ಬ್ರೇಕಿಂಗ್ ನ್ಯೂಸ್
18-03-26 09:44 am HK News Staffer ಕರ್ನಾಟಕ
ಬೆಂಗಳೂರು, ಮಾ 18: ನಗರದ ಆರ್ಎಂವಿ ಎಕ್ಸ್ಟೆನ್ಶನ್ ಪ್ರದೇಶದ ವೈದ್ಯೆಯೊಬ್ಬರು ತಮ್ಮ ಬ್ಯಾಂಕ್ ಲಾಕರ್ನಿಂದ 24 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಾಣೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
57 ವರ್ಷದ ವೈದ್ಯೆ ನೀಡಿದ ದೂರಿನ ಪ್ರಕಾರ, ರಾಷ್ಟ್ರೀಯಕೃತ ಬ್ಯಾಂಕ್ ಶಾಖೆಯಲ್ಲಿ ಸೇವಿಂಗ್ಸ್ ಖಾತೆ ಮತ್ತು ಲಾಕರ್ ಹೊಂದಿದ್ದಾರೆ. ಮಗನ ಮದುವೆ ಹಿನ್ನೆಲೆ ಫೆಬ್ರವರಿ 27ರಂದು ಲಾಕರ್ನಿಂದ ಚಿನ್ನಾಭರಣವನ್ನು ತೆಗೆದಿದ್ದರು.
ಮದುವೆ ಕಾರ್ಯ ಮುಗಿದ ಮಾರ್ಚ್ 3ರಂದು ಬೆಳಿಗ್ಗೆ 11.15ರ ಸುಮಾರಿಗೆ ಮತ್ತೆ ಬ್ಯಾಂಕ್ಗೆ ತೆರಳಿ ಸುಮಾರು 150–160 ಗ್ರಾಂ ತೂಕದ ಚಿನ್ನಾಭರಣ, ಹಾರ, ಚೈನ್, ಜುಂಕಿ ಹಾಗೂ ಎರಡು ಬಳೆಗಳು ಸೇರಿದಂತೆ ಒಟ್ಟು ₹24 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಟ್ರಾನ್ಸರೆಂಟ್ ಪ್ಲಾಸ್ಟಿಕ್ ಡಬ್ಬಿಯಲ್ಲಿ ಇಟ್ಟು ಲಾಕರ್ನಲ್ಲಿ ಭದ್ರಪಡಿಸಿದ್ದರು.
ಆದರೆ ಮಾರ್ಚ್ 12ರಂದು ಉಳಿದ ಆಭರಣಗಳನ್ನು ಇಡಲು ಮತ್ತೆ ಲಾಕರ್ ತೆರೆದಾಗ ಆ ಪ್ಲಾಸ್ಟಿಕ್ ಡಬ್ಬಿಯೇ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಬ್ಯಾಂಕ್ ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ, ಸಿಸಿಟಿವಿ ದೃಶ್ಯಾಗಳನ್ನ ಪರಿಶೀಲನೆ ನಡೆಸಲಾಗಿದೆ. ಅದರಲ್ಲಿ ವೈದ್ಯೆ ಲಾಕರ್ ರೂಮ್ಗೆ ಜ್ಯುವೆಲ್ಲರಿ ಬಾಕ್ಸ್ ಹಾಗೂ ಬ್ರೌನ್ ಬ್ಯಾಗ್ ಹಿಡಿದು ಪ್ರವೇಶಿಸಿ, ಹೊರಬರುವಾಗ ಕೇವಲ ಬ್ಯಾಗ್ ಮಾತ್ರ ಹೊಂದಿರುವುದು ಗಮನಕ್ಕೆ ಬಂದಿದೆ.
ಬ್ಯಾಂಕ್ ಸಿಬ್ಬಂದಿಯಿಂದ ಸಮರ್ಪಕ ಉತ್ತರ ಸಿಗದ ಹಿನ್ನೆಲೆ, ವೈದ್ಯೆ ಸದಾಶಿವನಗರ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am