ.
ರಾಜ್ಯ ಬಿಜೆಪಿ ವಿಶೇಷ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರನ್ನು ಸಕ್ರೆಬೈಲು ಆನೆ ಬಿಡಾರದ ಬಳಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲು, ಶಿವಮೊಗ್ಗ ಜಿಲ್ಲೆ ರಾಜ್ಯದಲ್ಲಿಯೇ ಮಾದರಿ ಜಿಲ್ಲೆಯಾಗಿದೆ. ಇದು ಹೋರಾಟಗಳ ನಾಡಾಗಿದ್ದು, ಇಲ್ಲಿ ಸಂಘಟನೆಗೆ ಹೆಚ್ಚು ಒತ್ತು ಕೊಡಲಾಗುತ್ತಿದೆ. ಸಂಘಟನೆಗೆ ಒಂದು ರೀತಿಯ ಪ್ರಯೋಗ ಶಾಲೆ ಇದ್ದಂತೆ. ಇಲ್ಲಿ ಬಿಜೆಪಿ ವಿಶೇಷ ಸಭೆ ನಡೆಯುತ್ತಿರುವುದು ಸ್ವಾಗತ ಎಂದರು.
ಬಿಜೆಪಿಯ ಕಾರ್ಯಕಾರಿಣಿಯ ಸಭೆಯಲ್ಲಿ ಲವ್ ಜಿಹಾದ್, ಗೋಹತ್ಯೆ ನಿಷೇಧಕ್ಕೆ ಸಂಬಂಧಿಸಿದಂತೆ ಚರ್ಚಿಸಲಾಗುವುದು ಮತ್ತು ಕಾರ್ಯಕಾರಿಣಿ ಸಭೆಯಲ್ಲಿ ಬರಬಹುದಾದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.
ಈ ಬಾರಿಯ ಗ್ರಾ.ಪಂ. ಚುನಾವಣೆಯಲ್ಲಿ ನಾವು ಅಭೂತಪೂರ್ವ ಯಶಸ್ಸು ಪಡೆದಿದ್ದೇವೆ. ಸುಮಾರು 62 ಸಾವಿರ ಬಿಜೆಪಿ ಕಾರ್ಯಕರ್ತರು ಸ್ವತಂತ್ರ ಅಭ್ಯರ್ಥಿಗಳಾಗಿ ವಿಜಯಶಾಲಿಗಳಾಗಿದ್ದಾರೆ. ಇದು ನಮ್ಮ ಸಂಘಟನೆಗೆ ಮತ್ತಷ್ಟು ಬಲ ತಂದಿದೆ ಎಂದರು.
ಈ ಸಂದರ್ಭದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ, ವಿಧಾನಪರಿಷತ್ ಸದಸ್ಯ ಎಸ್.ರುದ್ರೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಹಲವರಿದ್ದರು.
The Defeat of Congress in Gram Panchayat Elections 2020 has made them embarrassed slams Naleen Kumar Kateel in Shivamogga.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
21-06-25 08:50 pm
HK News Desk
Couple Caught at Jaipur Hotel, Video: ಹೋಟೆಲ್...
20-06-25 10:19 pm
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm