ಬ್ರೇಕಿಂಗ್ ನ್ಯೂಸ್
18-03-26 09:44 am HK News Staffer ಕರ್ನಾಟಕ
ಬೆಂಗಳೂರು, ಮಾ 18: ನಗರದ ಆರ್ಎಂವಿ ಎಕ್ಸ್ಟೆನ್ಶನ್ ಪ್ರದೇಶದ ವೈದ್ಯೆಯೊಬ್ಬರು ತಮ್ಮ ಬ್ಯಾಂಕ್ ಲಾಕರ್ನಿಂದ 24 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಾಣೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
57 ವರ್ಷದ ವೈದ್ಯೆ ನೀಡಿದ ದೂರಿನ ಪ್ರಕಾರ, ರಾಷ್ಟ್ರೀಯಕೃತ ಬ್ಯಾಂಕ್ ಶಾಖೆಯಲ್ಲಿ ಸೇವಿಂಗ್ಸ್ ಖಾತೆ ಮತ್ತು ಲಾಕರ್ ಹೊಂದಿದ್ದಾರೆ. ಮಗನ ಮದುವೆ ಹಿನ್ನೆಲೆ ಫೆಬ್ರವರಿ 27ರಂದು ಲಾಕರ್ನಿಂದ ಚಿನ್ನಾಭರಣವನ್ನು ತೆಗೆದಿದ್ದರು.
ಮದುವೆ ಕಾರ್ಯ ಮುಗಿದ ಮಾರ್ಚ್ 3ರಂದು ಬೆಳಿಗ್ಗೆ 11.15ರ ಸುಮಾರಿಗೆ ಮತ್ತೆ ಬ್ಯಾಂಕ್ಗೆ ತೆರಳಿ ಸುಮಾರು 150–160 ಗ್ರಾಂ ತೂಕದ ಚಿನ್ನಾಭರಣ, ಹಾರ, ಚೈನ್, ಜುಂಕಿ ಹಾಗೂ ಎರಡು ಬಳೆಗಳು ಸೇರಿದಂತೆ ಒಟ್ಟು ₹24 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಟ್ರಾನ್ಸರೆಂಟ್ ಪ್ಲಾಸ್ಟಿಕ್ ಡಬ್ಬಿಯಲ್ಲಿ ಇಟ್ಟು ಲಾಕರ್ನಲ್ಲಿ ಭದ್ರಪಡಿಸಿದ್ದರು.
ಆದರೆ ಮಾರ್ಚ್ 12ರಂದು ಉಳಿದ ಆಭರಣಗಳನ್ನು ಇಡಲು ಮತ್ತೆ ಲಾಕರ್ ತೆರೆದಾಗ ಆ ಪ್ಲಾಸ್ಟಿಕ್ ಡಬ್ಬಿಯೇ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಬ್ಯಾಂಕ್ ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ, ಸಿಸಿಟಿವಿ ದೃಶ್ಯಾಗಳನ್ನ ಪರಿಶೀಲನೆ ನಡೆಸಲಾಗಿದೆ. ಅದರಲ್ಲಿ ವೈದ್ಯೆ ಲಾಕರ್ ರೂಮ್ಗೆ ಜ್ಯುವೆಲ್ಲರಿ ಬಾಕ್ಸ್ ಹಾಗೂ ಬ್ರೌನ್ ಬ್ಯಾಗ್ ಹಿಡಿದು ಪ್ರವೇಶಿಸಿ, ಹೊರಬರುವಾಗ ಕೇವಲ ಬ್ಯಾಗ್ ಮಾತ್ರ ಹೊಂದಿರುವುದು ಗಮನಕ್ಕೆ ಬಂದಿದೆ.
ಬ್ಯಾಂಕ್ ಸಿಬ್ಬಂದಿಯಿಂದ ಸಮರ್ಪಕ ಉತ್ತರ ಸಿಗದ ಹಿನ್ನೆಲೆ, ವೈದ್ಯೆ ಸದಾಶಿವನಗರ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm