ಬ್ರೇಕಿಂಗ್ ನ್ಯೂಸ್
18-03-26 09:44 am HK News Staffer ಕರ್ನಾಟಕ
ಬೆಂಗಳೂರು, ಮಾ 18: ನಗರದ ಆರ್ಎಂವಿ ಎಕ್ಸ್ಟೆನ್ಶನ್ ಪ್ರದೇಶದ ವೈದ್ಯೆಯೊಬ್ಬರು ತಮ್ಮ ಬ್ಯಾಂಕ್ ಲಾಕರ್ನಿಂದ 24 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಾಣೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
57 ವರ್ಷದ ವೈದ್ಯೆ ನೀಡಿದ ದೂರಿನ ಪ್ರಕಾರ, ರಾಷ್ಟ್ರೀಯಕೃತ ಬ್ಯಾಂಕ್ ಶಾಖೆಯಲ್ಲಿ ಸೇವಿಂಗ್ಸ್ ಖಾತೆ ಮತ್ತು ಲಾಕರ್ ಹೊಂದಿದ್ದಾರೆ. ಮಗನ ಮದುವೆ ಹಿನ್ನೆಲೆ ಫೆಬ್ರವರಿ 27ರಂದು ಲಾಕರ್ನಿಂದ ಚಿನ್ನಾಭರಣವನ್ನು ತೆಗೆದಿದ್ದರು.
ಮದುವೆ ಕಾರ್ಯ ಮುಗಿದ ಮಾರ್ಚ್ 3ರಂದು ಬೆಳಿಗ್ಗೆ 11.15ರ ಸುಮಾರಿಗೆ ಮತ್ತೆ ಬ್ಯಾಂಕ್ಗೆ ತೆರಳಿ ಸುಮಾರು 150–160 ಗ್ರಾಂ ತೂಕದ ಚಿನ್ನಾಭರಣ, ಹಾರ, ಚೈನ್, ಜುಂಕಿ ಹಾಗೂ ಎರಡು ಬಳೆಗಳು ಸೇರಿದಂತೆ ಒಟ್ಟು ₹24 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಟ್ರಾನ್ಸರೆಂಟ್ ಪ್ಲಾಸ್ಟಿಕ್ ಡಬ್ಬಿಯಲ್ಲಿ ಇಟ್ಟು ಲಾಕರ್ನಲ್ಲಿ ಭದ್ರಪಡಿಸಿದ್ದರು.
ಆದರೆ ಮಾರ್ಚ್ 12ರಂದು ಉಳಿದ ಆಭರಣಗಳನ್ನು ಇಡಲು ಮತ್ತೆ ಲಾಕರ್ ತೆರೆದಾಗ ಆ ಪ್ಲಾಸ್ಟಿಕ್ ಡಬ್ಬಿಯೇ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಬ್ಯಾಂಕ್ ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ, ಸಿಸಿಟಿವಿ ದೃಶ್ಯಾಗಳನ್ನ ಪರಿಶೀಲನೆ ನಡೆಸಲಾಗಿದೆ. ಅದರಲ್ಲಿ ವೈದ್ಯೆ ಲಾಕರ್ ರೂಮ್ಗೆ ಜ್ಯುವೆಲ್ಲರಿ ಬಾಕ್ಸ್ ಹಾಗೂ ಬ್ರೌನ್ ಬ್ಯಾಗ್ ಹಿಡಿದು ಪ್ರವೇಶಿಸಿ, ಹೊರಬರುವಾಗ ಕೇವಲ ಬ್ಯಾಗ್ ಮಾತ್ರ ಹೊಂದಿರುವುದು ಗಮನಕ್ಕೆ ಬಂದಿದೆ.
ಬ್ಯಾಂಕ್ ಸಿಬ್ಬಂದಿಯಿಂದ ಸಮರ್ಪಕ ಉತ್ತರ ಸಿಗದ ಹಿನ್ನೆಲೆ, ವೈದ್ಯೆ ಸದಾಶಿವನಗರ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm